ಇಡೀ ದೇಶದಲ್ಲಿಯೇ ನಮ್ಮ ಕನ್ನಡ ಭಾಷೆ ಎರಡನೇ ಮಾತೃ ಭಾಷೆಯಾಗಿದೆ:ಮಸಾಲಜಯರಾಮ್

ತುರುವೇಕೆರೆ :

    ಇಡೀ ದೇಶದಲ್ಲಿಯೇ ನಮ್ಮ ಕನ್ನಡ ಭಾಷೆ ಎರಡನೇ ಮಾತೃ ಭಾಷೆಯಾಗಿದೆ ಎಂದು ಶಾಸಕ ಮಸಾಲಜಯರಾಮ್ ತಿಳಿಸಿದರು.
ಪಟ್ಟಣದ ಕೆ.ಹಿರಣ್ಣಯ್ಯ ಬಯಲು ರಂಗ ಮಂದಿರದ ಆವರಣದಲ್ಲಿ ಗುರುವಾರ ತಾಲೂಕು ಆಡಳಿತ, ಪಟ್ಟಣ ಪಂಚಾಯಿತಿ, ತಾಲೂಕು ಪಂಚಾಯಿತಿ ಹಾಗೂ ವಿವಿಧ ಸಂಘ ಸಂಸ್ಥೆಗಳ ವತಿಯಿಂದ ಹಮ್ಮಿಕೊಂಡಿದ್ದ ಕನ್ನಡ ರಾಜ್ಯೋತ್ಸವ ಸಮಾರಂಭದ ಅಧ್ಯಕ್ಷತೆ ವಹಿಸಿ ಮಾತನಾಡಿ ತಾಲೂಕಿನಲ್ಲಿ ಹಲವು ಜನರು ಕನ್ನಡ ನಾಡು ನುಡಿಗಾಗಿ ಶ್ರಮಿಸಿದ್ದಾರೆ ಧಾರ್ಮಿಕ, ಶೈಕ್ಷಣಿಕ, ಸಾಮಾಜಿಕ ಹಾಗೂ ಆರ್ಥಿಕವಾಗಿ ತಾಲೂಕಿನ ಅಭಿವೃದ್ಧಿಗೆ ಶ್ರಮಿಸುವುದಾಗಿ ತಿಳಿಸಿದರು.

      ಮುಖ್ಯ ಭಾಷಣಕಾರರಾದ ಕಸಾಪ ಅಧ್ಯಕ್ಷ ನಂ.ರಾಜು ಮಾತನಾಡಿ ಹಳೆ ಮೈಸೂರು ಹಾಗೂ ಹಂಚಿ ಹೋಗಿದ್ದ ಕನ್ನಡ ನಾಡನ್ನು ಒಂದುಗೂಡಿಸಲು ಕವಿಪುಂಗರು, ರಾಜಕೀಯ ಮತ್ಸದಿಗಳು ಹಾಗೂ ಜನ ಸಾಮಾನ್ಯರ ಹೋರಾಟದ ಬಗ್ಗೆ ತಿಳಿಸಿ ನಾಡನ್ನು ಆಳಿದ ಗಂಗರು, ಕಬಂದರು ರಾಷ್ಟ್ರಕೂಟರು, ಹೊಯ್ಸಳರು, ವಿಜಯ ನಗರ ಹಾಗೂ ಮೈಸೂರಿನ ಅರಸರ ಬಗ್ಗೆ ತಿಳಿಸಿದರು.
ತಹಶೀಲ್ದಾರ್ ಜಿ.ಹೆಚ್.ನಾಗರಾಜು ಕನ್ನಡ ದ್ವಜಾರೋಹಣ ನೆರವೇರಿಸಿ ನಾಡು, ನುಡಿಯ ಸಂರಕ್ಷಣೆಗೆ ನಾವೆಲ್ಲರೂ ಕಂಕಣ ಬದ್ಧರಾಗೋಣ ಎಂಬ ಸಂದೇಶ ನೀಡಿದರು.

