ಮಧುಗಿರಿ :
ಕೊರೋನಾ ಸೋಂಕಿತರ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದ್ದು, ಸರಕಾರ ನಿಯಂತ್ರಣ ಮಾಡಲು ಮತ್ತಷ್ಟು ಕ್ರಮಗಳನ್ನು ಜರುಗಿಸಬೇಕು ಎಂದು ಶಾಸಕ ಎಂ.ವಿ.ವೀರಭದ್ರಯ್ಯ ತಿಳಿಸಿದರು.
ಪಟ್ಟಣದ ಪ್ರವಾಸಿ ಮಂದಿರದಲ್ಲಿ ತಾಲ್ಲೂಕು ಮಟ್ಟದ ಅಧಿಕಾರಿಗಳೊಂದಿಗೆ ಸಭೆ ನಡೆಸಿ ಮಾತನಾಡಿದರು. ವೆಂಟಿಲೇರ್ ಆಮ್ಲಜನಕ ಹಾಗೂ ಬೆಡ್ಗಳ ವ್ಯವಸ್ಥೆಯನ್ನು ಮಾಡಬೇಕು. ಮಧುಗಿರಿ ಸಾರ್ವಜನಿಕ ಆಸ್ಪತ್ರ್ರೆಯಲ್ಲಿ 3 ವೆಂಟಿಲೇಟರ್ ಇದ್ದು, ತೀವ್ರ ಸಮಸ್ಯೆಯಿಂದ ಬಳಲುತ್ತಿರುವವರಿಗೆ ಚಿಕಿತ್ಸೆ ನೀಡಲಾಗುತ್ತಿದೆ. ಇನ್ನುಳಿದವರುಗಳಿಗೆ ಕೋವಿಡ್ ಕೇರ್ ಸೆಂಟರ್ ಪ್ರಾರಂಭಿಸಿ ಚಿಕಿತ್ಸೆ ನೀಡಲು ಸಿದ್ದತೆ ಮಾಡಿಕೊಳ್ಳಲಾಗುತ್ತಿದೆ ಎಂದರು.
ಮಧುಗಿರಿ ಸಾರ್ವಜನಿಕ ಆಸ್ಪತ್ರೆಗೆ 5 ಆಮ್ಲಜನಕ ಸಿಲಿಂಡರ್ಗಳನ್ನು ಸರಬರಾಜು ಮಾಡಲು ಡಿಎಚ್ಓಒಗೆ ತಿಳಿಸಲಾಗಿದೆ. ಪಟ್ಟಣದ ವಾರ್ಡ್ಗಳಲ್ಲಿ ಸ್ಯಾನಿಟೈಸಿಂಗ್ ಮಾಡಿಸುವಂತೆ ಪುರಸಭೆ ಮುಖ್ಯಾಧಿಕಾರಿಗೆ ಶಾಸಕರು ಸೂಚಿಸಿದರು.
ಕೊರೋನಾ ವೈರಸ್ ಮೊದಲನೆ ಅಲೆಗಿಂತ 2ನೆ ಅಲೆ ಜೋರಾಗಿದ್ದು, ಜನರು ಸರಕಾರದ ಆದೇಶಗಳನ್ನು ಕಟ್ಟುನಿಟ್ಟಾಗಿ ಪಾಲನೆ ಮಾಡಬೇಕೆಂದು ಮನವಿ ಮಾಡಿದರು.
ಈ ಸಂದರ್ಭದಲ್ಲಿ ಡಿವೈ.ಎಸ್.ಪಿ ಕೆ.ಜಿ.ರಾಮಕೃಷ್ಣ, ತºಸಿಶೀಲ್ಥಾರ್ ವೈ.ರವಿ, ತಾ.ಪಂ ಇಒ ಡಿ.ದೊಡ್ಡಸಿದ್ದಯ್ಯ, ತಾಲ್ಲೂಕು ಆರೋಗ್ಯಾಧಿಕಾರಿ ರಮೇಶ್ಬಾಬು, ಪುರಸಭೆ ಅಧ್ಯಕ್ಷ ತಿಮ್ಮರಾಜು, ಪುರಸಭೆ ಸದಸ್ಯ ಎಂ.ಆರ್.ಜಗನ್ನಾಥ್, ಎಂ.ಎಸ್.ಚಂದ್ರಶೇಖರ್ಬಾಬು, ಪಿ.ಎಸ್ಐ ಮಂಗಳಗೌರಮ್ಮ ಮುಂತಾದವರು ಇದ್ದರು.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ
