ತುರ್ತು ವೈದ್ಯಕೀಯ ಸಲಹೆಗೆ ವಿನೂತನ ಮಾರ್ಗ ಪರಿಚಯಿಸಿದ ಕೆ ಎಸ್ ಹೆಗ್ಡೆ ಆಸ್ಪತ್ರೆ..!

ಮಂಗಳೂರು:

    ಕೊರೋನಾ ಹರಡುವಿಕೆ ನಿಯಂತ್ರಿಸಲು ದೇಶದಲ್ಲಿ ಲಾಕ್ ಡೌನ್ ಘೋಷಣೆಯ ಬಳಿಕ ಜಿಲ್ಲೆಯಲ್ಲಿ ಹಲವು ಆಸ್ಪತ್ರೆಗಳು ತಮ್ಮ ಹೊರ ರೋಗಿಗಳಿಗೆ ನೀಡುವ ಚಿಕಿತ್ಸಾ ಸೇವೆಯನ್ನು ಸ್ಥಗಿತಗೊಳಿಸಿವೆ. ಇದರಿಂದ ಅನೇಕ ರೋಗಿಗಳಿಗೆ ಸಕಾಲಕ್ಕೆ ವೈದ್ಯರ ಸಲಹೆ ಔಷಧಗಳು ಸಿಗದೆ ತೊಂದರೆಗೀಡಾಗಿದ್ದಾರೆ.

   ಇದಕ್ಕಾಗಿ ನಗರದ ದೇರಳಕಟ್ಟೆಯಲ್ಲಿರುವ ಕೆ‌.ಎಸ್‌.ಹೆಗ್ಡೆ ಆಸ್ಪತ್ರೆ ವಿನೂತನವಾಗಿ ರೋಗಿಗಳ ಸೇವೆಗೆ ನಿಂತಿದೆ. ಸಾರ್ವಜನಿಕರಿಗೆ ಓಡಾಟಕ್ಕೆ ಅವಕಾಶ ಇಲ್ಲದ ಕಾರಣ ಕೆ‌.ಎಸ್‌.ಹೆಗ್ಡೆ ಆಸ್ಪತ್ರೆ ಆನ್ ಲೈನ್ ನ ಮೂಲಕ ರೋಗಿಗಳ ಸೇವೆಗೆ ಮುಂದಾಗಿದೆ.

  ಆಸ್ಪತ್ರೆಯ ಎಲ್ಲಾ ವಿಭಾಗದ ವೈದ್ಯರ ವಾಟ್ಸಪ್ ನಂಬರ್ ನೀಡಿದ್ದು, ಆಯಾ ವಿಭಾಗದ ವೈದ್ಯರಿಗೆ ಯಾವುದಾದರೂ ರೋಗಗಳಿಂದ ಬಳಲುತ್ತಿರುವ ರೋಗಿಗಳು ವಾಟ್ಸಾಪ್ ನಲ್ಲಿ ತಮ್ಮ ರೋಗ ಲಕ್ಷಣ ಮಾಹಿತಿನ್ನು ರವಾನಿಸಬೇಕು. ಇದರೊಂದಿಗೆ ಹೆಸರು, ವಯಸ್ಸು, ಲಿಂಗ, ತೂಕ, ಖಾಯಿಲೆಯ ಮಾಹಿತಿ ಹಾಗೂ ಹಳೆಯ ಪ್ರಿಸ್ಕ್ರಿಪ್ಷನ್ ಗಳಿದ್ದರೆ ತಪ್ಪದೆ ನೀಡಬೇಕು. ಇವೆಲ್ಲವೂ ನೋಡಿದ ಬಳಿಕ ಅಗತ್ಯವಿದ್ದರೆ ವೈದ್ಯರೇ ನಿಮಗೆ ಕರೆ ಮಾಡುತ್ತಾರೆ ಇಲ್ಲವಾದರೆ, ಯಾವ ಔಷಧಿಸೂಕ್ತವೆಂದು ಅಥವಾ ವೈದ್ಯರ ಸಲಹೆಯನ್ನು “ವೈದ್ಯರ ನೊಂದಣೆ ಸಂಖ್ಯೆವಿರುವ ಚೀಟಿಯಲ್ಲಿ” ಬರೆದು ರೋಗಿಗಳ ಸಂಖ್ಯೆಗೆ ವೈದ್ಯರು ವಾಟ್ಸಾಪ್ ಮಾಡಲಿದ್ದಾರೆ. ಬಳಿಕ ಔಷಧಿಯನ್ನು ಸಮೀಪದ ಮೆಡಿಕಲ್ ನಲ್ಲಿ ಪಡೆಯಬಹುದಾಗಿದೆ.
   ಮಾರಕ ಕೊರೊನಾದಿಂದ ಪಾರಾಗಲು , ಸಾಮಾಜಿಕ ಅಂತರ ಕಾಯ್ದುಗೊಳ್ಳುವುದು ಹಾಗೂ ಮನೆಯಲ್ಲಿರುವುದು ಸಧ್ಯದ ಮುನ್ನೆಚ್ಚರಿಕಾ ಕ್ರಮವಾಗಿರುವ ಹಿನ್ನಲೆಯಲ್ಲಿ ರೋಗಿಗಳ ಅನುಕೂಲಕ್ಕಾಗಿ ದೇರಳಕಟ್ಟೆಯಲ್ಲಿರುವ ಕೆ‌.ಎಸ್‌.ಹೆಗ್ಡೆ ಆಸ್ಪತ್ರೆಯೂ ರಾಜ್ಯದಲ್ಲೇ ಮೊದಲ ಬಾರಿಗೆ ಈ ವಿನೂತನ ಸೇವೆಗೆ ಮುಂದಾಗಿದೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ

Recent Articles

spot_img

Related Stories

Share via
Copy link
Powered by Social Snap