ಬೆಂಗಳೂರು:
ಸರೋಜಿನಿ ಮಹಿಷಿ ವರದಿ ಜಾರಿಗೆ ಆಗ್ರಹಿಸಿ ಕರ್ನಾಟಕ ಸಂಘಟನೆಗಳ ಒಕ್ಕೂಟ ಗುರುವಾರ ಕರೆ ನೀಡಿರುವ ರಾಜ್ಯ ಬಂದ್ ವಿಫಲವಾಗುವ ಸಾಧ್ಯತೆ ಹೆಚ್ಚಾಗಿದೆ ರಾಜ್ಯ ಬಂದ್ನಲ್ಲಿ ಪಾಲ್ಗೊಳ್ಳಲು ಕನ್ನಡ ಸಂಘಟನೆಗಳ ನಡುವೆ ಪರ ವಿರೋಧ ಅಭಿಪ್ರಾಯ ವ್ಯಕ್ತವಾಗಿರುವುದರಿಂದ ಬಂದ್ ನಿರೀಕ್ಷಿತ ಪರಿಣಾಮ ಬೀರುವ ಸಾಧ್ಯತೆ ಕಡಿಮೆಯಾಗಿದೆ ಕರ್ನಾಟಕ ಸಂಘಟನೆಗಳ ಒಕ್ಕೂಟ ಕರೆ ನೀಡಿರುವ ಬಂದ್ಗೆ ಕರ್ನಾಟಕ ರಕ್ಷಣಾ ವೇದಿಕೆ ಕನ್ನಡ ಸಂಘಟನೆಗಳ ಒಕ್ಕೂಟ ಸೇರಿದಂತೆ ಹಲವು ಸಂಘಟನೆಗಳು ಬೆಂಬಲ ವ್ಯಕ್ತಪಡಿಸಿಲ್ಲ. ಆದರೆ, ಕರ್ನಾಟಕ ಸಂಘಟನೆಗಳ ಒಕ್ಕೂಟ ನಮಗೆ 600ಕ್ಕೂ ಹೆಚ್ಚು ಸಂಘಟನೆಗಳು ಬೆಂಬಲ ನೀಡಿದೆ ಎಂದು ತಿಳಿಸಿದೆ.
ಕರ್ನಾಟಕ ರಕ್ಷಣಾ ವೇದಿಕೆ ಅಧ್ಯಕ್ಷ ನಾರಾಯಣಗೌಡ, ಕನ್ನಡ ಚಳವಳಿ ವಾಟಾಳ್ ಪಕ್ಷದ ನಾಯಕ ವಾಟಾಳ್ ನಾಗರಾಜ್ ಸೇರಿದಂತೆ ಹಲವು ಕನ್ನಡಪರ ಹೋರಾಟಗಾರರು ಬಂದ್ನಿಂದ ದೂರ ಉಳಿದಿರುವುದರಿಂದ ರಾಜ್ಯ ಬಂದ್ನಿಂದ ಹೆಚ್ಚಿನ ಪರಿಣಾಮ ಉಂಟಾಗುವ ಸಾಧ್ಯತೆಗಳಿಲ್ಲ.
ಕನ್ನಡ ಸಂಘಟನೆಗಳ ಒಕ್ಕೂಟಕ್ಕೆ ಬೆಳಿಗ್ಗೆ 6 ರಿಂದ ಸಂಜೆ 6 ಗಂಟೆಯ ತನಕ ಬಂದ್ ನಡೆಸಲು ಪುರಭವನದ ಮುಂಭಾಗ ಅವಕಾಶ ಕಲ್ಪಿಸಲಾಗಿದ್ದು, ಒಕ್ಕೂಟದ ಸದಸ್ಯರು ನಗರದ ಟೌನ್ಹಾಲ್ನಿಂದ ಫ್ರೀಡಂಪಾರ್ಕ್ತನಕ ಬೃಹತ್ ಪ್ರತಿಭಟನಾ ಜಾಥಾ ನಡೆಸಲು ತೀರ್ಮಾನಿಸಿವೆ.
