ಕುತೂಹಲ ಕೆರಳಿಸಿದ ಅಜಿತ್-ಶರದ್ ಪವಾರ್ ಭೇಟಿ!!!

ಮುಂಬೈ : 

     ‘ಮಹಾ’ ರಾಜಕಾರಣ ದಿನಕ್ಕೊಂದು ತಿರುವು ಪಡೆಯುತ್ತಿರುವ ಮಧ್ಯೆ ಎನ್ ಸಿಪಿ ಮುಖ್ಯಸ್ಥ ಶರದ್ ಪವಾರ್ ಅವರನ್ನು ಅಜಿತ್ ಪವಾರ್ ಭೇಟಿ ಮಾಡಿ ಮಾತುಕತೆ ನಡೆಸಿರುವುದು ತೀವ್ರ ಕುತೂಹಲಕ್ಕೆ ಕಾರಣವಾಗಿದೆ.

      ಬಿಜೆಪಿ ಜೊತೆ ಕೈಜೋಡಿಸಿ ಉಪ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದ್ದ ಎನ್.ಸಿ.ಪಿ.ಯ ಅಜಿತ್ ಪವಾರ್ ತಡರಾತ್ರಿ ಪಕ್ಷದ ವರಿಷ್ಠ ಶರದ್ ಪವಾರ್ ಅವರನ್ನು ಭೇಟಿ ಮಾಡಿ ಮಾತುಕತೆ ನಡೆಸಿದ್ದಾರೆ ಎನ್ನಲಾಗಿದ್ದು,  ಜೊತೆಯಲ್ಲಿ ಶರದ್ ಪವಾರ್ ಪುತ್ರಿ ಸುಪ್ರೀಯಾ ಸುಳೆ ಅವರೂ ಇದ್ದರು ಎಂದು ವರದಿಯಾಗಿದೆ.

    ಈ ಭೇಟಿ ಸಂದರ್ಭದಲ್ಲಿ ಕುಟುಂಬದಲ್ಲಿ ಒಡಕು ಮೂಡುವುದು ಬೇಡ ಎಂದು ಶರದ್ ಪವಾರ್ ಸಲಹೆ ನೀಡಿದ್ದಾರೆನ್ನಲಾಗಿದ್ದು, ಉಪ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿ ವಾಪಸ್ ಬರುವಂತೆ ಅಜಿತ್ ಪವಾರ್ ಗೆ ಶರದ್ ಪವಾರ್ ಆಹ್ವಾನ ನೀಡಿದ್ದಾರೆಂದು ಹೇಳಲಾಗಿದೆ. ಈಗ ಒಬ್ಬಂಟಿಯಾಗಿರುವ ಅಜಿತ್ ಪವಾರ್ ಯಾವ ತೀರ್ಮಾನ ಕೈಗೊಳ್ಳಲಿದ್ದಾರೆಂಬುದನ್ನು ಕಾದುನೋಡಬೇಕಿದೆ. 

ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ

Recent Articles

spot_img

Related Stories

Share via
Copy link
Powered by Social Snap