ಜ.29 ಮತ್ತು ಜ.30ಕ್ಕೆ ಜೆಡಿಎಸ್ ರಾಷ್ಟ್ರೀಯ ಕಾರ್ಯಕಾರಿಣಿ

ಬೆಂಗಳೂರು

          ಮುಂಬರುವ ಲೋಕಸಭೆಗೆ ತಯಾರಿ ನಡೆಸುತ್ತಿರುವ ಜೆಡಿಎಸ್, ರಾಷ್ಟ್ರೀಯ ಕಾರ್ಯಕಾರಿಣಿ ಸಭೆಯನ್ನು ಜನವರಿ 29 ಮತ್ತು ಜ.30 ರಂದು ನಡೆಸಲು ಚಿಂತನೆ ನಡೆಸಿದೆ.

         ನಗರದ ಅರಮನೆ ಮೈದಾನದಲ್ಲಿ ಕಾರ್ಯಕಾರಣಿ ಸಭೆ ನಡೆಯಲಿದ್ದು, ಮುಂಬರುವ ಲೋಕಸಭೆ ಚುನಾವಣೆ ಸಂಬಂಧ ಪಕ್ಷದ ಸಂಘಟನೆ, ಮುಂದಿನ ಹೋರಾಟದ ರೂಪುರೇಷೆಗಳು ಹಾಗೂ ಕಾರ್ಯಕ್ರಮಗಳ ಬಗ್ಗೆ ಕಾರ್ಯಕಾರಿಣಿ ಸಭೆಯಲ್ಲಿ ಚರ್ಚಿಸಿ ನಿರ್ಧಾರ ಕೈಗೊಳ್ಳುವ ಸಾಧ್ಯತೆಗಳಿವೆ ಎಂದು ಮೂಲಗಳು ತಿಳಿಸಿವೆ.

          ರಾಷ್ಟ್ರೀಯ ಕಾರ್ಯಕಾರಿಣಿ ಸಭೆಯ ಸಂದರ್ಭದಲ್ಲೇ ಜೆಡಿಎಸ್ ವರಿಷ್ಠರು ಬೆಂಗಳೂರಿನಲ್ಲಿ ದೊಡ್ಡ ಪ್ರಮಾಣದ ಜೆಡಿಎಸ್ ಪಕ್ಷದ ರ್ಯಾಲಿ ನಡೆಸಲು ಚಿಂತನೆ ನಡೆಸಿದ್ದಾರೆ. ಅಲ್ಲದೆ, ಇದೇ ವೇಳೆ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಅವರನ್ನು ಅಭಿನಂದಿಸುವ ಸಮಾರಂಭ ಆಯೋಜಿಸುವ ಬಗ್ಗೆಯೂ ಕೂಡ ಪಕ್ಷದಲ್ಲಿ ಚರ್ಚೆ ನಡೆಸಲಾಗುತ್ತಿದೆ ಎಂದು ಮೂಲಗಳು ಹೇಳಿವೆ.

          ರಾಷ್ಟ್ರೀಯ ಕಾರ್ಯಕಾರಿಣಿ ಸಭೆಯಲ್ಲಿ ರಾಷ್ಟ್ರಮಟ್ಟದ ಎಲ್ಲಾ ನಾಯಕರು, ವಿವಿಧ ರಾಜ್ಯಗಳ ಪಕ್ಷದ ಪದಾಧಿಕಾರಿಗಳು ಭಾಗವಹಿಸುವುದರಿಂದ ಮುಂಬರುವ ಲೋಕಸಭೆ ಚುನಾವಣೆಯ ಬಗ್ಗೆ ಗಂಭೀರ ಚರ್ಚೆ ನಡೆಯಲಿದೆ ಎಂದು ಹೇಳಲಾಗುತ್ತಿದೆ.

           ರಾಜ್ಯದಲ್ಲಿ ಜೆಡಿಎಸ್-ಕಾಂಗ್ರೆಸ್ ಮೈತ್ರಿ ಸರ್ಕಾರ ಅಸ್ತಿತ್ವದಲ್ಲಿರುವುದರಿಂದ ಲೋಕಸಭೆ ಚುನಾವಣೆ ಪೂರ್ವ ಮೈತ್ರಿಯನ್ನು ಕಾಂಗ್ರೆಸ್‍ನೊಂದಿಗೆ ಮಾಡಿಕೊಳ್ಳುವ ಬಗ್ಗೆಯೂ ಗಂಭೀರ ಚರ್ಚೆ ನಡೆಸಲಾಗುತ್ತದೆ. ಇದಲ್ಲದೆ, ರಾಜ್ಯ ಹಾಗೂ ಇತರೆ ರಾಜ್ಯಗಳಲ್ಲೂ ಪಕ್ಷವನ್ನು ತಳಮಟ್ಟದಿಂದ ಸಂಘಟನೆ ಮಾಡಲು ಅಗತ್ಯವಿರುವ ಕಾರ್ಯಕ್ರಮಗಳನ್ನು ರೂಪಿಸುವ ಬಗ್ಗೆಯೂ ಸಮಾಲೋಚನೆ ನಡೆಸಲಾಗುತ್ತಿದೆ ಎಂದು ಪಕ್ಷದ ಮೂಲಗಳು ತಿಳಿಸಿವೆ.

        ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ 

Recent Articles

spot_img

Related Stories

Share via
Copy link