32ನೇ ವಾರ್ಷಿಕೋತ್ಸವ ಸಮಾರಂಭ

ಹೊನ್ನಾಳಿ:

        ಶಿಕ್ಷಣ ಎಂದರೆ ಮಗುವಿಗೆ ಶಿಸ್ತು, ಸಮಯ ಪಾಲನೆ, ಸಂಸ್ಕಾರ, ಜೀವನ ಕೌಶಲ್ಯಗಳನ್ನು ಕಲಿಸುವುದಾಗಿದೆ ಎಂದು ತಾಪಂ ಇಒ ಕೆ.ಸಿ. ಮಲ್ಲಿಕಾರ್ಜುನ್ ಹೇಳಿದರು.

      ಸೋಮವಾರ ನಡೆದ ಇಲ್ಲಿನ ಭಾರತೀಯ ವಿದ್ಯಾ ಸಂಸ್ಥೆಯ 32ನೇ ವಾರ್ಷಿಕೋತ್ಸವ ಸಮಾರಂಭದಲ್ಲಿ ಅವರು ಮಾತನಾಡಿದರು.
ಶಿಕ್ಷಣ ಕೇವಲ ಮಗುವಿನ ಅಂಕ ಗಳಿಕೆಗಷ್ಟೇ ಸೀಮಿತವಾಗಬಾರದು. ಪಠ್ಯದ ಜತೆಗೆ ಪಠ್ಯೇತರ ಚಟುವಟಿಕೆಗಳತ್ತ ಗಮನಹರಿಸಿ ಮಗುವಿನ ಸರ್ವತೋಮುಖ ಅಭಿವೃದ್ಧಿಗೆ ಶಿಕ್ಷಣ ಸಂಸ್ಥೆಗಳು ಒತ್ತು ನೀಡಬೇಕು ಎಂದು ತಿಳಿಸಿದರು.

       ಹೊನ್ನಾಳಿಯ ಭಾರತೀಯ ವಿದ್ಯಾ ಸಂಸ್ಥೆಯು ಕಳೆದ 32 ವರ್ಷಗಳಿಂದ ಸಾಮಾಜಿಕ ಸಂಸ್ಥೆಯಾಗಿ ಶೈಕ್ಷಣಿಕ ಕ್ಷೇತ್ರದಲ್ಲಿ ತನ್ನದೇ ಆದ ಛಾಪು ಮೂಡಿಸಿದೆ. ಶಿಕ್ಷಣ ಇಲಾಖೆ ಮಾಡಬೇಕಾದ ಕೆಲಸವನ್ನು ಶಾಲೆಯ ಆಡಳಿತ ಮಂಡಳಿ ಮಾಡುತ್ತಿರುವುದು ಶ್ಲಾಘನೀಯ. 800ಕ್ಕೂ ಅಧಿಕ ವಿದ್ಯಾರ್ಥಿಗಳು ಈ ಶಾಲೆಯಲ್ಲಿ ಗುಣಾತ್ಮಕ ಶಿಕ್ಷಣ ಪಡೆಯುತ್ತಿದ್ದಾರೆ. ಶಾಲೆಯಲ್ಲಿ ಮಕ್ಕಳಿಗೆ ಮತ್ತು ಶಿಕ್ಷಕರಿಗೆ ಆಡಳಿತ ಮಂಡಳಿ ಶಿಸ್ತು, ಸಮಯ ಪಾಲನೆ ಕಲಿಸುತ್ತಿದೆ.

       ಉತ್ತಮ ನಾಗರೀಕರಾಗಲು ಬೇಕಾದ ಶಿಕ್ಷಣವನ್ನು ಶಾಲೆಯಲ್ಲಿ ನೀಡುತ್ತಿರುವುದು ಅನುಕರಣೀಯ. ಕೆಲವು ಶಿಕ್ಷಣ ಸಂಸ್ಥೆಗಳು ನಾಯಿಕೊಡೆಗಳ ರೀತಿ ಹುಟ್ಟುತ್ತಿವೆ. ಅವುಗಳ ಉದ್ದೇಶ ಹಣ ಗಳಿಕೆ ಒಂದೇ ಆಗಿದೆ. ಅಂಥ ಶಿಕ್ಷಣ ಸಂಸ್ಥೆಗಳಿಗೆ ಪೋಷಕರು ಮಾರುಹೋಗದೇ ಭಾರತೀಯ ವಿದ್ಯಾ ಸಂಸ್ಥೆಯಂಥ ಸೇವಾ ಮನೋಭಾವದ ಶಿಕ್ಷಣ ಸಂಸ್ಥೆಗಳಲ್ಲಿ ತಮ್ಮ ಮಕ್ಕಳಿಗೆ ಶಿಕ್ಷಣ ಕೊಡಿಸುವ ಮೂಲಕ ನಾಗರೀಕ ಜಗತ್ತಿಗೆ ಉತ್ತಮ ಮಕ್ಕಳನ್ನು ನೀಡುವತ್ತ ಚಿಂತನೆ ನಡೆಸಬೇಕು ಎಂದು ವಿವರಿಸಿದರು.

       ಕ್ಷೇತ್ರ ಶಿಕ್ಷಣಾಧಿಕಾರಿ ಜೆ.ಇ. ರಾಜೀವ್ ಮಾತನಾಡಿ, ಭಾರತೀಯ ವಿದ್ಯಾ ಸಂಸ್ಥೆಯು ಮಾತೃಭಾಷೆಯಲ್ಲಿಯೇ ಗುಣಾತ್ಮಕ ಪ್ರಾಥಮಿಕ ಶಿಕ್ಷಣವನ್ನು ನೀಡುತ್ತಿರುವುದು ಶ್ಲಾಘನೀಯ. ಪೋಷಕರೂ ಆಂಗ್ಲ ಮಾಧ್ಯಮ ಶಿಕ್ಷಣದತ್ತ ಆಕರ್ಷಿತರಾಗದೇ ಈ ಶಾಲೆಯಲ್ಲಿ ಕನ್ನಡ ಮಾಧ್ಯಮ ಶಿಕ್ಷಣ ಕೊಡಿಸುತ್ತಿರುವುದು ಅಭಿನಂದನೀಯ ಎಂದರು.

         ಬಿವಿಎಸ್ ಆಡಳಿತ ಮಂಡಳಿಯು ಹಿರಿಯರು, ಅನುಭವಿಗಳಿಂದ ಕೂಡಿದ್ದು ಎಲ್ಲಾ ಪದಾಧಿಕಾರಿಗಳೂ ಕೇವಲ ಆಡಳಿತಾತ್ಮಕವಾಗಿ ಗುರುತಿಸಿಕೊಳ್ಳದೇ ಶೈಕ್ಷಣಿಕವಾಗಿಯೂ ಗುರುತಿಸಿಕೊಳ್ಳುತ್ತಿರುವುದು ಶಾಲೆಯ ಅಭಿವೃದ್ಧಿಯ ದೃಷ್ಟಿಯಿಂದ ಅತ್ಯುತ್ತಮವಾಗಿದೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.ಪ್ರಾಥಮಿಕ ಶಾಲಾ ಮುಖ್ಯ ಶಿಕ್ಷಕ ಆರ್. ತಿಮ್ಮೇಶ್ ಶಾಲಾ ವಾರ್ಷಿಕ ವರದಿ ವಾಚಿಸಿದರು.

           ಭಾರತೀಯ ವಿದ್ಯಾ ಸಂಸ್ಥೆಯ ಅಧ್ಯಕ್ಷ ಎಲ್.ಎಸ್. ವೈಶ್ಯರ್, ಉಪಾಧ್ಯಕ್ಷ ಎಚ್. ಲಕ್ಷ್ಮಣ್‍ರಾವ್, ಕಾರ್ಯದರ್ಶಿ ಡಾ. ಎಚ್.ಪಿ.ರಾಜ್‍ಕುಮಾರ್, ಸಹ ಕಾರ್ಯದರ್ಶಿ ಎಚ್. ಲಿಂಗಯ್ಯ, ಖಜಾಂಚಿ ಎಚ್.ಎನ್. ಬಸವರಾಜಪ್ಪ, ನಿರ್ದೇಶಕರಾದ ಎಚ್.ಎಂ. ಅರುಣ್‍ಕುಮಾರ್, ಕೆ. ಗಣೇಶ್, ಹಾಲೇಶ್ ಕುಂಕೋವದ, ಸದಸ್ಯರಾದ ಅಂದಾನಿ ನೀಲಕಂಠಪ್ಪ, ಜಯರತ್ನ ಮಹಾಲಿಂಗಪ್ಪ, ಪ್ರೌಢಶಾಲಾ ಮುಖ್ಯ ಶಿಕ್ಷಕಿ ದೇವೀರಮ್ಮ ಹಾಗೂ ಇತರ ಶಿಕ್ಷಕರು, ಸಿಬ್ಬಂದಿ ಉಪಸ್ಥಿತರಿದ್ದರು.
ಪ್ರತಿಭಾ ಕಾರಂಜಿ ಮತ್ತು ಕ್ರೀಡಾಕೂಟದಲ್ಲಿ ಜಿಲ್ಲಾ ಮಟ್ಟಕ್ಕೆ ಆಯ್ಕೆಯಾದ ವಿದ್ಯಾರ್ಥಿಗಳು, 7ನೇ ತರಗತಿ, ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ಸಾಧನೆ ಮಾಡಿದ ವಿದ್ಯಾರ್ಥಿಗಳಿಗೆ ಸ್ಮರಣಿಕೆ ನೀಡಿ ಗೌರವಿಸಲಾಯಿತು. ಶಾಲೆಯ ವಿದ್ಯಾರ್ಥಿಗಳು ನಡೆಸಿಕೊಟ್ಟ ¸

 ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ 

Recent Articles

spot_img

Related Stories

Share via
Copy link