ರಾಜ್ಯದಲ್ಲಿ ಕನ್ನಡಿಗರಿಗೆ ಉದ್ಯೋಗ ನೀಡಲು ಸರೋಜಿನಿ ಮಹಿಷಿ ವರದಿ ಜಾರಿಗೊಳಿಸಬೇಕು ಎಂದು ಒತ್ತಾಯಿಸಿ ಕರ್ನಾಟಕ ಸಂಘಟನೆಗಳ ಒಕ್ಕೂಟ ಮೌರ್ಯ ಸರ್ಕಲ್ ಬಳಿ ಪ್ರತಿಭಟನೆ ನಡೆಸುತ್ತಿದ್ದು, ಪ್ರತಿಭಟನೆಯು ನಾಳೆಗೆ 100ನೇ ದಿನಕ್ಕೆ ಕಾಲಿಡುತ್ತಿರುವ ಹಿನ್ನಲೆಯಲ್ಲಿ ಬಂದ್ ಕರೆ ನೀಡಲಾಗಿದೆ.
ನಾಳಿನ ಬಂದ್ಗೆ ಕರ್ನಾಟಕ ರಕ್ಷಣಾ ವೇದಿಕೆಯು ಬೆಂಬಲ ನೀಡಿಲ್ಲ.”ರಕ್ಷಣಾ ವೇದಿಕೆ 1999ರಿಂದಲೂ ವರದಿ ಜಾರಿಗೆ ಹೋರಾಟ ಮಾಡುತ್ತಲೇ ಬಂದಿದೆ. ಅದೇ ವಿಚಾರವಾಗಿ ಕೆಲ ಸಂಘಟನೆಗಳು ಹೋರಾಟ ಮಾಡಲು ಮುಂದಾಗಿವೆ. ಸರೋಜಿನಿ ಮಹಿಷಿ ವರದಿ ಜಾರಿ ಹೋರಾಟಕ್ಕೆ ನಮ್ಮ ಬೆಂಬಲವಿದೆ. ಆದರೆ, ಕರ್ನಾಟಕ ಬಂದ್ಗೆ ನಮ್ಮ ಬೆಂಬಲವಿಲ್ಲ” ಎಂದು ಅಧ್ಯಕ್ಷ ಟಿ. ಎ. ನಾರಾಯಣ ಗೌಡ ಹೇಳಿದ್ದಾರೆ.
ಕನ್ನಡ ಚಳವಳಿ ನಾಯಕ ವಾಟಾಳ್ ನಾಗರಾಜ್ ಅವರು ಕನ್ನಡಿಗರಿಗೆ ಉದ್ಯೋಗ ನೀಡಲು ಸರೋಜಿನಿ ಮಹಿಷಿ ವರದಿ ಜಾರಿಗೊಳಿಸಬೇಕು ಎಂದು ವರ್ಷಾನುಗಟ್ಟಳೆ ಹೋರಾಟ ಮಾಡಿದ್ದು ಬರುವ ವಿಧಾನಸಭಾ ಅಧಿವೇಶದ ವೇಳೆ ಮುಖ್ಯಮಂತ್ರಿಗಳು ಸಚಿವರನ್ನು ವಿಧಾನಸೌಧಕ್ಕೆ ಬಿಡದಂತೆ ಹೋರಾಟ ಮಾಡಲಾಗುವುದು ನಾಲಿನ ಬಂದ್ ಬೆಂಬಲ ನೀಡುವುದಿಲ್ಲ ಎಂದರು.
