ಉಪಚುನಾವಣೆಯಲ್ಲಿ ಬಿಜೆಪಿಯದ್ದೇ ಮೇಲುಗೈ

ಬೆಂಗಳೂರು:

      ರಾಜ್ಯದಲ್ಲಿ ನಡೆಯುತ್ತಿರುವ ಮೂರು ಲೋಕಸಭೆ ಹಾಗು ಎರಡು ವಿಧಾನಸಭಾ ಕ್ಷೇತ್ರಗಳ ಉಪ ಚುನಾವಣೆಯಲ್ಲಿ ಬಿಜೆಪಿ ಜಯಗಳಿಸಲಿದೆ ಎಂದು ಕೇಂದ್ರ ಸಾಂಖ್ಯಿಕ ಮತ್ತು ಯೋಜನಾ ಅನುಷ್ಠಾನ ಸಚಿವ ಸದಾನಂದ ಗೌಡ ಹೇಳಿದ್ದಾರೆ.

      ರಾಮನಗರದಲ್ಲಿಂದು ಉಪಚುನಾವಣೆ ಪ್ರಣಾಳಿಕೆ ಬಿಡುಗಡೆಗೊಳಿಸಿ ಮಾತನಾಡಿದ ಅವರು, ಜೆಡಿಎಸ್ ಮತ್ತು ಕಾಂಗ್ರಸ್ ಪಕ್ಷಗಳ ಮೈತ್ರಿ ವಿರುದ್ದ ರಾಜ್ಯದ ಜನರು ಅಸಮಾಧಾನಗೊಂಡಿದ್ದು, ಇದರ ವಿರುದ್ದ ಬಿಜೆಪಿಗೆ ಮತನೀಡಲಿದ್ದಾರೆ ಎಂದು ತಿಳಿಸಿದರು.

      ಮುಖ್ಯಮಂತ್ರಿ ಎಚ್.ಡಿ ಕುಮಾರಸ್ವಾಮಿ ರಾಮನಗರ ಕ್ಷೇತ್ರ ಅಭಿವೃದ್ದಿ ಪಡಿಸುವಲ್ಲಿ ಸಂಪೂರ್ಣ ವಿಫಲರಾಗಿದ್ದಾರೆ, ಇಲ್ಲಿಯ ಜನರಿಗೆ ಸರಿಯಾದ ಕುಡಿಯುವ ನೀರು ಒದಗಿಸಿಲ್ಲ ಎಂದು ಹೇಳಿದರು.

ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ

 

Recent Articles

spot_img

Related Stories

Share via
Copy link
Powered by Social Snap