ಬೆಂಗಳೂರು
ರಾಜ್ಯೋತ್ಸವ ಪ್ರಶಸ್ತಿ ಪ್ರಕಟವಾದ ಬೆನ್ನಲ್ಲೆ ಪ್ರಶಸ್ತಿ ಆಯ್ಕೆ ಬಗ್ಗೆ ಬಹಿರಂಗವಾಗಿ ಹೇಳಿಕೆ ನೀಡಿ ಸಮಿತಿ ಸದಸ್ಯೆ ನಿರುಪಮಾ ರಾಜೇಂದ್ರ ವಿವಾದಕ್ಕೀಡಾಗಿದ್ದಾರೆ.
ರಾಜೋತ್ಸವ ಪ್ರಶಸ್ತಿ ಆಯ್ಕೆ ಸಮಿತಿಯಲ್ಲಿ ಕಲಾವಿದೆ ನಿರುಪಮಾ ರಾಜೇಂದ್ರ ಕೂಡ ಸದಸ್ಯೆರು.ಪ್ರಶಸ್ತಿ ಪುರಸ್ಕೃತರಿಗೆ ಶುಭಾಶಯ ಕೋರುವ ಭರಾಟೆಯಲ್ಲಿ ಆಯ್ಕೆ ಗುಟ್ಟನ್ನು ಬಿಟ್ಟುಕೊಟ್ಟು ವಿವಾದಕ್ಕೆ ಕಾರಣರಾಗಿದ್ದಾರೆ.ಸಮಿತಿ ಆಯ್ಕೆ ಹಿನ್ನಲೆಯನ್ನು ಬಹಿರಂಗಪಡಿಸುವಂತಿಲ್ಲ.ಆದರೆ ನಿರುಪಮಾ, ಆಯ್ಕೆ ಸಭೆಯಲ್ಲಿ ಕನ್ನಡ ಮತ್ತು ಸಂಸ್ಕೃತಿ ಸಚಿವ ಸಿ.ಟಿ.ರವಿ ಹಾಗೂ ಮುಖ್ಯಮಂತ್ರಿ ಯಡಿಯೂರಪ್ಪ ತಾವು ಶಿಫಾರಸು ಮಾಡಿದ ಐವರಿಗೆ ಪ್ರಶಸ್ತಿ ಬಂದಿದೆ.
ಶಿಫಾರಸು ಮಾಡಿದವರ ಸಾಧನೆಗಳ ಬಗ್ಗೆ ಅವರಿಗೆ ಹೇಳಿದ್ದೆ .ನನ್ನ ಶಿಫಾರಸನ್ನು ಪರಿಗಣಿಸಿದ್ದಕ್ಕೆ ಧನ್ಯವಾದಗಳು ಎಂದು ವೀಡಿಯೋ ಮಾಡಿದ್ದು ವೈರಲ್ ಆಗಿದೆ.ಪ್ರಭಾತ್ ಆರ್ಟ್ ಇಂಟರ್ ನ್ಯಾಷನಲ್ಗೆ ಪ್ರಶಸ್ತಿ ಕೊಡಿಸಿದ್ದು , ಪ್ರಶಸ್ತಿ ಕೊಡಿಸಲು ಎಷ್ಟೆಲ್ಲಾ ಕಷ್ಟ ಪಟ್ಟೆ ಎನ್ನುವುದನ್ನು ವಿಡಿಯೋದಲ್ಲಿ ಹೇಳಿದ್ದಾರೆ. 29 ಕ್ಷೇತ್ರಗಳಲ್ಲಿ ಸಾಧನೆ ಮಾಡಿದ 64 ಗಣ್ಯರಿಗೆ 2019 ಸಾಲಿನ ಕನ್ನಡ ರಾಜ್ಯೋತ್ಸವ ಪ್ರಶಸ್ತಿ ಪ್ರಕಟಿಸಲಾಗಿದೆ. ನವೆಂಬರ್ 1 ರಂದು ಕನ್ನಡ ರಾಜ್ಯೋತ್ಸವ ಸಂದರ್ಭ ಸಾಧಕರಿಗೆ ಪ್ರಶಸ್ತಿ ನೀಡಿ ಗೌರವಿಸಲಾಗುವುದು.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ
