ಮಧುಗಿರಿ : ಬ್ಯಾಲ್ಯ ಗ್ರಾಮಕ್ಕೆ ಜಿಪಂ ಸಿಇಓ ಭೇಟಿ

 ಮಧುಗಿರಿ

      ನ್ಯಾಯಾಲಯದ ತಡೆಯಾಜ್ಞೆಯನ್ನು ತೆರವುಗೊಳಿಸಲು ಸಂಬಂಧಿಸಿದ ಅಧಿಕಾರಿಗಳಿಗೆ ಸೂಕ್ತ ಆದೇಶ ನೀಡಿ, ಬಡ ಜನರಿಗೆ ನಿವೇಶನ ಹಂಚಿಕೆ ಮಾಡಿಕೊಡುವಂತೆ ಸಾಮಾಜಿಕ ಹೋರಾಟಗಾರ ಹಂದ್ರಾಳು ನಾಗಭೂಷಣ್ 2019 ರ ಡಿ.11 ರಂದು ಮನವಿ ಪತ್ರ ಸಲ್ಲಿಸಿದ್ದರ ಹಿನ್ನೆಲೆಯಲ್ಲಿ ಗುರುವಾರ ಜಿಪಂ ಸಿಇಓ ಡಾ.ವಿದ್ಯಾಕುಮಾರಿ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದರು.

      ತಾಲ್ಲೂಕಿನ ಪುರವರ ಹೋಬಳಿ ಬ್ಯಾಲ್ಯ ಗ್ರಾಮದ ಚೌಡೇಶ್ವರಿ ದೇವಸ್ಥಾನದ ಪಕ್ಕದ 30 ಗುಂಟೆ ಜಮೀನಿನಲ್ಲಿ 17 ಗುಂಟೆ ಜಮೀನನ್ನು ತುರ್ತಾಗಿ ಒತ್ತುವರಿ ತೆರವುಗೊಳಿಸಿ, ಗ್ರಾಮದ ನಿವೇಶನ ರಹಿತ ಬಡವರಿಗೆ ನಿವೇಶನಗಳನ್ನು ನೀಡಲು ಸೂಕ್ತ ಕ್ರಮ ವಹಿಸಿ ಕ್ರಮ ಕೈಗೊಳ್ಳಲು ಹಿಂದಿನ ಜಿಲ್ಲಾಧಿಕಾರಿಗಳು ಸ್ಥಳೀಯ ಅಧಿಕಾರಿಗಳ ವರದಿ ಹಾಗು ರೆವಿನ್ಯೂ ನಕ್ಷೆಗೆ ಅನುಗುಣವಾಗಿ ಈ ಜಾಗಕ್ಕೆ ಸಂಬಂಧಿಸಿದಂತೆ ಜಿಲ್ಲಾ ಪಂಚಾಯ್ತಿ ಸಿಇಓ ರವರಿಗೆ ಪತ್ರ ಬರೆದಿದ್ದರು.

      ಆದರೆ ಮಧುಗಿರಿ ಇಓ ಮತ್ತು ಬ್ಯಾಲ್ಯ ಗ್ರಾಮ ಪಂಚಾಯ್ತಿ ಪಿಡಿಓರವರ ಉದ್ದೇಶ ಪೂರ್ವಕ ನಿರ್ಲಕ್ಷ್ಯ ಹಾಗೂ ಈ ಅಧಿಕಾರಿಗಳ ಪೂರ್ವ ನಿಯೋಜಿತ ಸಿದ್ದತೆಯಂತೆ ಸ್ಥಳೀಯ ಕೆಲವರು ಸೇರಿಕೊಂಡು ಈ ಜಾಗವು ದೇವಸ್ಥಾನಕ್ಕೆ ಸೇರಿದೆ ಎಂದು ನ್ಯಾಯಾಲಯದಲ್ಲಿ ತಡೆಯಾಜ್ಞೆ ತಂದಿದ್ದಾರೆ.

      ಜಮೀನಿಗೆ ಸೇರಿದ ಮೂಲ ದಾಖಲೆಗಳನ್ನು ಹಾಗೂ 2020ರ ಸರ್ಕಾರದ ಸುತ್ತೋಲೆ ಹಾಗೂ ಘನ ಸರ್ವೋಚ್ಛ ನ್ಯಾಯಾಲಯದ ಆದೇಶದಂತೆ ದೇವಾಲಯ, ಕಟ್ಟಡಗಳನ್ನು ತೆರವುಗೊಳಿಸುವಂತಿದ್ದು, ಇದರ ಅನ್ವಯ ಸ್ಥಳ ಪರಿಶೀಲನೆ ಮಾಡಿ, ಸೂಕ್ತ ಕಾನೂನು ಕ್ರಮ ಕೈಗೊಳ್ಳುವಂತೆ ಅರ್ಜಿದಾರರರು ಸಿಇಓ ರವರಲ್ಲಿ ಮನವಿ ಮಾಡಿದರು.

ಈ ಸಂದರ್ಭದಲ್ಲಿ ಜಿಪಂ ಯೋಜನಾ ನಿರ್ದೇಶಕ ನರಸಿಂಹಮೂರ್ತಿ, ತಹಸೀಲ್ದಾರ್ ವೈ.ರವಿ, ಇಓ ದೊಡ್ಡಸಿದ್ದಪ್ಪ, ಗ್ರಾಪಂ ಅಧ್ಯಕ್ಷೆ ಗಂಗರತ್ನ, ಆರ್‍ಐ ಜಯರಾಂ, ಪಿಡಿಓ ಮುದ್ದುರಾಜ್, ಮುಖಂಡ ಎಸ್.ಎಲ್.ಭೈರಪ್ಪ ಹಾಗೂ ಗ್ರಾಮಸ್ಥರು ಇದ್ದರು.

ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ

Recent Articles

spot_img

Related Stories

Share via
Copy link