ಮಧುಗಿರಿ :
ಸಾರ್ವಜನಿಕರ ಸೇವೆಯಲ್ಲಿದ್ದ ಸಾರಿಗೆ ಸಂಸ್ಥೆಯ ಬಸ್ಗಳಿಗೆ ಬಿಎಂಟಿಸಿ ಬಸ್ ಚಾಲಕ ಕಲ್ಲು ಹೊಡೆದಿರುವ ಘಟನೆ ತಾಲ್ಲೂಕಿನ ಬಸವನಹಳ್ಳಿಯ ಕೆಎಸ್ಆರ್ಟಿಸಿ ಬಸ್ ಡಿಪೋ ಸಮೀಪ ಭಾನುವಾರ ರಾತ್ರಿ ನಡೆದಿದೆ.
ಮಧುಗಿರಿಯಿಂದ ಬಸ್ ಡಿಪೋಗೆ ಹೋಗುತ್ತಿದ್ದ ಹಾಗೂ ಪಾವಗಡ ಮಾರ್ಗವಾಗಿ ಮಧುಗಿರಿಗೆ ಬರುತ್ತಿದ್ದ ಸಾರಿಗೆ ಸಂಸ್ಥೆಯ ಬಸ್ ಮೇಲೆ ಬಿಎಂಟಿಸಿ ಬಸ್ ಚಾಲಕ ಮಲ್ಲಘಂಡ ಸಿಂಗ್ರಿ, ಬಸವನಹಳ್ಳಿ ಗ್ರಾಮದ ವಾಸಿ ನಟರಾಜು ಹಾಗೂ ವಡೇರಹಳ್ಳಿಯ ಗ್ರಾಮದ ಮತ್ತೊಬ್ಬ ವ್ಯಕ್ತಿ ಸೇರಿಕೊಂಡು ಬಸ್ಗಳಿಗೆ ಕಲ್ಲು ತೂರಾಟ ನಡೆಸಿದ್ದಾರೆ.
ಈ ಘಟನೆಯಿಂದ ಬಸ್ಸಿನ ಹಿಂಬದಿಯ ಗಾಜು ಪುಡಿ ಪುಡಿಯಾಗಿದೆ. ಬಸ್ ಚಾಲಕರಾದ ನಾಗೇಶ್ ಮತ್ತು ಹನುಮಂತರಾಯಪ್ಪ ನೀಡಿದ ದೂರಿನ ಮೇಲೆ ಬಿಎಂಟಿಸಿ ಬಸ್ ಚಾಲಕ ಮಲ್ಲಘಂಡ ಸಿಂಗ್ರಿ, ಬಸವನಹಳ್ಳಿ ಗ್ರಾಮದ ವಾಸಿ ನಟರಾಜು ಅವರನ್ನು ಪೆÇಲೀಸರು ಬಂಧಿಸಿದ್ದು, ಮತ್ತೊಬ್ಬ ಆರೋಪಿಗಾಗಿ ಬಲೆ ಬೀಸಿದ್ದಾರೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