ಬಳ್ಳಾರಿ ಜಿಲ್ಲೆಗೆ ಬಿಜೆಪಿ ಕೊಡುಗೆ ಏನು: ಎಸ್ಸೆಸ್ ಪ್ರಶ್ನೆ

ದಾವಣಗೆರೆ :

         ಬಳ್ಳಾರಿ ಜಿಲ್ಲೆಯ ಅಭಿವೃದ್ದಿಗೆ ಕಾಂಗ್ರೆಸ್ ಪಕ್ಷದ ಕೊಡುಗೆ ಅಪಾರವಾಗಿದ್ದು, ಬಿಜೆಪಿ ಕೊಡುಗೆ ಏನು ಎಂದು ಮಾಜಿ ಸಚಿವರು, ಹಾಲಿ ಶಾಸಕರು ಹಾಗೂ ಅಖಿಲ ಭಾರತ ವೀರಶೈವ ಮಹಾಸಭಾದ ಅಧ್ಯಕ್ಷರಾದ ಡಾ|| ಶಾಮನೂರು ಶಿವಶಂಕರಪ್ಪನವರು ಪ್ರಶ್ನಿಸಿದರು.
ನಿನ್ನೆ ಮತ್ತು ಇಂದು ಬಳ್ಳಾರಿ ಮೀಸಲು ಲೋಕಸಭಾ ಕ್ಷೇತ್ರದ ಅಭ್ಯರ್ಥಿ ವಿ.ಎಸ್.ಉಗ್ರಪ್ಪನವರ ಪರ ಬಳ್ಳಾರಿ, ಕೂಡ್ಲಿಗಿ, ಹಗರಿಬೊಮ್ಮನಹಳ್ಳಿ ಸೇರಿದಂತೆ ವಿವಿಧ ಭಾಗಗಳಲ್ಲಿ ಪ್ರಚಾರ ನಡೆಸಿ ಹಗರಿಬೊಮ್ಮನಹಳ್ಳಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದರು.

        ಕಾಂಗ್ರೆಸ್ ಪಕ್ಷ ಬಳ್ಳಾರಿ ಜಿಲ್ಲೆಗೆ ಜಿಂದಾಲ್, ಪವರ್ ಜನರೇಷನ್ ನಂತಹ ಉದ್ಯಮಗಳನ್ನು ನೀಡುವುದರ ಜೊತೆಗೆ ಬಳ್ಳಾರಿ ಜಿಲ್ಲೆಯ ಅನೇಕ ಭಾಗಗಳಿಗೆ ಶಾಶ್ವತ ಕುಡಿವ ನೀರಿನ ವ್ಯವಸ್ಥೆ ಕಲ್ಪಿಸಿದೆ ಎಂದ ಅವರು ಈ ಹಿಂದೆ ಎಐಸಿಸಿ ಅಧ್ಯಕ್ಷರಾಗಿದ್ದ ಶ್ರೀಮತಿ ಸೋನಿಯಾಗಾಂಧಿ ಅವರು ಸ್ಪರ್ಧಿಸಿದಾಗ ಭರವಸೆ ನೀಡಿದಂತೆ ವಿಶೇಷ ಪ್ಯಾಕೇಜ್‍ನ್ನು ನೀಡಿ ಅನೇಕ ಅಭಿವೃದ್ಧಿ ಕೆಲಸಗಳನ್ನು ಕೈಗೊಳ್ಳಲಾಯಿತು ಎಂದರು

       ಕಾಂಗ್ರೆಸ್ ಪಕ್ಷ ಅನೇಕ ಜನಪರ ಯೋಜನೆಗಳನ್ನು ರೂಪಿಸುತ್ತಾ ಬಂದಿದೆ. ಬಿಜೆಪಿಯವರು ಪ್ರಕೃತಿದತ್ತವಾಗಿ ಜಿಲ್ಲೆಗೆ ಬಂದ ಮಣ್ಣನ್ನು ನಾಶ ಮಾಡಿ ಜನಸಾಮಾನ್ಯರನ್ನು ಸರ್ವಾಧಿಕಾರಿಯಂತೆ ಆಳ್ವಿಕೆ ನಡೆಸಿದರು. ಬಿಜೆಪಿ ಬಳ್ಳಾರಿ ಜಿಲ್ಲೆಗೆ ಏನು ಕೊಡುಗೆ ನೀಡಿದೆ ಎಂಬುದನ್ನು ತಿಳಿಸಲಿ ಎಂದು ಆಗ್ರಹಿಸಿದರು.

       ಕಾಂಗ್ರೆಸ್ ಪಕ್ಷದ ಕಾರ್ಯಕರ್ತರು ಯಾವುದಕ್ಕೂ ಎಂದೆಗುಂದದೆ ಪಕ್ಷದ ಅಭ್ಯರ್ಥಿ ವಿ.ಎಸ್.ಉಗ್ರಪ್ಪನವರ ಗೆಲುವಿಗೆ ಶ್ರಮಿಸಬೇಕೆಂದು ಕರೆ ನೀಡಿ ಕಾಂಗ್ರೆಸ್ ಪಕ್ಷದ ಸಾಧನೆ ಮತ್ತು ಬಿಜೆಪಿ ದುರಾಡಳಿತ ಬಗ್ಗೆ ಜನತೆಗೆ ತಿಳಿಸಿ ಎಂದರು.

       ಈ ಸಂದರ್ಭದಲ್ಲಿ ವಿಧಾನಪರಿಷತ್ ಸದಸ್ಯ ಕೆ.ಸಿ.ಕೊಂಡಯ್ಯ, ಶಾಸಕ ಭೀಮಾನಾಯ್ಕ, ದಾವಣಗೆರೆ ಜಿಲ್ಲಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ದಿನೇಶ್ ಕೆ.ಶೆಟ್ಟಿ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರುಗಳಾದ ಸೋಮಲಿಂಗಪ್ಪ, ಅಕ್ಕಿ ತೋಟೇಶ್, ಪುರಸಭೆ ಅಧ್ಯಕ್ಷ ರಾಘವೇಂದ್ರ ಮತ್ತಿತರರಿದ್ದರು.

ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ 

 

Recent Articles

spot_img

Related Stories

Share via
Copy link