- ಬೆಂಗಳೂರು:
ಎಲ್ಲ ಚುನಾವಣೆಗಳು ಕೂಡ ಎಲ್ಲ ಪಕ್ಷಗಳಿಗೆ ಪ್ರತಿಷ್ಠೆಯಾಗಿರುತ್ತದೆ. ಯಾವುದೇ ಒಂದು ಕ್ಷೇತ್ರದ ಚುನಾವಣೆ ಮಾತ್ರ ಪ್ರತಿಷ್ಠೆಯಾಗುವುದಿಲ್ಲ’ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ತಿಳಿಸಿದ್ದಾರೆ.ಬುಧವಾರ ತಮ್ಮ ಸದಾಶಿವನಗರ ನಿವಾಸದಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿ.ಕೆ ಶಿವಕುಮಾರ್ ಅವರು ಹೇಳಿದ್ದಿಷ್ಟ.
‘ಪ್ರಮುಖ ಚುನಾವಣೆ ಆಗಲಿ ಉಪ ಚುನಾವಣೆ ಆಗಲಿ ಎಲ್ಲ ಪಕ್ಷಗಳಿಗೂ ಪ್ರತಿಷ್ಠೆಯೇ. ಈ ಹಿಂದೆ ಹೇಗೆ ಚುನಾವಣೆಗಳನ್ನು ನಡೆಸಿದ್ದೇವೋ ಅದೇ ರೀತಿ ಈ ಚುನಾವಣೆಯನ್ನು ನಡೆಸುತ್ತೇವೆ. ನಾನು ಅಧ್ಯಕ್ಷನಾದರೂ ಪಕ್ಷದ ಕಾರ್ಯಕರ್ತ. ಕೇವಲ ಶಿರಾ ಕ್ಷೇತ್ರವಾಗಲಿ, ರಾಜರಾಜೇಶ್ವರಿ ನಗರ ವಾಗಲಿ ಮಾತ್ರ ಪ್ರತಿಷ್ಠೆ ಆಗುವುದಿಲ್ಲ.
ಚುನಾವಣೆಯಲ್ಲಿ ಸ್ಪರ್ಧಿಸಲು ಟಿಕೆಟ್ ಕೋರಿ ಅರ್ಜಿಗಳು ಬಂದಿವೆ. ನಾವು ನಾಯಕರ ಜತೆ ಚರ್ಚಿಸಿ ತೀರ್ಮಾನ ಕೈಗೊಳ್ಳುತ್ತೇವೆ .ಜೆಡಿಎಸ್ ಒಂದು ಪಕ್ಷವಾಗಿದ್ದು, ಅವರು ಅವರ ರಾಜಕಾರಣ ಮಾಡುತ್ತಾರೆ. ನಾವು ನಮ್ಮ ರಾಜಕಾರಣ ಮಾಡುತ್ತೇವೆ. ಅದೇರೀತಿ ಅವರ ಚುನಾವಣೆ ಅವರು ಮಾಡುತ್ತಾರೆ, ನಮ್ಮ ಚುನಾವಣೆ ನಾವು ಮಾಡುತ್ತೇವೆ.’
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ
![](https://prajapragathi.com/wp-content/uploads/2020/05/DKS4_EPS_.gif)