ಬರಗೂರು
ಸಿರಾ ತಾಲ್ಲೂಕು ಬರಗೂರು ಗ್ರಾಮ ಪಂಚಾಯಿತಿ ಆವರಣದಲ್ಲಿ 70 ನೇ ಗಣರಾಜ್ಯೋತ್ಸವವನ್ನು ಸಡಗರ ಸಂಭ್ರಮದಿಂದ ಆಚರಿಸಲಾಯಿತು. ಗ್ರಾಮ ಪಂಚಾಯಿತಿ ಅಧ್ಯಕ್ಷೆ ಲಕ್ಷ್ಮೀನರಸಮ್ಮ ಗಣರಾಜ್ಯೋತ್ಸವದ ಧ್ವಜಾರೋಹಣ ನೇರವೇರಿಸಿ ಮಾತನಾಡಿ, ಪ್ರತಿಯೊಬ್ಬರಲ್ಲೂ ದೇಶಭಕ್ತಿ ಮೂಡುವ ಮೂಲಕ ದೇಶದ ಅಭಿವೃದ್ದಿಗೆ ಒತ್ತು ನೀಡುವಂತೆ ತಿಳಿಸಿದರು.
ಬರಗೂರು ಗ್ರಾಮ ಪಂಚಾಯಿತಿ ಅಭಿವೃದ್ದಿ ಅಧಿಕಾರಿ ಅನಿತಾ, ಗ್ರಾಮ ಪಂಚಾಯಿತಿ ಸದಸ್ಯರಾದ ಶ್ರೀನಿವಾಸ್, ಹನುಮಂತರಾಯಪ್ಪ, ಶ್ರೀನಿವಾಸ್ ಗೌಡ, ಚಂದ್ರವತಿ, ಕಲಿಗೋನಹಳ್ಳಿ ಹನುಮಂತರಾಯಪ್ಪ, ನಿವೃತ್ತ ಮುಖ್ಯ ಪೇದೆ ಬರಗೂರು ಇಸ್ಮಾಯಿಲ್ ಸಾಬ್, ರಂಗನಾಥ್, ಮಾರಣ್ಣ, ಲಕ್ಷ್ಮಣ್, ಪುಟ್ಟರಾಜು, ಲಕ್ಷ್ಮೀ, ರವಿ, ಮಹಾಲಕ್ಷ್ಮೀ ಇತರರು ಭಾಗವಹಿಸಿದ್ದರು.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ
