ಕೌಶಲ್ಯತೆಯನ್ನು ವೃತ್ತಿಯಲ್ಲಿ ಪರಿಣಾಮಕಾರಿಯಾಗಿ ಅನುಷ್ಠಾನ ಮಾಡಿ: ಐಲಿ

ಬಳ್ಳಾರಿ

        ನೋಂದಾಯಿತ ಕಟ್ಟಡ ಕಾರ್ಮಿಕರು ವೃತ್ತಿ ಕೌಶಲ್ಯ ಕುರಿತು ಅತ್ಯಂತ ಸಮರ್ಪಕವಾಗಿ ತರಬೇತಿ ಪಡೆದುಕೊಂಡು ಅದನ್ನು ತಮ್ಮ ವೃತ್ತಿಯಲ್ಲಿ ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸುವ ಕೆಲಸ ಮಾಡಬೇಕು, ತಾವು ಸೇವೆಯಲ್ಲಿದ್ದಾಗ ಜೀವ ಸುರಕ್ಷತೆಗೆ ಆದ್ಯತೆ ನೀಡಿ ಕಾರ್ಯನಿರ್ವಹಿಸಿ ಎಂದು ಜಿಲ್ಲಾ ಕಾರ್ಮಿಕ ಅಧಿಕಾರಿ ಚಂದ್ರಶೇಖರ.ಎನ್.ಐಲಿ ಅವರು ಕರೆ ನೀಡಿದರು.

          ಜಿಲ್ಲಾ ಕಾರ್ಮಿಕ ಇಲಾಖೆ ಮತ್ತು ನಿರ್ಮಿತಿ ಕೇಂದ್ರದ ಸಂಯುಕ್ತ ಆಶ್ರಯದಲ್ಲಿ ನಗರದ ನಿರ್ಮಿತಿ ಕೇಂದ್ರದ ಕಚೇರಿ ಆವರಣದಲ್ಲಿ ಶುಕ್ರವಾರ ಶ್ರಮ ಸಾಮಥ್ರ್ಯ ಯೋಜನೆ ಅಡಿ “ಟ್ರೈನಿಂಗ್ ಕಂ ಟೂಲ್ ಕಿಟ್” ಕಾರ್ಯಕ್ರಮ ಮತ್ತು ಎಲೆಕ್ಟ್ರಲ್ ವೃತ್ತಿ ಕೌಶಲ್ಯ ತರಬೇತಿ ಸಮಾರೋಪ ಸಮಾರಂಭದಲ್ಲಿ ಅವರು ಮಾತನಾಡಿದರು.

        ಕಟ್ಟಡ ಕಾರ್ಮಿಕರು ಹಾಗೂ ನೋಂದಾಯಿತ ಕಾರ್ಮಿಕರಿsಗಾಗಿ ಸರಕಾರದಿಂದ ವಿವಿಧ ಸೌಲಭ್ಯಗಳಿದ್ದು, ಅವುಗಳ ಬಗ್ಗೆ ತಿಳಿದುಕೊಂಡು ಸೌಲಭ್ಯ ಪಡೆಯಲು ಮುಂದಾಗಬೇಕು ಎಂದು ಹೇಳಿದ ಜಿಲ್ಲಾ ಕಾರ್ಮಿಕ ಅಧಿಕಾರಿ ಚಂದ್ರಶೇಖರ.ಎನ್.ಐಲಿ ಅವರು ಎಲೆಕ್ಟ್ರಲ್ ತರಬೇತಿ ಪಡೆದ ನೊಂದಾಯಿತ ಕಾರ್ಮಿಕರು ತಾವು ಕೆಲಸ ಮಾಡುವ ಸಂದರ್ಭದಲ್ಲಿ ಜೀವ ಸುರಕ್ಷತೆಗೆ ಆದ್ಯತೆ ನೀಡಿ ಎಂದರು.
ಕಾರ್ಮಿಕ ನಿರೀಕ್ಷಕ ರವಿದಾಸ್ ಅವರು ಕಾರ್ಮಿಕ ಇಲಾಖೆಯಿಂದ ಸಿಗುವ ವಿವಿಧ ಸೌಲಭ್ಯಗಳ ಬಗ್ಗೆ ವಿವರಿಸಿದರು.

        ನಿರ್ಮಿತಿ ಕೇಂದ್ರದ ಅಧಿಕಾರಿ ಮಂಜುಳಾ.ಡಿ.ವಿ ಅವರು ಮಾತನಾಡಿದರು. ಜಿಲ್ಲಾ ಕಾರ್ಮಿಕ ಇಲಾಖೆಯ ಕಾರ್ಯನಿರ್ವಾಹಕ ಆರ್.ಎನ್.ಶಿವರಾಜ ನಿರೂಪಿಸಿ ವಂದಿಸಿದರು. ಮಿತಿಲಾ ರೆಡ್ಡಿ, ನಡ್ಲಿಕೇರಿ ನಾಗರಾಜ, ಶ್ರೀಧರ್, ಯಶವಂತ್ ಸೇರಿದಂತೆ ನೋಂದಾಯಿತ ಕಟ್ಟಡ ಕಾರ್ಮಿಕರು ಇದ್ದರು. ಈ ಸಂದರ್ಭದಲ್ಲಿ ನೋಂದಾಯಿತ ಕಟ್ಟಡ ಕಾರ್ಮಿಕರಿಗೆ ಪರಿಕರಗಳನ್ನು ವಿತರಿಸಲಾಯಿತು.

 ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ 

Recent Articles

spot_img

Related Stories

Share via
Copy link