ಬೆಂಗಳೂರು
ಸರ್ಕಾರ ಮರುಜೀವ ನೀಡಲು ಹೊರಟಿರುವ ಸ್ಟೀಲ್ ಬ್ರಿಡ್ಜ್ (ಉಕ್ಕು ಸೇತುವೆ)ಯೋಜನೆಗೆ ವಿಪಕ್ಷ ಬಿಜೆಪಿ ವಿರೋಧ ವ್ಯಕ್ತಪಡಿಸಿದೆ.ಈ ಹಿಂದೆ ಸ್ಟೀಲ್ ಬ್ರಿಡ್ಜ್ ಯೋಜನೆಗೆ ವಿರೋಧ ವ್ಯಕ್ತಪಡಿಸಿದ್ದ ಕುಮಾರಸ್ವಾಮಿ ಅವರೇ ಈಗ ಯೋಜನೆ ನಿರ್ಮಾಣಕ್ಕೆ ನಿರ್ಣಯ ಕೈಗೊಂಡಿರುವುದು ಸರಿಯಲ್ಲ. ಈ ಸಂಬಂಧ ಸದನದಲ್ಲಿ ಚರ್ಚಿಸಿ ಮುಂದಿನ ಕ್ರಮಕೈಗೊಳ್ಳಬೇಕು ಎಂದು ಬಿಜೆಪಿ ರಾಜ್ಯಾಧ್ಯಕ್ಷ ಹಾಗೂ ವಿಧಾನಸಭೆ ವಿಪಕ್ಷ ನಾಯಕ ಬಿ.ಎಸ್.ಯಡಿಯೂರಪ್ಪ ಒತ್ತಾಯಿಸಿದ್ದಾರೆ.
ನಗರದ ಪಕ್ಷದ ಕಚೇರಿಯಲ್ಲಿಂದು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕಾಂಗ್ರೆಸ್ ಸರ್ಕಾರದಲ್ಲಿ ಸೇತುವೆ ಯೋಜನೆ ವಿವಾದಕ್ಕೊಳಗಾಗಿತ್ತು. ಯಾರಿಗೂ ಬೇಡವಾದ ಯೋಜನೆಯನ್ನು ಕುಮಾರಸ್ವಾಮಿ ತರಾತುರಿಯಲ್ಲಿ ನಿರ್ಮಾಣ ಮಾಡಲು ಹೊರಟಿರುವುದು ಯಕ್ಷಪ್ರಶ್ನೆಯಾಗಿದೆ. ಸರ್ಕಾರದ ಈ ನಡೆ ಪ್ರಜಾತಂತ್ರ ವ್ಯವಸ್ಥೆಗೆ ಮಾರಕವಾಗಿದ್ದು, ಸೇತುವೆ ನಿರ್ಮಾಣದ ಸಾಧಕಬಾಧಕಗಳ ಬಗ್ಗೆ ವಿಧಾನಸಭೆಯಲ್ಲಿ ಸಮಗ್ರ ಚರ್ಚೆಯಾಗಬೇಕು ಎಂದು ಅವರು ಆಗ್ರಹಿಸಿದ್ದಾರೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ
