ಹುಬ್ಬಳ್ಳಿ
ರಾಜ್ಯ ರಾಜಕೀಯದಲ್ಲಿ ಆಪರೇಷನ್ ಕಮಲ ಎಂಬ ಕೆಟ್ಟ ಪರಂಪರೆಯನ್ನು ಹುಟ್ಟುಹಾಕಿದ್ದೇ ಬಿ.ಎಎಸ್. ಯಡಿಯೂರಪ್ಪ ಎಂದು ಸಮನ್ವಯ ಸಮಿತಿ ಅಧ್ಯಕ್ಷ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಗಂಭೀರ ಆರೋಪ ಮಾಡಿದ್ದಾರೆ.
ಹುಬ್ಬಳ್ಳಿಯಲ್ಲಿಂದು ಸುದ್ದಿಗಾರರ ಜೊತೆ ಮಾತನಾಡಿದ ಅವರು, ಪ್ರಜಾಪ್ರಭುತ್ವದಲ್ಲಿ ನಂಬೆಕೆಯಿಲ್ಲದಿದ್ದರೆ ಇಂತಹ ಕೆಟ್ಟ ಮತ್ತು ಅಹಸ್ಯಕರ ಘಟನೆಗಳು ನಡೆಯುತ್ತವೆ ಎಂದು ಕಿಡಿಕಾರಿದ್ದಾರೆ. ಬಿಜೆಪಿ ಮುಖಂಡರಿಗೆ ಅವರ ಪಕ್ಷದ ಶಾಸಕರ ಮೇಲೆ ನಂಬಿಕೆ ಇಲ್ಲ ಅದಕ್ಕೆ ಅವರನ್ನು ಹರಿಯಾಣದ ಹೊಟೇಲ್ ನಲ್ಲಿ ಕೂಡಿ ಹಾಕಿದ್ದಾರೆ ಎಂದು ಅವರು ಆರೋಪಿಸಿದರು.
ರಾಜ್ಯ ರಾಜಕೀಯ ಬಿಕ್ಕಟ್ಟಿಗೆ ಸಿದ್ದರಾಮಯ್ಯ ನವರೇ ಕಾರಣ ಎಂಬ ಆರೋಪವಿದೆಯಲ್ಲ ಎಂಬ ಪ್ರಶ್ನೆಗೆ ಪ್ರತಿಕ್ರಿಯೆ ನೀಡಿದ ಅವರು, ಬಿಜೆಪಿ ನಾಯಕರಿಗೆ ನಿಮ್ಮ ಶಾಸಕರನ್ನು ಬೇರೆ ರಾಜ್ಯಕ್ಕೆ ಕರೆದುಕೊಂಡು ಹೋಗಿ ಕೂಡಿಹಾಕಿ ಎಂದು ನಾನು ಹೇಳಿಕೊಟ್ಟಿದ್ದೇನಾ? ಎಂದು ವರದಿಗಾರರಿಗೆ ಮರು ಪ್ರಶ್ನೆ ಹಾಕಿದರು. ಇದೆ 18 ರಂದು ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆ ಕರೆಯಲಾಗಿದ್ದು ಸಭೆಗೆ ಎಲ್ಲ ಶಾಸಕರು ಬರಲಿದ್ದಾರೆ ಯಾವುದೇ ಶಾಸಕರು ಗೈರು ಹಾಜರಾಗುವುದಿಲ್ಲ ಎಂಬ ವಿಶ್ವಾಸ ವ್ಯಕ್ತಪಡಿಸಿದರು
ಬಿಜೆಪಿ ಏನೇ ಕುತಂತ್ರ ಮಾಡಿದರೂ ರಾಜ್ಯದ ಮೈತ್ರಿ ಸರ್ಕಾರ ಬಲಿಷ್ಠವಾಗಿದ್ದು ಅವಧಿ ಪೂರ್ಣ ಮಾಡಲಿದೆ ಎಂದು ಹೇಳಿದರು.
ಕೆಲವು ಸಚಿವರು ಬಿಕ್ಕಟ್ಟು ನಿವಾರಣೆಗಾಗಿ ಮಂತ್ರಿಸ್ಥಾನಕ್ಕೆ ರಾಜೀನಾಮೆ ಕೊಡುವುದಾಗಿ ಹೇಳಿರುವ ಬಗ್ಗೆ ಮಾತಾನಾಡಿದ ಅವರು, ಶಾಸಕಾಂಗ ಸಭೆಯಲ್ಲಿ ಎಲ್ಲ ವಿಚಾರವನ್ನು ವಿವರವಾಗಿ ಚರ್ಚೆ ಮಾಡುತ್ತೇವೆ ಎಂದು ಅವರು ಪರೋಕ್ಷ, ಹಾರಿಕೆಯ ಉತ್ತರ ನೀಡಿದರು.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ
