ಸಿದ್ಧರಾಮಯ್ಯ ಅವರ ಟೀಕೆಗಳಿಗೆ ಪ್ರತಿಕ್ರಿಯಿಸುವ ಅಗತ್ಯವಿಲ್ಲ: ಸಿ ಎಂ

ಬೆಂಗಳೂರು:

        ಮಾಜಿ ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು ಕಳೆದ ಚುನಾವಣೆಯಲ್ಲಿ ಚಾಮುಂಡೇಶ್ವರಿ ಕ್ಷೇತ್ರದಲ್ಲಿ ರಾಹು ಕೇತುಗಳು ಒಂದಾಗಿ ತಮ್ಮನ್ನು ಸೋಲಿಸಿದರು ಎಂಬ ಟೀಕೆಗೆ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಪ್ರತಿಕ್ರಯಿಸಿ, ಸಿದ್ಧರಾಮಯ್ಯ ಅವರು ಭಾವನೆಗಳನ್ನು ಹೊರಹಾಕಿದ್ದಾರೆ. ಅದಕ್ಕೆ ಪ್ರತಿಕ್ರಿಯಿಸುವ ಅಗತ್ಯವಿಲ್ಲ ಎಂದರು.

        ವಿಧಾನಸೌಧದ ಮುಂಭಾಗದಲ್ಲಿ ಬೆಂಗಳೂರಿನಿಂದ ಮೈಸೂರಿಗೆ ವಿಂಟೇಜ್ ಕಾರು ರ್ಯಾಲಿಗೆ ಹಸಿರು ನಿಶಾನೆ ತೋರಿದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಿದ್ಧರಾಮಯ್ಯ ಅವರಿಗೆ ಯಾವ ಕಾರಣಕ್ಕೆ ಯಾರನ್ನು ದೃಷ್ಟಿಯಲ್ಲಿಟ್ಟುಕೊಂಡು ರಾಹು ಕೇತುಗಳು ಒಂದಾಗಿ ಸೋಲಿಸದರು ಎಂಬ ಹೇಳಿಕೆ ನೀಡಿದ್ದಾರೋ ಗೊತ್ತಿಲ್ಲ. ಹಾಗಾಗಿ ಈ ಹೇಳಿಕೆ ಬಗ್ಗೆ ಪ್ರತಿಕ್ರಿಯಿಸಲ್ಲ ಎಂದರು.

         ಕಳೆದ 3-4 ತಿಂಗಳಿಂದ ಸಮ್ಮಿಶ್ರ ಸರ್ಕಾರಕ್ಕೆ ಬಿಸಿ ತುಪ್ಪ ಎನಿಸಲಾಗುತ್ತಿದೆ. ಕಳೆದ ಮೂರು ತಿಂಗಳಿಂದ ಬಿಸಿ ತುಪ್ಪದ ರುಚಿ ನೋಡಲು ಮಾಧ್ಯಮಗಳೇ ಅವಕಾಶ ಮಾಡಿಕೊಟ್ಟಿವೆ. ಈಗ ಮತ್ತೊಂದು ಬಿಸಿ ತುಪ್ಪದ ವಿಚಾರವನ್ನು ಮಾಧ್ಯಮಗಳು ಪ್ರಸ್ತಾಪಿಸುತ್ತಿವೆ ಎಂದರು.

ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ

 

Recent Articles

spot_img

Related Stories

Share via
Copy link
Powered by Social Snap