ಮಧುಗಿರಿ :
ಆಕ್ರಮವಾಗಿ ಪರವಾನಗಿ ಇಲ್ಲದೆ ಚಿಲ್ಲೆರೆ ಅಂಗಡಿಗಳಲ್ಲಿ ಮದ್ಯ ದಾಸ್ತಾನು ಮಾಡಿ ಹೆಚ್ಚಿನ ಬೆಲೆಗೆ ಮಾರಾಟ ಮಾಡುತ್ತಿದ್ದವರನ್ನು ಮಧುಗಿರಿ ಪೋಲೀಸರು ಮಾಲು ಸಮೇತ ಬಂಧಿಸಿ, ಪ್ರಕರಣ ದಾಖಲಿಸಿರುವ ಘಟನೆ ಮಂಗಳವಾರ ಸಂಜೆ ನಡೆದಿದೆ.
ಇತ್ತೀಚೆಗೆ ಜಿಲ್ಲಾಧಿಕಾರಿಗಳು ಹಾಗೂ ಜಿಲ್ಲಾ ಪೋಲೀಸ್ ವರಿಷ್ಠಾಧಿಕಾರಿಗಳು ತಾಲ್ಲೂಕಿಗೆ ಭೇಟಿ ನೀಡಿದಾಗ ಗ್ರಾಮಸ್ಥರಿಂದ ಚಿಲ್ಲೆರೆ ಅಂಗಡಿಗಳಲ್ಲಿ ಮದ್ಯ ಮಾರಾಟ ಮಾಡಲಾಗುತ್ತಿದೆ ಎಂಬ ದೂರುಗಳು ಕೇಳಿ ಬಂದ ಹಿನ್ನೆಲೆಯಲ್ಲಿ, ಕಾರ್ಯ ಪ್ರ್ರವೃತ್ತರಾದ ಮಧುಗಿರಿ ಪೋಲೀಸರು ಚಿನಕವಜ್ರ, ಕರಮರಡಿ, ವೀರಣ್ಣ ಹಳ್ಳಿ ತಾಂಡ ಗ್ರಾಮಗಳ ಚಿಲ್ಲ್ಲರೆ ಅಂಗಡಿಗಳ ಮೇಲೆ ದಾಳಿ ನಡೆಸಿದರು.
ತಾಲ್ಲೂಕಿನ ಕಸಬಾ ವ್ಯಾಪ್ತಿಯ ಕಾರಮರಡಿ ಗ್ರಾಮದಲ್ಲಿ ಅಕ್ರಮವಾಗಿ ಮದ್ಯವನ್ನು ಮಾರುತ್ತಿದ್ದಾರೆ ಎಂಬ ಮಾಹಿತಿ ಪಡೆದ ಸಿಪಿಐ ಎಂ.ಎಸ್ ಸರ್ದಾರ್ ಹಾಗೂ ಅವರ ತಂಡ ರಾಜಣ್ಣ ಎಂಬುವರ ಅಂಗಡಿ ಮೇಲೆ ದಾಳಿ ಮಾಡಿ ಸುಮಾರು 10 ಸಾವಿರ ರೂ. ಮೌಲ್ಯದ ಮದ್ಯವನ್ನು ವಶಪಡಿಸಿಕೊಂಡು ಆರೋಪಿಯನ್ನು ಬಂಧಿಸಿದ್ದಾರೆ.
ಪಿಎಸೈ ಮಂಗಳ ಗೌರಮ್ಮ ಹಾಗೂ ಅವರ ತಂಡ ಕಸಬಾ ವೀರನಹಳ್ಳಿ ತಾಂಡದಲ್ಲಿ ಅಕ್ರಮವಾಗಿ ಮದ್ಯ ಮಾರುತ್ತಿದ್ದಾರೆ ಎಂಬ ಮಾಹಿತಿ ಪಡೆದು ಸುಮಾರು 8 ಸಾವಿರ ರೂ. ಮೌಲ್ಯದ ಮದ್ಯವನ್ನು ವಶಪಡಿಸಿಕೊಂಡು ಪ್ರಕರಣ ದಾಖಲಿಸಿ ಮುಂದಿನ ಕಾನೂನು ಕ್ರಮ ಕೈಗೊಂಡಿದ್ದಾರೆ.
ಈ ಸಂದರ್ಭದಲ್ಲಿ ಪೇದೆಗಳಾದ ನಟರಾಜು, ರಾಮಕೃಷ್ಣ, ಕಲ್ಲೇಶ್, ಅಂಜನಮೂರ್ತಿ, ರಂಗನಾಥ್, ಕಾಂತರಾಜು ಮತ್ತಿತರಿದ್ದರು.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ
