ಸಾವಿನ ಮನೆಯಲ್ಲಿ ರಾಜಕಾರಣ ಬೇಡ : ಎಂ.ಪಿ.ರೇಣುಕಾಚಾರ್ಯ

ಬೆಂಗಳೂರು:


ಗುತ್ತಿಗೆದಾರ ಸಂತೋಷ್ ಆತ್ಮಹತ್ಯೆ ಪ್ರಕರಣದಲ್ಲಿ ಕಾಂಗ್ರೆಸ್ ನಾಯಕರ ವ್ಯವಸ್ಥಿತ ಷಡ್ಯಂತ್ರವಿದೆ ಎಂದು ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಎಂ.ಪಿ.ರೇಣುಕಾಚಾರ್ಯ ದೂರಿದರು.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪ್ರಧಾನಿ ಕಾರ್ಯಾಲಯಕ್ಕೆ ಪತ್ರ ಬರೆದಿದ್ದಾರೆ ಎನ್ನಲಾದ ಡ್ರಾಫ್ಟ್ ಕಾಂಗ್ರೆಸ್ ನಾಯಕರ ಮನೆಯಲ್ಲಿ ಸಿದ್ಧವಾಗಿದೆ. ಸರ್ಕಾರಕ್ಕೆ ಕೆಟ್ಟ ಹೆಸರು ತರಲು ಹುನ್ನಾರ ನಡೆಸಿದ್ದಾರೆ ಎಂದು ಆರೋಪಿಸಿದರು.
ಕಾಂಗ್ರೆಸ್ ಇರಲಿ, ಬಿಜೆಪಿಯವರು ಆಗಿರಲಿ, ಸಾವಿನ ಮನೆಯಲ್ಲಿ ರಾಜಕಾರಣ ಮಾಡಬಾರದು. ಸತ್ತವರ ಕುಟುಂಬಕ್ಕೆ ಸಾಂತ್ವನ ಹೇಳಬೇಕು ಎಂದು ತಿಳಿಸಿದ ಅವರು, ಶೇ. 40ರಷ್ಟು ಕಮೀಷನ್ ತೆಗೆದುಕೊಂಡರೆ ಶೇ.20ರಷ್ಟು ರಾಜಧನ ಕಟ್ಟಬೇಕು. ಅಲ್ಲಿಗೆ ಶೇ. 60ರಷ್ಟು ಹೋಗುತ್ತದೆ. ಇನ್ನು ಉಳಿದ ಶೇ.40ರಷ್ಟರಲ್ಲಿ ಕಾಮಗಾರಿ ನಡೆಸಲು ಸಾಧ್ಯವೇ? ಎಂದು ಪ್ರಶ್ನಿಸಿದರು.

 ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ

 

Recent Articles

spot_img

Related Stories

Share via
Copy link
Powered by Social Snap