ಬೆಂಗಳೂರು:
ಕಾಫಿನಾಡು, ಚಿಕ್ಕಮಗಳೂರಿನಲ್ಲಿ ಕಿರು ವಿಮಾನ ನಿಲ್ದಾಣ (ಏರ್ ಸ್ಟ್ರಿಪ್) ನಿರ್ಮಿಸಲು ಉದ್ದೇಶಿಸಲಾಗಿದೆ ಎಂದು ಬೃಹತ್ ಮತ್ತು ಮಧ್ಯಮ ಕೈಗಾರಿಕೆ ಅಭಿವೃದ್ದಿ ಸಚಿವ ಎಂ.ಬಿ.ಪಾಟೀಲ್ ತಿಳಿಸಿದ್ದಾರೆ.
ಈ ಕುರಿತಂತೆ ಇಂದು ಚಿಕ್ಕಮಗಳೂರು ಜಿಲ್ಲಾ ಉಸ್ತುವಾರಿ ಸಚಿವರು ಹಾಗೂ ರಾಜ್ಯ ಇಂಧನ ಸಚಿವ ಕೆ.ಜೆ. ಜಾರ್ಜ್ ಅವರೊಂದಿಗೆ ಮಹತ್ವದ ಮಾತುಕತೆ ನಡೆಸಿದ್ದು ಈ ಕುರಿತಂತೆ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಮಾಡಿದ್ದಾರೆ. ಭೂಸ್ವಾಧೀನಕ್ಕೆ ಪರಿಹಾರ ನೀಡುವುದು ಬಾಕಿ ಇದ್ದು, ಅದರ ಕಡತವನ್ನು ಸಂಪುಟ ಸಭೆಗೆ ಮಂಡಿಸಲು ತೀರ್ಮಾನ ಮಾಡಲಾಯಿತು. ಮೂಲಸೌಕಾರ್ಯಭಿವೃದ್ಧಿ ಇಲಾಖೆ, #KIADB ಸೇರಿದಂತೆ ಸಂಬಂಧಿಸಿದ ಹಿರಿಯ ಅಧಿಕಾರಿಗಳು ಹಾಗೂ ಚಿಕ್ಕಮಗಳೂರು ಜಿಲ್ಲಾಧಿಕಾರಿ ಮೀನಾ ನಾಗರಾಜ ವಿಡಿಯೊ ಸಂವಾದದ ಮೂಲಕ ಭಾಗಿಯಾಗಿದ್ದರು ಎಂದಿದ್ದಾರೆ.
