ವಿಧಾನ ಪರಿಷತ್ ಚುನಾವಣೆ : 7 ಮಂದಿ ಅವಿರೋಧ ಆಯ್ಕೆ ಸಾಧ್ಯತೆ

ಬೆಂಗಳೂರು :

       ರಾಜ್ಯ ವಿಧಾನಸಭೆಯಿಂದ ವಿಧಾನಪರಿಷತ್ ಗೆ ಆಯ್ಕೆಯಾಗಿದ್ದಂತ 7 ಸದಸ್ಯರ ಅವಧಿ ಜೂನ್ 30ರಂದು ಕೊನೆಗೊಳ್ಳುತ್ತಿತ್ತು. ಈ ಸ್ಥಾನಗಳಿಗೆ ಜೂನ್ 29ರಂದು ಚುನಾವಣೆ ಕೂಡ ನಿಗಧಿಯಾಗಿತ್ತು. ಆದ್ರೇ ವಿಪಾರ್ಯಾಸವೆನ್ನುವಂತೆ ಕಾಂಗ್ರೆಸ್, ಬಿಜೆಪಿ ಹಾಗೂ ಜೆಡಿಎಸ್ ನಿಂದ ಸಲ್ಲಿಸಿದ್ದಂತ 7 ಅಭ್ಯರ್ಥಿಗಳ ನಾಮಪತ್ರಗಳು ಸಿಂಧುವಾಗಿದ್ದು, ಇಬ್ಬರ ನಾಮಪತ್ರಗಳು ತಿರಸ್ಕೃತಗೊಂಡ ಪರಿಣಾಮ, ಏಳು ಅಭ್ಯರ್ಥಿಗಳು ಅವಿರೋಧ ಆಯ್ಕೆಯಾದಂತೆ ಆಗಿದೆ.

       ಕಳೆದ ನಿನ್ನೆ ವಿಧಾನಪರಿಷತ್ ಚುನಾವಣೆಗೆ ನಾಮಪತ್ರ ಸಲ್ಲಿಸಲು ಕೊನೆಯ ದಿನವಾಗಿತ್ತು. ಇಂತಹ ಸಂದರ್ಭದಲ್ಲಿ ಬಿಜೆಪಿಯಿಂದ ಎಂಟಿಬಿ ನಾಗರಾಜ್, ಆರ್ ಶಂಕರ್, ಸುನಿಲ್ ವಲ್ಯಾಪುರೆ, ಕೆ ಪ್ರತಾಪ್ ಸಿಂಹ ನಾಯಕ್ ನಾಮಪತ್ರ ಸಲ್ಲಿಸಿದ್ದರು. ಇತ್ತ ಕಾಂಗ್ರೆಸ್ ನಿಂದ ಬಿಕೆ ಹರಿಪ್ರಸಾದ್, ನಾಜಿರ್ ಅಹಮದ್ ನಾಮಪತ್ರ ಸಲ್ಲಿಸಿದ್ದರು. ಜೆಡಿಎಸ್ ಅಭ್ಯರ್ಥಿಯಾಗಿ ಗೋವಿಂದ ರಾಜು ಕಣಕ್ಕೆ ಇಳಿದಿದ್ದರು. ಇವರದಲ್ಲದೇ ಪಕ್ಷೇತರ ಅಭ್ಯರ್ಥಿಗಳಾಗಿ ಎ ಯಡವನಹಳ್ಳಿ ಪಿಸಿ ಕೃಷ್ಣಗೌಡ ಹಾಗೂ ಮಂಡಿಕಲ್ ನಾಗರಾಜು ನಾಮಪತ್ರ ಸಲ್ಲಿಸಿದ್ದರು.

       ಹೀಗೆ ಸಲ್ಲಿಸಲಾಗಿದ್ದಂತ ಅಭ್ಯರ್ಥಿಗಳ ನಾಮಪತ್ರ ಪರಿಶೀಲನೆ ಇಂದು ನಡೆದಿದ್ದು, ಬಿಜೆಪಿ, ಕಾಂಗ್ರೆಸ್ ಮತ್ತು ಜೆಡಿಎಸ್ ನಿಂದ ಅಭ್ಯರ್ಥಿಗಳಾಗಿ ನಾಮಪತ್ರ ಸಲ್ಲಿಸಿದ್ದಂತ ಅಭ್ಯರ್ಥಿಗಳ ನಾಮಪತ್ರಗಳು ಕ್ರಮಬದ್ಧವಾಗಿದೆ. ಇತ್ತ ಪಕ್ಷೇತರರಾಗಿ ಅರ್ಜಿ ಸಲ್ಲಿಸಿದ್ದಂತ ಇಬ್ಬರು ಅಭ್ಯರ್ಥಿಗಳ ನಾಮಪತ್ರಗಳು ತಿರಸ್ಕೃತಗೊಂಡಿವೆ. ಹೀಗಾಗಿ ಕಣದಲ್ಲಿ ಖಾಲಿ ಇರುವಂತ 7 ಸ್ಥಾನಗಳಿಗೆ 7 ಅಭ್ಯರ್ಥಿಗಳು ಮಾತ್ರ ಇದ್ದಾರೆ. ಈ ಹಿನ್ನಲೆಯಲ್ಲಿ ಅವಿರೋಧವಾಗಿ ಆಯ್ಕೆಯಾದಂತೆ ಆಗಿದೆ. ಆದ್ರೇ ಜೂನ್ 22ರವರೆಗೆ ಅಧಿಕೃತವಾಗಿ ಘೋಷಣೆ ಮಾಡುವವರೆಗೆ ಕಾಯಬೇಕಿದೆ.

ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ

Recent Articles

spot_img

Related Stories

Share via
Copy link
Powered by Social Snap