ಬೃಹತ್ ಬೆಂಗಳೂರು ಹೋಟೆಲ್ಗಳ ಸಂಘ ಬಂದ್ಗೆ ಬೆಂಬಲ ನೀಡಿಲ್ಲ.”ಕರ್ನಾಟಕ ಬಂದ್ಗೆ ನಮ್ಮ ಸಂಘವು ಬೆಂಬಲ ನೀಡುವುದಿಲ್ಲ. ಗ್ರಾಹಕರ ಹಿತದೃಷ್ಟಿಯಿಂದ ಹೋಟೆಲ್ ತರೆಯಲಾಗುತ್ತದೆ. ಎಲ್ಲಾ ಹೋಟೆಲ್ ತೆರೆದಿರುತ್ತದೆ” ಎಂದು ಸಂಘದ ಅಧ್ಯಕ್ಷ ಪಿ.ಸಿ.ರಾವ್ ಹೇಳಿದ್ದಾರೆ.
ಕೆಎಸ್ಆರ್ಟಿಸಿ, ಬಿಎಂಟಿಸಿ ನೌಕರರು ನೈತಿಕ ಬೆಂಬಲ ನೀಡಿದ್ದಾರೆ. ಬಸ್ ಸಂಚಾರವನ್ನು ಸ್ಥಗಿತಗೊಳಿಸುವುದಿಲ್ಲ ಎಂದು ಹೇಳಿದ್ದಾರೆ. ಆದರೆ, ಕಲ್ಲು ತೂರಾಟದಂತಹ ಪ್ರಕರಣಗಳು ನಡೆದರೆ ಬಸ್ ಸಂಚಾರ ಸ್ಥಗಿತಗೊಳ್ಳುವ ಸಾಧ್ಯತೆ ಇದೆ.
ಆಟೋಗಳ ಸಂಚಾರ
ಆದರ್ಶ ಆಟೋ ಯೂನಿಯನ್, ಪೀಸ್ ಆಟೋ ಯೂನಿಯನ್ ಸೇರಿದಂತೆ ವಿವಿಧ ಆಟೋ ಚಾಲಕರ ಸಂಘಟನೆಗಳು ಬಂದ್ಗೆ ಬೆಂಬಲವನ್ನು ನೀಡಿವೆ.ಹಾಗಾಗಿ ಆಟೋಗಳ ಸಂಚಾರದಲ್ಲಿ ವ್ಯತ್ಯಯ ಉಂಟಾಗುವ ಸಾಧ್ಯತೆಯಿದೆ.
ಫೆಬ್ರವರಿ 13ರಂದು ಕರ್ನಾಟಕ ಬಂದ್ ಕರೆ ನೀಡಲಾಗಿದೆ. ಆದರೆ, ಬೆಂಗಳೂರು ನಗರದಲ್ಲಿ ನಮ್ಮ ಮೆಟ್ರೋ ಸೇವೆ ಎಂದಿನಂತೆ ಇರಲಿದೆ. ರೈಲು ಸಂಚಾರದಲ್ಲಿ ಯಾವುದೇ ವ್ಯತ್ಯಯ ಉಂಟಾಗುವುದಿಲ್ಲ.
ಬಂದ್ಗೆ ಬೆಂಬಲ
ಲಾರಿ ಮಾಲೀಕರ ಸಂಘ, ಓಲಾ ಮತ್ತು ಊಬರ್ ಚಾಲಕರ ಸಂಘ, ಬೀದಿ ವ್ಯಾಪಾರಿಗಳು, ಕೋಡಿಹಳ್ಳಿ ಚಂದ್ರಶೇಖರ್ ನೇತೃತ್ವದ ರೈತ ಸಂಘ, ಆದರ್ಶ ಆಟೋ ಯೂನಿಯನ್, ಪೀಸ್ ಆಟೋ ಯೂನಿಯನ್, ಜೈ ಭಾರತ ಚಾಲಕರ ಸಂಘ, ಸಾರಥಿ ಸೇನೆ ಸೇರಿದಂತೆ 600 ಸಂಘಟನೆಗಳು ಬಂದ್ಗೆ ಬೆಂಬಲ ನೀಡಿವೆ.
ರಜೆ ಅಧಿಕಾರ ಡಿಡಿಪಿಐಗೆ
ಸರ್ಕಾರಿ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ ಮಾಡಿಲ್ಲ. ಪರಿಸ್ಥಿತಿ ನೋಡಿಕೊಂಡು ರಜೆ ನೀಡುವ ಅಧಿಕಾರವನ್ನು ಡಿಡಿಪಿಐಗಳಿಗೆ ನೀಡುವ ಸಾಧ್ಯತೆ ಇದೆ.ಖಾಸಗಿ ಶಾಲೆಗಳು ಸಹ ಬಂದ್ ಬೆಂಬಲಿಸಿಲ್ಲ. ಆದ್ದರಿಂದ, ಶಾಲಾ-ಕಾಲೇಜುಗಳು ಬಂದ್ ಆಗುವುದಿಲ್ಲ.ವಿವಿಧ ಪರೀಕ್ಷೆಗಳು ನಡೆಯುತ್ತಿದ್ದು, ಯಾವುದೇ ಪರೀಕ್ಷೆಗಳನ್ನು ಇದುವರೆಗೂ ಮುಂದೂಡಲಾಗಿಲ್ಲ
ಓಲಾ, ಊಬರ್
ಬಂದ್ಗೆ ಕೆಲವು ಸಂಘಟನೆಗಳು ನೈತಿಕ ಬೆಂಬಲವನ್ನು ನೀಡಿವೆ. ಪರಿಸ್ಥಿತಿ ನೋಡಿಕೊಂಡು ಸರ್ಕಾರಿ ಬಸ್ ಸಂಚಾರದ ಬಗ್ಗೆ ತೀರ್ಮಾನ ತೆಗೆದುಕೊಳ್ಳಲಾಗುತ್ತದೆ ಎಂದು ಅಧಿಕಾರಿಗಳು ಹೇಳಿದ್ದಾರೆ.ಓಲಾ ಮತ್ತು ಊಬರ್ ಚಾಲಕರು ಬಂದ್ಗೆ ಬೆಂಬಲ ನೀಡಿದ್ದಾರೆ. ಆದ್ದರಿಂದ, ಟ್ಯಾಕ್ಸಿ ಇರುವುದಿಲ್ಲ. ಆದರೆ, ವಿಮಾನ ನಿಲ್ದಾಣದ ಟ್ಯಾಕ್ಸಿಗಳು ಸಂಚಾರ ನಡೆಸಲಿವೆ.ಪೆಟ್ರೋಲ್ ಬಂಕ್ ಮಾಲೀಕರು ಬಂದ್ ಬೆಂಬಲಿಸಿಲ್ಲ. ಬಂಕ್ ತೆರೆದಿರುತ್ತದೆ.ತುರ್ತು ಸೇವೆಗಳಾದ ಆಸ್ಪತ್ರೆ, ಮೆಡಿಕಲ್, ಆಂಬ್ಯುಲೆನ್ಸ್ಗೆ ಬಂದ್ನಿಂದ ವಿನಾಯಿತಿ ಇದೆ.
ಬಿಎಂಟಿಸಿ ಮತ್ತು ಕೆ ಎಸ್ ಆರ್ ಟಿ ಸಿ ಬಂದ್ ಗೆ ಬೆಂಬಲ ನೀಡಿಲ್ಲವಾದರೂ ವಿಕೋಪದ ಸಂದರ್ಭದಲ್ಲಿ ಸಂಚಾರ ಸ್ಥಗಿತಗೊಳಿಸಬಹುದಾಗಿದೆ ಮತ್ತು ಈ ಸಂಬಂಧ ಮುನ್ನೆಚ್ಚರಿಕೆ ತೆಗೆದುಕೊಳ್ಳುವಂತೆ ಜಿಲ್ಲಾ ಡಿಪೊಗಳಿಗೆ ಸಾರಿಗೆ ಸಂಸ್ಥೆ ಎಂಡಿ ಕಳಸದ್ ಅವರು ಸೂಚನೆ ನೀಡಿದ್ದಾರೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ
