ಬಿಜೆಪಿ ಅವಧಿಯ ಭೂಮಿ ಹಂಚಿಕ್ಕೆಯನ್ನು ಎಳೆ ಎಳೆಯಾಗಿ ಬಿಚ್ಚಿಟ್ಟ ಎಂಬಿ ಪಾಟೀಲ್

ಬೆಂಗಳೂರು

    ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಕುಟುಂಬದ ಟ್ರಸ್ಟ್​​ಗೆ ಅಕ್ರಮವಾಗಿ ಸಿಎ ಸೈಟ್​ಗಳನ್ನು​ ನೀಡಲಾಗಿದೆ ಎಂದು ವಿಪಕ್ಷಗಳು ಆರೋಪಿಸುತ್ತಿವೆ. ಆದರೆ ಈ ಆರೋಪವನ್ನು ರಾಜ್ಯ ಸರ್ಕಾರ ಅಲ್ಲಗಳೆದಿದೆ. ಅಲ್ಲದೇ ಇದೀಗ ಬಿಜೆಪಿ ಅವಧಿಯಲ್ಲಿ ಯಾರು ಯಾರಿಗೆ ಎಷ್ಟೆಷ್ಟು ಭೂಮಿ ಹಂಚಿಕೆ ಮಾಡಲಾಗಿತ್ತು ಎನ್ನುವುದನ್ನು ಸಚಿವ ಎಂಬಿ ಪಾಟೀಲ್ ​ ಎಳೆ ಎಳೆಯಾಗಿ ಬಿಚ್ಚಿಟ್ಟಿದ್ದಾರೆ.

   ಇವರ ರಿಟ್ ಅರ್ಜಿ ಪುರಸ್ಕರಿಸಿದ ಘನ ನ್ಯಾಯಾಲಯವು 29-8-2017ರಂದು ತಡೆಯಾಜ್ಞೆ ನೀಡಿತ್ತು. ಆ ಮೇಲೆ 7-7-2022ರಂದು ನ್ಯಾಯಾಲಯವು ಈ ಪ್ರಕರಣದ ವಿಲೇವಾರಿ ಮಾಡಿದೆ. ಇದಾದ ಮೇಲೂ ನಾರಾಯಣಸ್ವಾಮಿಯವರಿಗೆ ಕೈಗಾರಿಕಾ ಚಟುವಟಿಕೆ ಆರಂಭಿಸಲು 7-11-2022ರಿಂದ 6-5-2023ರವರೆಗೆ 6 ತಿಂಗಳ ಕಾಲಾವಕಾಶ ನೀಡಲಾಗಿತ್ತು. ಆದರೆ, ನಾರಾಯಣಸ್ವಾಮಿಯವರು ರಾಜಕಾರಣದಲ್ಲಿ ಮುಳುಗಿದ್ದರಿಂದ ಈ ಕಡೆ ಗಮನ ಹರಿಸುವಷ್ಟು ಕಾಲಾವಕಾಶ ಅವರಿಗೆ ಇನ್ನೂ ಸಿಕ್ಕಿಲ್ಲ. ಇಷ್ಟಕ್ಕೂ ಇವರಿಗೆ ಹಂಚಿಕೆ ಮಾಡಿದ್ದ ಎರಡು ಎಕರೆಯಲ್ಲಿ ಕನಿಷ್ಠ ಶೇ 50ರಷ್ಟಾದರೂ ಅಭಿವೃದ್ಧಿ ಪಡಿಸಿ, ಬಳಕೆ ಮಾಡಬೇಕು.
 
   ಆದರೆ ನಾರಾಯಣಸ್ವಾಮಿ ಅವರು ಬಳಕೆ ಮಾಡಿರುವುದು ಶೇ 5ರಷ್ಟು ಮಾತ್ರ. ಒಂದು ಶೆಡ್ ಕಟ್ಟಿ ಬಾಡಿಗೆಗೆ ಇದೆ ಎಂದು ಬೋರ್ಡ್ ನೇತು ಹಾಕಿದ್ದಾರೆ. ಇಷ್ಟು ಬಿಟ್ಟರೆ ಏನೂ ಆಗಿಲ್ಲ. ಈ ಘನಾಂಧಾರಿ ಕೆಲಸಕ್ಕಾ ಇವರಿಗೆ ಜಾಗ ಕೊಟ್ಟಿದ್ದು? ಇದರಿಂದ ಯಾರಿಗೆ ಏನು ಪ್ರಯೋಜನ ಆಯಿತು? ಇಂತಹ ವ್ಯಕ್ತಿಗೆ ಕಾಂಗ್ರೆಸ್ ಮತ್ತು ಖರ್ಗೆ ಕುಟುಂಬದ ವಿರುದ್ಧ ಮಾತನಾಡಲು ಯಾವ ನೈತಿಕ ಹಕ್ಕಿದೆ ಎಂದು ಪ್ರಶ್ನಿಸಿದ್ದಾರೆ.
   ನೀತಿ ಪಾಠ ಹೇಳುವ ಇವರು 2006ರಿಂದ ಇಲ್ಲಿಯವರೆಗೂ ಎಷ್ಟು ಜನರಿಗೆ ಉದ್ಯೋಗ ಕೊಟ್ಟಿದ್ದಾರೆ. ಎಷ್ಟು ಹೂಡಿಕೆ ಮಾಡಿದ್ದಾರೆ? ಹಾಗಾದರೆ ಇವರು ನಿವೇಶನ ತೆಗೆದುಕೊಂಡಿದ್ದಾದರೂ ಏಕೆ? ರಿಯಲ್ ಎಸ್ಟೇಟ್ ದಂಧೆ ಮಾಡುವುದಕ್ಕಾ? ಹೋಗಲಿ ಕೈಗಾರಿಕೆ ಮಾಡಲು ಇವರಿಗೆಲ್ಲಿತ್ತು ಪ್ರಾವೀಣ್ಯತೆ ಎಂದು ಕಿಡಿಕಾರಿದ್ದಾರೆ.
   ಮಾರ್ಚ್​​ 12, 2012ರಲ್ಲಿ ಮುರುಗೇಶ್ ನಿರಾಣಿಯವರು ಬಾಗಲಕೋಟೆ ನವನಗರದಲ್ಲಿ 25 ಎಕರೆ ಭೂಮಿ ಪಡೆದಿದ್ದಾರೆ. ಅಗ್ರೋ ಟೆಕ್ನಾಲಜಿ ಪಾರ್ಕ್​​ನಲ್ಲಿ ಕೈಗಾರಿಕಾ ಭೂಮಿ ಪಡೆದಿದ್ದಾರೆ. ಕೈಗಾರಿಕಾ ಬದಲು ಇಂಟರ್ನ್ಯಾಷನಲ್ ಸ್ಕೂಲ್ ಮಾಡಿದ್ದಾರೆ. ಖರ್ಗೆಗೆ 5 ಎಕರೆ ಭೂಮಿಯನ್ನು ಕೊಟ್ಟಿರುವುದನ್ನು ಕೇಳುತ್ತಾರೆ. ಕೈಗಾರಿಕಾ ಪ್ಲಾಟ್​ನಲ್ಲಿ ಭೂಮಿ ಪಡೆದು ಶಾಲೆ ಮಾಡಿದ್ದಾರೆ ಎಂದು ವಾಗ್ದಾಳಿ ಮಾಡಿದ್ದಾರೆ.

  ಮುರುಗೇಶ್ ನಿರಾಣಿ 2008ರಲ್ಲಿ ಕೈಗಾರಿಕೆ ಸಚಿವರು ಆಗಿದ್ದರು. 12-03-2012ರಲ್ಲಿ ಬಾಗಲಕೋಟೆ ನವನಗರ ಎಗ್ರೋ ಟೆಕ್ ಪಾರ್ಕ್, ತಮ್ಮದೇ ಶಿಕ್ಷಣ ಸಂಸ್ಥೆ ತೇಜಸ್ ಇಂಟರ್ನ್ಯಾಷನಲ್ ಸ್ಕೂಲ್​​ಗೆ 25 ಎಕರೆ ಭೂಮಿ ಪಡೆದಿದ್ದಾರೆ. ತಮ್ಮದೇ ಸರ್ಕಾರಕ್ಕೆ ಪತ್ರ ಬರೆದಿದ್ದಾರೆ. ಎಗ್ರೋ ಟೆಕ್ ಪಾರ್ಕ್​ನಲ್ಲಿ 25 ಎಕರೆ ಭೂಮಿ ಅಲರ್ಟ್ ಮಾಡುತ್ತಾರೆ. 25 ಜೊತೆಗೆ ಮತ್ತೆ 6 ಎಕರೆ ಭೂಮಿಯನ್ನು ಪಡೆಯುತ್ತಾರೆ. 2019 ಸಿಎ ಸೈಟ್ 6 ಎಕರೆ ಭೂಮಿಯನ್ನು ಪಡೆಯುತ್ತಾರೆ. ಒಟ್ಟು 31 ಎಕರೆ ಭೂಮಿಯನ್ನು ಮುರುಗೇಶ್ ನಿರಾಣಿ ಪಡೆದಿದ್ದಾರೆ ಎಂದು ತಿಳಿಸಿದರು.

   ರಾಷ್ಟ್ರೋತ್ಥಾನ ಪರಿಷತ್​ಗೂ ಏರೋಸ್ಪೇಸ್ ಪಾರ್ಕ್​ನಲ್ಲಿ 5 ಎಕರೆ ಜಮೀನು ಕೊಡಲಾಗಿದೆ. ಮಲ್ಟಿ ಯುಟಿಲಿಟಿ ಕಮರ್ಷಿಯಲ್ ಕಾಂಪ್ಲೆಕ್ಸ್​​ಗೆ ಜಮೀನು ಕೊಡಲಾಗಿದೆ. ಆದರೆ ಅಲ್ಲಿ ಯಾವುದೇ ಚಟುವಟಿಕೆ ನಡೆಸಿಲ್ಲ. ಇದನ್ನು ವಾಪಸ್ ಪಡೆಯಲು ಸೂಕ್ತ ಕ್ರಮ ಕೈಗೊಳ್ಳುತ್ತೇವೆ. ಇದಕ್ಕೆ ಕೆಲವೊಂದು ಪ್ರಕ್ರಿಯೆ ಇವೆ. ಹಾಗಂತ ಭೂಮಿ ಪಡೆದುಕೊಳ್ಳಲು ಅವರಿಗೂ ಅವಕಾಶ ಇದೆ. ನೊಟೀಸ್ ಕೊಟ್ಟು ಮುಂದಿನ‌ ಕ್ರಮ ಕೈಗೊಳ್ಳಲು ನಾವು ಸಿದ್ಧ. ಮುಂದೆ ಹೆಚ್ಚಿನ ಮಾಹಿತಿ ಕೊಡುತ್ತೇನೆ ಎಂದಿದ್ದಾರೆ.

    ಕೆಐಎಡಿಬಿಯಿಂದ ಜಮೀನು ಪಡೆದು ಅದನ್ನ ಸರಿಯಾಗಿ ಬಳಕೆ ಮಾಡಿಕೊಳ್ಳದಿದ್ದರೆ ಅಂತಹ ಜಮೀನುಗಳನ್ನು ವಾಪಸ್ ಪಡೆಯಲಾಗುವುದು. ಈಗಾಗಲೇ ಕೈಗಾರಿಕಾ ಉದ್ದೇಶಕ್ಕಾಗಿ ಪಡೆದ ಜಮೀನು, ಬಳಕೆಯಾಗದೆ ಹಾಗೆ ಉಳಿದಿದ್ದರೆ ವಾಪಸ್​​ ಕೈಗಾರಿಕಾ ಜಮೀನುಗಳನ್ನು ಬೇರೆ ಉದ್ದೇಶಕ್ಕೆ ಬಳಕೆ ಮಾಡಲು ಮುಂದಾಗಿದ್ದರೆ. ಅಂತಹ ಜಮೀನು ವಾಪಸ್ ಪಡೆಯಲು ಆ ಬಗ್ಗೆ ಸರ್ಕಾರ ಕ್ರಮ ತೆಗೆದುಕೊಳ್ಳಲಾಗುವುದು. ಸರ್ಕಾರ ಈ ಬಗ್ಗೆ ಸ್ಪಷ್ಟ ನಿರ್ಧಾರ ಮಾಡಲಿದೆ ಎಂದಿದ್ದಾರೆ.

Recent Articles

spot_img

Related Stories

Share via
Copy link
Powered by Social Snap