ಬೆಂಗಳೂರು
ಪಕ್ಷದ ರಾಜ್ಯಾಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ಕೊಡುವುದಾಗಿ ತಾವು ಹೇಳಿಲ್ಲ. ಆದರೆ ಅನಾರೋಗ್ಯದಿಂದಾಗಿ ಪಕ್ಷದ ಅಧ್ಯಕ್ಷ ಸ್ಥಾನ ನಿಭಾಯಿಸಲು ಸಾಧ್ಯವಾಗದೇ ಇರುವುದರಿಂದ ಜವಾಬ್ದಾರಿಯನ್ನು ಹಿಂಪಡೆಯುವಂತೆ ವರಿಷ್ಠರೊಂದಿಗೆ ಚರ್ಚೆ ನಡೆಸಿರುವುದಾಗಿ ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ವಿಶ್ವನಾಥ್ ಸ್ಪಷ್ಟಪಡಿಸಿದ್ದಾರೆ.
ನಗರದಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಜ.3 ರಂದು ಪಕ್ಷ ಸಂಘಟನೆ ಕುರಿತು ಸಭೆ ಆಯೋಜಿಸಲಾಗಿದೆ. ಸಭೆಯಲ್ಲಿ ರಾಜ್ಯಾಧ್ಯಕ್ಷರ ಜವಾಬ್ದಾರಿಯನ್ನು ವಾಪಸು ಪಡೆಯುವ ಬಗ್ಗೆ ಎಚ್.ಡಿ.ದೇವೇಗೌಡರ ಜೊತೆ ಮಾತನಾಡುವುದಾಗಿ ಹೇಳಿದರು.
ಹಿರಿಯರು, ರಾಜಕೀಯದಲ್ಲಿ ಹೆಚ್ಚು ಅನುಭವಿಯಾಗಿರುವ ದೇವೇಗೌಡರು, ಸಂಧ್ಯಾಕಾಲದಲ್ಲಿ ತಮಗೆ ಶಾಸಕನಾಗಲು ಅವಕಾಶ ಕೊಟ್ಟಿದ್ದಾರೆ. ಜ.3 ರಂದು ಸಭೆಯಲ್ಲಿ ದೇವೇಗೌಡರು ತೆಗೆದುಕೊಳ್ಳುವ ತೀರ್ಮಾನಕ್ಕೆ ತಾವು ಬದ್ಧ ಎಂದರು.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