ತುಮಕೂರು:
ಜಿಲ್ಲಾಡಳಿತ ಹಾಗೂ ಸ್ವೀಪ್ ಸಮಿತಿ ತುಮಕೂರು ಸಹಯೋಗದಲ್ಲಿ ಮುಂಬರುವ ಏಪ್ರಿಲ್ 18ರಂದು ನಡೆಯುವ ತುಮಕೂರು ಲೋಕಸಭಾ ಚುನಾವಣಾ ಮತದಾನದ ಬಗ್ಗೆ ತುಮಕೂರಿನ ಜೆಸಿಐ ತುಮಕೂರು ಮೆಟ್ರೋ ವತಿಯಿಂದ ಮತದಾರರಿಗೆ ಅರಿವು ಮೂಡಿಸುವ ಜಾಗೃತಿ ಜಾಥಾ ನಡೆಸಲಾಯಿತು. ಜಾಥಾದಲ್ಲಿ ಸಮಾಜ ಕಲ್ಯಾಣ ಇಲಾಖೆ ಜಂಟಿ ನಿರ್ದೇಶಕ ಡಾ: ಜಿ.ಪಿ. ದೇವರಾಜು, ಪರಿಶಿಷ್ಟ ವರ್ಗಗಳ ಕಲ್ಯಾಣಾಧಿಕಾರಿ ರಾಜ್ಕುಮಾರ್ ಸೇರಿದಂತೆ ವಿದ್ಯಾರ್ಥಿಗಳು ಭಾಗವಹಿಸಿದ್ದರು.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ
