ರೋಟರಿಯಿಂದ ವಿಶ್ವ ಪೋಲಿಯೋ ದಿನಾಚರಣೆ ಅಂಗವಾಗಿ ಜಾಗೃತಿ ಜಾಥಾ

ಹಿರಿಯೂರು :

         ರೋಟರಿಯ ಸತತ ಸಾಧನೆಯ ಫಲವಾಗಿ ವಿಶ್ವದ ಅನೇಕ ರಾಷ್ಟ್ರಗಳು ಇಂದು ಪೋಲಿಯೋ ಮುಕ್ತವಾಗಿವೆ. ಕಳೆದ ಆರು ವರ್ಷಗಳಲ್ಲಿ ಭಾರತದಲ್ಲಿ ಒಂದೇ ಒಂದು ಪೋಲಿಯೋ ಪ್ರಕರಣ ವರದಿಯಾಗಿಲ್ಲ. ಭಾರತ ಈಗ ಪೋಲಿಯೋ ಮುಕ್ತ ರಾಷ್ಟ್ರವಾಗಿದೆ. ಪೋಲಿಯೋ ಮಹಾಮಾರಿ ಮರುಕಳಿಸದೇ ಇರಲು ಎಲ್ಲಾ ಪೋಷಕರು ತಮ್ಮ ಐದು ವರ್ಷದೊಳಗಿನ ಮಕ್ಕಳಿಗೆ ತಪ್ಪದೇ ಪೋಲಿಯೋ ಲಸಿಕೆ ಹಾಕಿಸಬೇಕು ಎಂಬುದಾಗಿ ರೋಟರಿ ಸಂಸ್ಥೆಯ ಅಧ್ಯಕ್ಷ ಎಂ.ಎಸ್.ರಾಘವೇಂದ್ರ ಕರೆ ನೀಡಿದರು.

          ನಗರದ ರೋಟರಿ ಸಂಸ್ಥೆ ನೇತೃತ್ವದಲ್ಲಿ ವಿಶ್ವ ಪೋಲಿಯೋ ದಿನಾಚರಣೆ ಅಂಗವಾಗಿ ವಿದ್ಯಾರ್ಥಿಗಳೊಂದಿಗೆ ಹಮ್ಮಿಕೊಳ್ಳಲಾಗಿದ್ದ ಜಾಗೃತಿ ಜಾಥಾವನ್ನು ಉದ್ಘಾಟಿಸಿ ಅವರು ಮಾತನಾಡಿದರು. ಈ ಸಂದರ್ಭದಲ್ಲಿ ರೋಟರಿ ಕಾರ್ಯದರ್ಶಿ ಎಚ್.ವೆಂಕಟೇಶ್, ಎಂ.ವಿ.ಹರ್ಷ, ಬಿ.ಕೆ.ನಾಗಣ್ಣ, ಮಹಾಬಲೇಶ್ವರಶೆಟ್ಟಿ., ಹೆಚ್.ಎಸ್.ಪ್ರಶಾಂತ್ ಇನ್ನು ಮುಂತಾದವರು ಭಾಗವಹಿಸಿದ್ದರು.

ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ 

Recent Articles

spot_img

Related Stories

Share via
Copy link
Powered by Social Snap