ದಾವಣಗೆರೆ:
ಬರುವ ಏಪ್ರಿಲ್ 4ರಂದು ನಡೆಯಲಿರುವ `ಸ್ಫೂರ್ತಿ ಯುವ ಉತ್ಸವ’ ಪ್ರಯುಕ್ತ ನಗರದ ರಾಮ್ ಅಂಡ್ ಕೋ ವೃತ್ತದಲ್ಲಿ ದವನ್ ಇನ್ಸ್ಟಿಟ್ಯೂಟ್ ಆಫ್ ಅಡ್ವಾನ್ಸ್ಡ್ ಮ್ಯಾನೇಜ್ಮೆಂಟ್ ಸ್ಟಡೀಸ್ನ ವಿದ್ಯಾರ್ಥಿಗಳು `ಸೆಲ್ಕೊಹಾಲಿಕ್’ ಬೀದಿ ನಾಟಕವನ್ನು ವಿದ್ಯಾರ್ಥಿಗಳು ಪ್ರದರ್ಶಿಸಿದರು.
ಅತಿಯಾಗಿ ಮೊಬೈಲ್ ಬಳಕೆ ಮಾಡುತ್ತಿರುವುದರಿಂದ ಉಂಟಾಗುತ್ತಿರುವ ದುಷ್ಪರಿಣಾಮದ ಬಗ್ಗೆ ನಾಟಕದ ಮೂಲಕ ಜನರ ಕಣ್ತೆರೆಸಿದರು.ಸ್ಫೂರ್ತಿ ಯುವ ಉತ್ಸವ’ದ ಹಿನ್ನೆಲೆಯಲ್ಲಿ `ವಿದ್ಯಾರ್ಥಿಗಳಲ್ಲಿ ಸಾಮಾಜಿಕ ಹೊಣೆಗಾರಿಕೆ’ ತತ್ವದಡಿ ಕಾಲೇಜಿನ ಬಿ.ಕಾಂ, ಬಿ.ಬಿ.ಎಂ, ಬಿ.ಸಿ.ಎ ಮತ್ತು ಎಂ.ಕಾಂ ವಿದ್ಯಾರ್ಥಿಗಳು ಬೀದಿ ನಾಟಕ ಪ್ರದರ್ಶಿಸುತ್ತಿದ್ದಾರೆ. 10 ತಂಡಗಳನ್ನು ರಚಿಸಲಾಗಿದ್ದು, ಸಾಮಾಜಿಕ ಕಳಕಳಿಯ ವಿಷಯವನ್ನು ಆಯ್ಕೆ ಮಾಡಿಕೊಂಡು, ಅದರ ಕಾರಣ, ಸಮಸ್ಯೆ ಮತ್ತು ನಿವಾರಣೆ ಹೇಗೆ ಎಂಬ ಬಗ್ಗೆ ಮಾಹಿತಿ ಕಲೆ ಹಾಕಿ ಕಿರು ನಾಟಕ ತಯಾರಿಸಿದ್ದಾರೆ. ಅದನ್ನು ನಗರದ ಸಾರ್ವಜನಿಕ ಸ್ಥಳಗಳಲ್ಲಿ ಪ್ರದರ್ಶನ ಮಾಡುತ್ತಿದ್ದಾರೆ.
ದವನ್ ಕಾಲೇಜಿನ ದ್ವಿತೀಯ ಬಿಸಿಎ ವಿದ್ಯಾರ್ಥಿಗಳು `ಪ್ಲಾಸ್ಟಿಕ್ ಬಳಕೆ ನಿಷೇಧಿಸಿ, ಭೂಮಿಯನ್ನು ರಕ್ಷಿಸಿ’ ಎಂಬ ವಿಷಯಾಧಾರಿತ `ನುಕ್ಕಡ್’ ಬೀದಿ ನಾಟಕವನ್ನು ಮಂಗಳವಾರ ಯುಬಿಡಿಟಿ ಕಾಲೇಜಿನ ಆವರಣದಲ್ಲಿ ಪ್ರದರ್ಶಿಸಿದರು.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ
