ತಿಮ್ಮಪ್ಪನ ಮೊರೆ ಹೋದ ಯುಡಿಯೂರಪ್ಪ..!!

ಬೆಂಗಳೂರು

      ಎರಡು ಕ್ಷೇತ್ರಗಳ ಉಪ ಚುನಾವಣೆ ಹಿನ್ನಲೆಯಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ಬಿ ಎಸ್ ಯಡಿಯೂರಪ್ಪ ತಿರುಪತಿ ತಿಮ್ಮಪ್ಪನ ಮೊರೆ ಹೋಗಿದ್ದಾರೆ. ಜ್ಯೋತಿಷಿಗಳ ಸಲಹೆ ಮೇರೆಗೆ ಇಂದು ತಿರುಪತಿಗೆ ತೆರಳಿರುವ ಅವರು ಇಂದು ಬೆಳಗ್ಗೆ ವಿಶೇಷ ಪೂಜೆಯಲ್ಲಿ ಪಾಲ್ಗೊಂಡಿದ್ದಾರೆ.

      ಬೆಳಗ್ಗೆ ದೇವರ ದರ್ಶನದ ಬಳಿಕ ಹುಬ್ಬಳ್ಳಿಗೆ ತೆರಳಲಿರುವ ಯಡಿಯೂರಪ್ಪ ನಾಳೆಯಿಂದ ಉಪ ಚುನಾವಣೆಯಲ್ಲಿ ಅಧಿಕೃತ ಪ್ರಚಾರ ಕಾರ್ಯದಲ್ಲಿ ಭಾಗವಹಿಸಲಿದ್ದಾರೆ ಎನ್ನಲಾಗಿದೆ.

     ಒಂದೆಡೆ ಮುಖ್ಯಮಂತ್ರಿ ಕುಮಾರಸ್ವಾಮಿ ಕುಟುಂಬ ಚಿಕ್ಕಮಗಳೂರಿನಲ್ಲಿ ಪೂಜೆ ಹೋಮ ಹವನ ನಡೆಸುತ್ತಿದ್ದರೆ ಮತ್ತೊಂದೆಡೆ ಯಡಿಯೂರಪ್ಪ ತಿರುಪತಿಯತ್ತ ತೆರಳಿದ್ದಾರೆ. ಎಲ್ಲರ ಚಿತ್ತವೂ ಚುನಾವಣೆ ಫಲಿತಾಂಶ ದತ್ತ ಇದ್ದರೂ ಆತಂಕ , ಭಯ ಎಲ್ಲರನ್ನು ಕಾಡುತ್ತಿದೆ ಎನ್ನಲಾಗಿದೆ.

      ಇವೆಲ್ಲಕ್ಕಿಂತ ಭಿನ್ನವಾಗಿ ಕಾಂಗ್ರೆಸ್ ನಾಯಕರು ಯಾವುದಕ್ಕೂ ತಲೆ ಕೆಡಿಸಕೊಳ್ಳದೆ ಅಭ್ಯರ್ಥಿಗಳ ಪರ ಪ್ರಚಾರಕ್ಕೆ ಧುಮುಕಿದ್ದಾರೆ.

   ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ 

Recent Articles

spot_img

Related Stories

Share via
Copy link
Powered by Social Snap