ದೇಶದ ಆರು ವಿಮಾನ ನಿಲ್ದಾಣಗಳನ್ನು ಸಾರ್ವಜನಿಕ – ಖಾಸಗಿ ಪಾಲುದಾರಿಕೆಗೆ ಸಂಪುಟ ಸಮ್ಮತಿ : ರವಿಶಂಕರ್ ಪ್ರಸಾದ್

ಬೆಂಗಳೂರು

         ದೇಶದ ಆರು ವಿಮಾನ ನಿಲ್ದಾಣಗಳನ್ನು ಸಾರ್ವಜನಿಕ – ಖಾಸಗಿ ಪಾಲುದಾರಿಕೆಯಲ್ಲಿ ಗುತ್ತಿಗೆ ನೀಡಲು ಕೇಂದ್ರ ಸಚಿವ ಸಂಪುಟ ಸಮ್ಮತಿಸಿದೆ. ಮಂಗಳೂರು, ಅಹ್ಮದಾಬಾದ್, ಜೈಪುರ್, ಲಕ್ನೋ, ಗುವಾಹತಿ ಮತ್ತು ತಿರುವನಂತಪುರಂ ವಿಮಾನ ನಿಲ್ದಾಣಗಳ ಅಭಿವೃದ್ಧಿ ಹಾಗೂ ಕಾರ್ಯ ನಿರ್ವಹಣೆಗಾಗಿ ಸಾರ್ವಜನಿಕ-ಖಾಸಗಿ ಮಾದರಿಯಲ್ಲಿ ಗುತ್ತಿಗೆ ನೀಡಲು ತಾತ್ವಿಕ ಅಂಗೀಕಾರ ನೀಡಲಾಗಿದೆ ಎಂದು ಕೇಂದ್ರ ಕಾನೂನು ಸಚಿವ ರವಿಶಂಕರ್ ಪ್ರಸಾದ್ ತಿಳಿಸಿದ್ದಾರೆ.

       ಗೃಹ ಸಚಿವಾಲಯದ ವ್ಯಾಪ್ತಿಯಲ್ಲಿ ಎನಿಮಿ ಷೇರುಗಳ ಮಾರಾಟ ಕುರಿತು ನಿಯಮಾವಳಿ ಮತ್ತು ವ್ಯವಸ್ಥೆ ರೂಪಿಸಲು ಸಹ ಅಂಗೀಕಾರ ನೀಡಲಾಗಿದೆ. ಕರ್ನಾಟಕದ ಪಡೂರ್‍ನಲ್ಲಿ ಕಾರ್ಯತಂತ್ರ ಪೆಟ್ರೋಲಿಯಂ ಮೀಸಲು ಸಂಗ್ರಹ-ಎಸ್‍ಪಿಆರ್ ವ್ಯವಸ್ಥೆ ನಿರ್ಮಿಸಲು ಕೇಂದ್ರ ಸಚಿವ ಸಂಪುಟ ಅಂಗೀಕಾರ ನೀಡಿದೆ. ಇದರಲ್ಲಿ ಒಟ್ಟಾರೆ 2.5 ದಶಲಕ್ಷ ಮೆಟ್ರಿಕ್ ಟನ್ ಪೆಟ್ರೋಲ್ ಸಂಗ್ರಹ ಸಾಮಥ್ರ್ಯವಿದ್ದು, ರಾಷ್ಟ್ರೀಯ ತೈಲ ಸಂಸ್ಥೆಗಳು ನಿರ್ವಹಣೆ ಮಾಡಲಿವೆ. ಸಾರ್ವಜನಿಕ ಮತ್ತು ಖಾಸಗಿ ಪಾಲುದಾರಿಕೆ ಮಾದರಿಯಲ್ಲಿ ಈ ವ್ಯವಸ್ಥೆ ರೂಪಿಸಲಾಗುತ್ತಿದ್ದು, ಇದರಿಂದ ಸರ್ಕಾರದ ತೈಲ ಹೊರೆ ಕಡಿಮೆಯಾಗುವ ನಿರೀಕ್ಷೆ ಇದೆ.

ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ 

 

Recent Articles

spot_img

Related Stories

Share via
Copy link
Powered by Social Snap