ಪುರಸಭಾ ಅಂಗಡಿ ಮಳಿಗೆಗಳ ಖಾಲಿಗೆ ಸೂಚನೆ

 ಮಧುಗಿರಿ :

     ಪಟ್ಟಣದ ಪುರಸಭೆಯ 107 ಅಂಗಡಿ ಮಳಿಗೆಗಳನ್ನು ಖಾಲಿ ಮಾಡಿಸಿ ಹೊಸದಾಗಿ ಟೆಂಡರ್ ಕರೆಯುವಂತೆ ಶಾಸಕ ಎಂ.ವಿ.ವೀರಭದ್ರಯ್ಯ ಅಧಿಕಾರಿಗಳಿಗೆ ಸೂಚಿಸಿದರು.

     ಅವರು ಪಟ್ಟಣದ ತಾಪಂ ಸಭಾಂಗಣದಲ್ಲಿ ನಡೆದ ಕೆಡಿಪಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಮಳಿಗೆಗಳಿಗೆ ಹಳೆ ಬಾಡಿಗೆ ದರವನ್ನೆ ನೀಡುತ್ತಿದ್ದು, ಹೊಸ ಟೆಂಡರ್ ಪ್ರಕ್ರಿಯೆಯಿಂದ ಪುರಸಭೆಗೆ ಹೆಚ್ಚು ಆದಾಯ ಬರಲಿದೆ. ಪಟ್ಟಣದ ಕೆಎಸ್‍ಆರ್‍ಟಿಸಿ ಡಿಪೋ ಆವರಣವು 3 ಕೋಟಿ ರೂ. ಅನುದಾನದಲ್ಲಿ ಕಾಂಕ್ರೀಟೀಕರಣ ಗೊಂಡಿದ್ದು, ಅದನ್ನು ಶೀಘ್ರ ಉದ್ಘಾಟಿಸಲಾಗುವುದು ಎಂದು ತಿಳಿಸಿ, ಇದೇ ಸಂದರ್ಭದಲ್ಲಿ ಅಂಗನವಾಡಿ ಮಕ್ಕಳಿಗೆ ಗುಣಮಟ್ಟದ ಆಹಾರ ಪದಾರ್ಥಗಳನ್ನು ವಿತರಿಸುವಂತೆ ಸಿಡಿಪಿಓ ಅವರಿಗೆ ಸೂಚಿಸಿದರು.

      ಗಂಗಾ ಕಲ್ಯಾಣ ಯೋಜನೆ ಫಲಾನುಭವಿಗಳಿಗೆ ಕಳೆದ 3 ವರ್ಷಗಳಿಂದ ಮೋಟಾರು ಪಂಪ್‍ಗಳನ್ನು ಏಕೆ ವಿತರಿಸಿಲ್ಲ ಎಂದು ಶಾಸಕರು ಅಂಬೇಡ್ಕರ್ ಆದಿಜಾಂಬವ ನಿಗಮದ ಅಧಿಕಾರಿಯನ್ನು ಪ್ರಶ್ನಿಸಿದಾಗ, ಟೆಕ್ಸ್ಮೋ ಕಂಪನಿಯ ವಿರುದ್ದ ರಾಜ್ಯದ ವಿತರಕರು ನ್ಯಾಯಾಲಯದಲ್ಲಿ ತಡೆಯಾಜ್ಞೆ ತಂದಿರುವುದರಿಂದ, ಇಡೀ ರಾಜ್ಯದಲ್ಲಿ ಈ ಪ್ರಕ್ರಿಯೆ ಸ್ಥಗಿತಗೊಂಡಿದೆ ಎಂದು ಮಾಹಿತಿ ನೀಡಿದರು.

     ಮಳೆಗಾಲ ಪ್ರಾರಂಭವಾಗಿದ್ದು, ಬಿತ್ತನೆ ಬೀಜ ಹಾಗೂ ರಸಗೊಬ್ಬರ ಕೊರತೆಯಾಗದಂತೆ ರೈತರಿಗೆ ವಿತರಿಸಬೇಕೆಂದು ಕೃಷಿ ಸಹಾಯಕ ನಿರ್ದೇಶಕರಿಗೆ ಸೂಚಿಸಿ, ಬೆಳೆ ವಿಮೆ ಬಗ್ಗೆ ರೈತರಿಗೆ ಸಂಪೂರ್ಣ ಮಾಹಿತಿ ನೀಡಿ, ರೈತರಿಗೆ ಅನ್ಯಾಯವಾಗದಂತೆ ಕ್ರಮ ಕೈಗೊಳ್ಳಿ. ಎಂದರು.

      ತಾಲ್ಲೂಕಿನಲ್ಲಿ ಲೋಕೋಪಯೋಗಿ ಇಲಾಖೆ ರಸ್ತೆಗಳ ಕಾಮಗಾರಿಗಳನ್ನು ತ್ವರಿತವಾಗಿ ಪೂರ್ಣಗೊಳಿಸಬೇಕು. ಅಂಬೇಡ್ಕರ್, ಜಗಜೀವನ ರಾಮ್ ಭವನಗಳನ್ನು ಪೂರ್ಣಗೊಳಿಸಿ ಲೋಕಾರ್ಪಣೆಗೊಳಿಸಬೇಕು. ತಾಲ್ಲೂಕಿನಲ್ಲಿ ಕೆಲ ಪಿಡಿಓಗಳು ಸಮರ್ಪಕವಾಗಿ ಕಾರ್ಯನಿರ್ವಹಿಸುತ್ತಿಲ್ಲ. ಆ.7 ರಂದು ಪಿಡಿಓಗಳ ಸಭೆ ಕರೆದಿದ್ದು, ಆ ಸಭೆಯಲ್ಲಿ ಸರಿಯಾಗಿ ಕೆಲಸ ಮಾಡುವಂತೆ ಎಚ್ಚರಿಸಲಾಗುವುದು ಎಂದರು.

     ತಾಲ್ಲೂಕಿನಲ್ಲಿ ಮೊದಲನೆ ಮತ್ತು ಎರಡನೆ ಹಂತದ ಲಸಿಕೆ ಹಾಕಲಾಗಿದ್ದು, ಪಟ್ಟಣದಲ್ಲಿರುವ ಸಾರ್ವಜನಿಕ ಆಸ್ಪತ್ರೆ ಹಾಗೂ ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿ ಆಮ್ಲಜನಕ ಹಾಗೂ ಹಾಸಿಗೆಗಳ ವ್ಯವಸ್ಥೆ ಮಾಡಲಾಗಿದೆ ಎಂದು ಟಿಎಚ್‍ಒ ರಮೇಶ್ ಬಾಬು ಸಭೆಗೆ ಮಾಹಿತಿ ನೀಡಿದರು. ಕೋವಿಡ್ 3ನೇ ಅಲೆ ತಡೆಗಟ್ಟಲು ಆರೋಗ್ಯ ಇಲಾಖೆ ಸನ್ನದ್ದವಾಗಿದ್ದು, ಸಾರ್ವಜನಿಕರು ಸರ್ಕಾರದ ನಿಯಮಗಳನ್ನು ಕಟ್ಟುನಿಟ್ಟಾಗಿ ಪಾಲಿಸಬೇಕು ಎಂದು ಶಾಸಕರು ತಿಳಿಸಿದರು.

      ತಾ.ಪಂ ಇಓ ಡಿ.ದೊಡ್ಡಸಿದ್ದಯ್ಯ, ಆಡಳಿತಾಧಿಕಾರಿ ಡಾ.ಸುಬ್ರಾನಾಯ್ಕ, ಮುಖ್ಯಾಧಿಕಾರಿ ನಜ್ಮಾ, ಸಿಡಿಪಿಓ ಅನಿತಾ, ಲೋಕೋಪಯೋಗಿ ಇಲಾಖೆ ಎಇಇ ರಾಜಗೋಪಾಲ್, ಜಿ.ಪಂ ಎಇಇ ಸುರೇಶ್ ರೆಡ್ಡಿ, ಗ್ರಾಮೀಣ ಕುಡಿಯುವ ನೀರು ಸರಬರಾಜು ಇಲಾಖೆಯ ಎಇಇ ರಾಮದಾಸು, ಭೂ ಸೇನಾ ನಿಗಮದ ಎಇಇ ಹನುಮಂತರಾಜು, ರೇಷ್ಮೆ ಇಲಾಖೆಯ ಲಕ್ಷ್ಮೀನರಸಯ್ಯ, ಅಬಕಾರಿ ಇಲಾಖೆಯ ರಾಮಮೂರ್ತಿ, ಸಾಮಾಜಿಕ ಅರಣ್ಯ ಇಲಾಖೆಯ ತಾರಕೇಶ್ವರಿ, ಆಹಾರ ಇಲಾಖೆಯ ಶಿರಸ್ತೆದಾರ್ ಎಚ್.ಆರ್.ಗಣೇಶ್, ಬಿಸಿಎಂ ಇಲಾಖೆಯ ಜಯರಾಮಯ್ಯ, ತೋಟಗಾರಿಕೆ ಇಲಾಖೆಯ ವಿಶ್ವನಾಥ್ ಗೌಡ, ಪಶು ವೈದ್ಯ ಇಲಾಖೆಯ ಗಿರೀಶ್ ಬಾಬು ರೆಡ್ಡಿ, ಕೃಷಿ ಇಲಾಖೆಯ ಸಹಾಯಕ ನಿರ್ದೇಶಕ ಹನುಮಂತರಾಯಪ್ಪ, ಕಾರ್ಮಿಕ ಇಲಾಖೆಯ ಶ್ರೀಕಾಂತ್ ಮುಂತಾದವರು ಇದ್ದರು

ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ

Recent Articles

spot_img

Related Stories

Share via
Copy link