ಶಾಸಕ ಜಮೀರ್ ಅಹಮದ್ ಕ್ವಾರಂಟೈನ್ ಸಾಧ್ಯತೆ ..!

ಬೆಂಗಳೂರು

      ಕೊರೊನಾ ಸೋಂಕು ತಗುಲಿ ಮೃತ ಪಟ್ಟ ಮಹಿಳೆಯ ಅಂತ್ಯಕ್ರಿಯೆಯಲ್ಲಿ ಪಾಲ್ಗೊಂಡ ಚಾಮರಾಜಪೇಟೆಯ ಶಾಸಕ ಜಮೀರ್ ಅಹ್ಮದ್ ಖಾನ್‍ರನ್ನು ಕ್ವಾರಂಟೈನ್‍ಗೆ ಒಳಪಡಿಸುವ ಸಾಧ್ಯತೆ ಇದೆ. ವಿಪತ್ತು ನಿರ್ವಹಣೆ ಕಾನೂನಿನಂತೆ ಕೇವಲ 22 ಜನರು ಮಾತ್ರ ಶವಸಂಸ್ಕಾರದಲ್ಲಿ ಭಾಗವಹಿಸಲು ಅವಕಾಶವಿದೆ. 

      ಆದರೆ, ಎರಡು ದಿನದ ಹಿಂದೆ ನಡೆದಿದ್ದ ವೃದ್ಧೆಯ ಶವಸಂಸ್ಕಾರದಲ್ಲಿ 22 ಜನಕ್ಕಿಂತ ಹೆಚ್ಚಿನ ಜನ ಭಾಗವಹಿಸಿದ್ದ ಬಗ್ಗೆ ಸರ್ಕಾರಕ್ಕೆ ಮಾಹಿತಿ ಬಂದಿದೆ.ವಿಶ್ವ ಆರೋಗ್ಯ ಸಂಸ್ಥೆಯ ನಿಯಮಕ್ಕಿಂತ ಹೆಚ್ಚು ಜನ ಮಹಿಳೆಯ ಅಂತ್ಯಕ್ರಿಯೆಯಲ್ಲಿ ಭಾಗಿಯಾಗಿದ್ದು ಸೋಂಕು ಹರಡಿರುವ ಸಾಧ್ಯತೆಗಳು ಹೆಚ್ಚಾಗಿವೆ. ಹೀಗಾಗಿ ಮನೆಯಲ್ಲಿ ಪ್ರತ್ಯೇಕವಾಗಿರುವಂತೆ ಸೂಚಿಸುವ ಸಾಧ್ಯತೆಯಿದೆ

      ಅಂತ್ಯಕ್ರಿಯೆ ಸಮಯದಲ್ಲಿ ಸಾಮಾಜಿಕ ಅಂತರ ಹಾಗೂ ಅಗತ್ಯ ಕ್ರಮಗಳನ್ನು ತೆಗೆದುಕೊಂಡಿದ್ದರು. ಆದರೆ, ಮುಂಜಾಗ್ರತೆ ಕ್ರಮವಾಗಿ ಜಮೀರ್ ಅಹ್ಮದ್ ಕ್ಯಾರಂಟೈನ್ ನಲ್ಲಿ ಇಡುವ ಸಾಧ್ಯತೆ ಇದೆ ಎಂದು ಆರೋಗ್ಯ ಸಚಿವ ಶ್ರೀ ರಾಮುಲು ತಿಳಿಸಿದ್ದಾರೆ

    ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ

Recent Articles

spot_img

Related Stories

Share via
Copy link
Powered by Social Snap