ನೀರಾವರಿ ಆಯೋಗ ಸ್ಥಾಪನೆ : ಸಿಎಂ ಜೋತೆ ಚರ್ಚಿಸಿ ನಿರ್ಧಾರ : ರಮೇಶ್ ಜಾರಕೀಹೊಳಿ

ಬೆಂಗಳೂರು:

       ಮುಂದಿನ 30 ವರ್ಷಗಳ ನೀರಾವರಿ ‌ಯೋಜನೆಗಳ ಅನುಷ್ಠಾನದ  ಉದ್ದೇಶದಿಂದ ಕರ್ನಾಟಕ ರಾಜ್ಯ ನೀರಾವರಿ ಆಯೋಗ ಸ್ಥಾಪನೆ ಕುರಿತಂತೆ ಮುಖ್ಯಮಂತ್ರಿಗಳೊಂದಿಗೆ ಚರ್ಚೆ ಮಾಡುವುದಾಗಿ ಜಲಸಂಪನ್ಮೂಲ ಸಚಿವ ರಮೇಶ್  ಜಾರಕಿಹೊಳಿ‌ ತಿಳಿಸಿದ್ದಾರೆ.

     ರಾಜ್ಯ ಸರ್ಕಾರದ ನಿವೃತ್ತ  ಕಾರ್ಯದರ್ಶಿ ಕ್ಯಾ. ರಾಜಾರಾವ್ ಅವರೊಂದಿಗೆ ರಾಜ್ಯದ ನೀರಾವರಿ ಯೋಜನೆಗಳ  ಕುರಿತು ಚರ್ಚಿಸಿದ ನಂತರ‌ ಮಾತನಾಡಿದ ಸಚಿವರು,  ಕುಡಿಯುವ ನೀರು, ಅಂತರ್ಜಲ ಮತ್ತು  ಔದ್ಯೋಗಿಕ ಕ್ಷೇತ್ರದಲ್ಲಿ ನೀರಿನ ಬಳಕೆ ಕುರಿತಂತೆ ದೂರದೃಷ್ಟಿಯ ನೀಲನಕ್ಷೆ ಸಿದ್ಧಪಡಿಸಲಾಗುವುದು. ಮುಂದಿನ‌ ಮಳೆಗಾಲದಲ್ಲಿ ಅತಿವೃಷ್ಟಿ ತಡೆಗೆ ವ್ಯಾಪಕ‌ ಕ್ರಮ  ಕೈಗೊಳ್ಳಲಾಗಿದೆ. ನಮ್ಮ ನೀರನ್ನು‌ ಉಳಿಸಿಕೊಂಡು ಯೋಜನೆಗಳನ್ನು‌ ಪ್ರಾರಂಭಿಸುತ್ತೇವೆ  ಎಂದರು.

      ನೀರಿನ‌ ಸದ್ಬಳಕೆಗೆ ಅಂತರ ರಾಜ್ಯ ನದಿ ಜೋಡಣೆ ಮಾಡಬೇಕಾದ ಅಗತ್ಯವಿದೆ. ಇದರಿಂದ  ರಾಜ್ಯದ ನೀರಿನ‌ ಪಾಲು ಕೂಡಾ ಹೆಚ್ಚಾಗಲಿದೆ. ಹಾಗಾಗಿ ಕೇಂದ್ರ ಸರ್ಕಾರದ ಜಲಶಕ್ತಿ  ಸಚಿವರನ್ನು ಭೇಟಿ ಮಾಡಿ ಈ‌ ಕುರಿತು ಚರ್ಚಿಸಲಾಗುವುದು ಎಂದು‌ ಸಚಿವರು  ತಿಳಿಸಿದರು. 

ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ

Recent Articles

spot_img

Related Stories

Share via
Copy link
Powered by Social Snap