ಮೈಸೂರು
ಬೇಲಿ ದಾಟುತ್ತಿದ್ದಾಗ ಕಬ್ಬಿಣದ ಸರಳುಗಳಿಗೆ ಸಿಲುಕಿ ಗಂಡಾನೆಯೊಂದು ಸಾವನ್ನಪ್ಪಿರುವ ಘಟನೆ ಹುಣಸೂರು ಅರಣ್ಯ ಪ್ರದೇಶದ ವೀರನಹೊಸಹಳ್ಳಿಯಲ್ಲಿ ಇಂದು ಬೆಳಗ್ಗೆ ಸಂಭವಿಸಿದೆ.
ಕಾಡಾನೆಗಳು ಮತ್ತು ಇತರ ಕಾಡು ಪ್ರಾಣಿಗಳು ಬೆಳೆ ನಾಶ ಮಾಡದಂತೆ ತಡೆಯಲು ಕಬ್ಬಿಣದ ಬೇಲಿಗಳನ್ನು ಹಾಕಲಾಗಿತ್ತು. ಬೇಲಿ ದಾಟಲು ಯತ್ನಿಸಿದಾಗ ಆನೆ ಅದಕ್ಕೆ ಸಿಲುಕಿಕೊಂಡು ಸಾವನ್ನಪ್ಪಿದೆ ಎಂದು ಅರಣ್ಯ ಇಲಾಖೆಯ ಮೂಲಗಳು ತಿಳಿಸಿವೆ.
ಈ ಆನೆ ಆಹಾರ ಹುಡುಕುತ್ತಾ ವೀರನಹೊಸಹಳ್ಳಿಗೆ ಬಂದಿದೆ. ಅಲ್ಲಿ ಬೇಲಿ ದಾಟಲು ಮುಂದಾದಾಗ ಅದರ ಕಾಲು ಸರಳಿಗೆ ಸಿಲುಕಿ ತೀವ್ರ ಗಾಯಗೊಂಡು ಅಲ್ಲೇ ಸಾವನ್ನಪ್ಪಿರಬಹುದು ಎಂದು ಶಂಕಿಸಲಾಗಿದೆ.
ಸ್ಥಳಕ್ಕೆ ಅರಣ್ಯ ಇಲಾಖೆಯ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಸಾರ್ವಜನಿಕರ ಸಹಕಾರದಿಂದ ಮೃತದೇಹವನ್ನು ಅಲ್ಲಿಂದ ತೆರವುಗೊಳಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ
![](https://prajapragathi.com/wp-content/uploads/2018/12/Wild-elephant-dead.gif)