ಮೀಸಲಾತಿ ವಿರೋಧಿ ಪಕ್ಷಗಳಿಗೆ ತಕ್ಕ ಪಾಠ ಕಲಿಸಿ: ವೀರಯ್ಯ

ಬೆಂಗಳೂರು

        ನಾಳೆ ನಡೆಯಲಿರುವ ಲೋಕಸಭೆ ಮತ್ತು ವಿಧಾನಸಭೆಯ ಉಪಚುನಾವಣೆಯಲ್ಲಿ ಪರಿಶಿಷ್ಟ ಜಾತಿ, ಪರಿಶಿಷ್ಟ ವರ್ಗಗಳ ಮತದಾರರು ಕಾಂಗ್ರೆಸ್ ಜೆಡಿಎಸ್ ಅಭ್ಯರ್ಥಿಗಳನ್ನು ಸೋಲಿಸಿ ಬಿಜೆಪಿ ಅಭ್ಯರ್ಥಿಗಳನ್ನು ಗೆಲ್ಲಿಸುವ ಮೂಲಕ ಮೀಸಲಾತಿ ವಿರೋಧಿ ಪಕ್ಷಗಳಿಗೆ ತಕ್ಕ ಪಾಠ ಕಲಿಸಬೇಕೆಂದು ಬಿಜೆಪಿ ಎಸ್‍ಸಿ ಮೋರ್ಚಾ ಅಧ್ಯಕ್ಷ ಡಿ.ಎಸ್ ವೀರಯ್ಯ ಹೇಳಿದ್ದಾರೆ.

        ಸುದ್ದಿಗಾರರ ಜತೆ ಮಾತನಾಡಿದ ಅವರು, ರಾಜ್ಯದಲ್ಲಿರುವ ಸಮ್ಮಿಶ್ರ ಸರ್ಕಾರ ಮೀಸಲಾತಿ ವಿರೋಧಿ ನೀತಿ ಅನುಸರಿಸುತ್ತಿದೆ. ಸಿದ್ದರಾಮಯ್ಯನವರು ಮುಖ್ಯಮಂತ್ರಿಯಾಗಿದ್ದಅವಧಿಯಲ್ಲಿ ಪರಿಶಿಷ್ಟ ಜಾತಿ ಪರಿಶಿಷ್ಟ ವರ್ಗಗಳಿಗೆ ವಿಶೇಷ ಘಟಕ ಯೋಜನೆಯಡಿ 5 ವರ್ಷಗಳ ಅವಧಿಯಲ್ಲಿ ಮೀಸಲಿಟ್ಟ 86 ಸಾವಿರ ಕೋಟಿ ರೂಪಾಯಿ ಹಣದಲ್ಲಿ 66 ಸಾವಿರ ಕೋಟಿ ರೂಪಾಯಿ ಮಾತ್ರ ಖರ್ಚಾಗಿದ್ದು, ಉಳಿದ 36 ಸಾವಿರ ಕೋಟಿ ರೂಪಾಯಿ ಹಣ ವಿನಿಯೋಗ ಕುರಿತು ಉತ್ತರ ನೀಡಬೇಕಿದೆ ಎಂದು ಹೇಳಿದರು.

          ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಈ ಹಿಂದೆ ಬಡ್ತಿ ಮೀಸಲಾತಿಗೆ ತಂದ ಸುಗ್ರೀವಾಜ್ಞೆಗೆ ಯಥಾವತ್ತಾಗಿ ಬೆಂಬಲಿಸಿ,ರಾಷ್ಟ್ರಪತಿಯವರಿಂದ ಅಂಕಿತ ಪಡೆದಿದ್ದರೂ ಈ ಸರ್ಕಾರ ಯಥಾವತ್ತಾಗಿ ಜಾರಿ ಮಾಡಲು ಏಕೆ ಕ್ರಮ ಜರುಗಿಸುತ್ತಿಲ್ಲ ಎಂದು ಪ್ರಶ್ನಿಸಿದರು.

ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ 

Recent Articles

spot_img

Related Stories

Share via
Copy link
Powered by Social Snap