ವಿದ್ಯಾ ನಗರದ ಉದ್ಯಾನವನ ಅಭಿವೃದ್ಧಿ ಕಾಮಗಾರಿಗೆ ಶಾಸಕರಿಂದ ಚಾಲನೆ

ಶಿರಾ

      ಸಾರ್ವಜನಿಕರ ಅನುಕೂಲಕ್ಕಾಗಿ ಸುಮಾರು 30 ಲಕ್ಷರೂ.ಗಳ ವೆಚ್ಚದಲ್ಲಿ ವಿದ್ಯಾನಗರದ ಉದ್ಯಾನವನದ ಅಭಿವೃದ್ಧಿಯ ಕಾಮಗಾರಿಗೆ ಶಾಸಕ ಬಿ.ಸತ್ಯನಾರಾಯಣ್ ಚಾಲನೆ ನೀಡಿದರು.

     ಶನಿವಾರದಂದು ಕೈಗೊಳ್ಳಲಾಗಿದ್ದ ಕಾಮಗಾರಿಗೆ ಚಾಲನೆ ನೀಡಿದ ಶಾಸಕ ಬಿ.ಸತ್ಯನಾರಾಯಣ್ ಮಾತನಾಡಿ, ಈ ಹಿಂದೆ ನಾನು ಶಾಸಕನಾಗಿದ್ದಾಗ ಇದೇ ವಿದ್ಯಾ ನಗರ ಉದ್ಯಾನವನವನ್ನು 2 ಲಕ್ಷ ರೂ.ಗಳ ವೆಚ್ಚದಲ್ಲಿ ನಿರ್ಮಾಣಗೊಳಿಸಲಾಗಿತ್ತು. ಆ ನಂತರ ಈ ಉದ್ಯಾನವನದ ಅಭಿವೃದ್ಧಿ ನೆನೆಗುದಿಗೆ ಬಿದ್ದಿದ್ದು, ಇದೀಗ 30 ಲಕ್ಷ ರೂ. ವೆಚ್ಚದಲ್ಲಿ ಅಭಿವೃದ್ಧಿ ಕೈಗೊಳ್ಳಲಾಗುತ್ತಿದೆ ಎಂದರು.
ನಗರದ ವಿವಿಧೆಡೆಯಲ್ಲಿ ಇರುವ ಉದ್ಯಾನವನಗಳ ಅಭಿವೃದ್ಧಿಗೂ ವಿಶೇಷ ಒತ್ತು ನೀಡುವ ಮೂಲಕ ಅಂತಹ ಉದ್ಯಾನವನಗಳಲ್ಲಿ ಸಾರ್ವಜನಿಕರಿಗೆ ಆಸನಗಳು, ಮಕ್ಕಳ ಆಟಿಕೆಗಳನ್ನು ಅಳವಡಿಸಲು ಕ್ರಮ ಕೈಗೊಳ್ಳಲಾಗುವುದು ಎಂದು ಸತ್ಯನಾರಾಯಣ್ ತಿಳಿಸಿದರು.

   ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ 

Recent Articles

spot_img

Related Stories

Share via
Copy link