ತುರುವೇಕೆರೆ :
ಪಟ್ಟಣ ಸೇರಿದಂತೆ ತಾಲೂಕಿನ ವಿವಿದೆಡೆ ಮಂಗಳವಾರ ರಾತ್ರಿ ಗುಡುಗು, ಮಿಂಚು. ಬಿರುಗಾಳಿ ಸಹಿತ ಆಲಿಕಲ್ಲು ಮಳೆ ಸುರಿದಿದೆ.
ರಾತ್ರಿ ಮಳೆಗಾಳಿಗೆ ಪಟ್ಟಣದ ಮಾಯಸಂದ್ರ ರಸ್ತೆಯಲ್ಲಿ ಮರದಕೊಂಬೆ ಮುರಿದು ಬಿದ್ದು ಕೆಲ ಹೊತ್ತು ವಾಹನ ಸಂಚಾರ ಅಸ್ತವ್ಯಸ್ತವಾಗಿತ್ತು ನಂತರ ಮರದ ಕೊಂಬೆಯನ್ನು ತೆರವುಗೊಳಿಸಿ ಸುಗಮ ಸಂಚಾರಕ್ಕೆ ಅನುವು ಮಾಡಿಕೊಡಲಾಯಿತು. ಮಳೆಯಿಂದ ಮುಂಗಾರು ಬೆಳೆಗಳನ್ನು ಬಿತ್ತಲು ಅನುಕೂಲವಾಗಲಿದೆ. ತಾಲೂಕಿನ ಸಂಪಿಗೆ 4.4, ಮಾಯಸಂದ್ರದಲ್ಲಿ 14.4, ದಂಡಿನಶಿವರ 5.0, ತುರುವೇಕೆರೆ ಪಟ್ಟಣ 48.4, ಮಿ.ಮಿ ಮಳೆಯಾಗಿದೆ ಎಂದು ಮಳೆ ಮಾಪಕದಲ್ಲಿ ವರದಿಯಾಗಿದೆ.
ವಿದ್ಯುತ್ ವ್ಯತ್ಯಯ: ಮಂಗಳವಾರ ರಾತ್ರಿ ಗುಡುಗು, ಮಿಂಚು ಸಹಿತ ಬಿರುಗಾಳಿ ಮಳೆಯಿಂದಾಗಿ ಪಟ್ಟಣ ಹಾಗೂ ಸುತ್ತಮುತ್ತಲಿನ ಗ್ರಾಮಗಳಲ್ಲಿ ರಾತ್ರಿ ಇಡೀ ಸಂಪೂರ್ಣ ವಿದ್ಯುತ್ ವ್ಯತ್ಯಯ ಉಂಟಾಗಿ ಸಾರ್ವಜನಿಕರು ಕತ್ತಲಲ್ಲೇ ಕಾಲ ಕಳೆಯುವಂತಾಗಿತ್ತು. ಪಟ್ಟಣದ ಕೆಲವು ಮನೆಗಳಲ್ಲಿ ಟಿವಿಗಳು ಸುಟ್ಟುಹೋಗಿವೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ
![](https://prajapragathi.com/wp-content/uploads/2019/05/1tvk2-rain.gif)