     ಈ ಸಂದರ್ಬದಲ್ಲಿ ವಿವಿಧ ಕ್ಷೇತ್ರಗಳ ಸಾಹಿತಿ ಡಾ. ಎಂ.ಟಿ ಮಂಜುನಾಥ್, ಸೊಬಾನೆ ಪದ ಕಲಾವಿದ ಭೋರೇಗೌಡ, ಬಜನೆ ಕಲಾವಿದೆ ಶಂಕರಮ್ಮ, ಜಲ ಸಾಹಸಿ ಶಿವಕುಮಾರ್, ರಂಗಭೂಮಿ ಕಲಾವಿದ ಶಿಕ್ಷಕ ಡಿ.ಟಿ.ಶ್ರೀನಿವಾಸ್ ಹಾಗೂ ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ಹೆಚ್ಚು ಅಂಕ ಪಡೆದ ತಾಲೂಕಿನ 25 ಮಕ್ಕಳನ್ನು ಸನ್ಮಾನಿಸಿ ಗೌರವಿಸಲಾಯಿತು. ವಿವಿಧ ಶಾಲಾ ಮಕ್ಕಳಿಂದ ಜನರುಗಿದ ಸಾಂಸ್ಕತಿಕ ಕಾರ್ಯಕ್ರಮ, ಸಿದ್ದಗಂಗಾ ಮಠದ ಶ್ರೀ ಶಿವಕುಮಾರ ಸ್ವಾಮಿಗಳ ಸ್ತಬ್ದ ಚಿತ್ರ ಹಾಗೂ ಇತರೆ ಸ್ತಬ್ದ ಪ್ರದರ್ಶನ ಹಾಗೂ ನೃತ್ಯ ಪ್ರದರ್ಶನ ಪ್ರೇಕ್ಷಕರ ಮನಸೆಳೆದವು.

       ಕಾರ್ಯಕ್ರಮದಲ್ಲಿ ತಾಲೂಕು ಪಂಚಾಯಿತಿ ಅಧ್ಯಕ್ಷೆ ನಾಗರತ್ನ, ಜಿಲ್ಲಾ ಪಂಚಾಯಿತಿ ಸದಸ್ಯೆ ರೇಣುಕಕೃಷ್ಣಮೂರ್ತಿ ತಾಲೂಕು ಪಂಚಾಯ್ತಿ ಸದಸ್ಯರಾದ ಬೈರಪ್ಪ, ಮಂಜುನಾಥ್, ಪಟ್ಟಣ ಪಂಚಾಯ್ತಿ ಅಧ್ಯಕ್ಷ ಲಚ್ಚಿಬಾಬು, ಎಪಿಎಂಸಿ ಅಧ್ಯಕ್ಷ ರೇಣಕಪ್ಪ, ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಮಂಜಣ್ಣ, ಸಾ.ಶಿ.ದೇವರಾಜು, ಪ್ರಹ್ಲಾದ್, ರೈತ ಸಂಘದ ಅಧ್ಯಕ್ಷ ಶ್ರೀನಿವಾಸ್ ಗೌಡ, ನವೀನ್ ಬಾಬು, ಬೋಜರಾಜು, ದಲಿತ ಮುಖಂಡ ಚಿದಾನಂದ್, ಇ.ಒ.ಗಂಗಾಧರ್, ಬಿ.ಇ.ಒ.ಮಂಜುನಾಥ್, ದೈಹಿಕ ಶಿಕ್ಷಣ ಸಂಯೋಜಕ ಚಿದಾನಂದ್, ಸಿ.ಪಿ.ಐ.ಅಹಮದ್ ಸಲೀಂ, ಪಿಎಸ್.ಐ ರಾಜು ಸೇರಿದಂತೆ ವಿವಿಧ ಗಣ್ಯರು ಹಾಜರಿದ್ದರು.

ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ 

 

Recent Articles

spot_img

Related Stories

Share via
Copy link