ಮುಂಬೈ:
ಮುಖ್ಯಮಂತ್ರಿ ಅಧಿಕಾರ ಸ್ವೀಕಾರಕ್ಕೆ ಮುನ್ನವೇ ಮಹಾರಾಷ್ಟ್ರ ವಿಧಾನಸಭೆ ಚುನಾವಣೆಯಲ್ಲಿ ನೂತನವಾಗಿ ಚುನಾಯಿತರಾದ ಶಾಸಕರು ಇಂದು ವಿಶೇಷ ಕಲಾಪದಲ್ಲಿ ಪ್ರಮಾಣ ವಚನ ಸ್ವೀಕರಿಸಿದ್ದಾರೆ.
ಕಳೆದೆರಡು ದಶಕಗಳಿಂದ ರಾಜ್ಯದಲ್ಲಿ ಮುಖ್ಯಮಂತ್ರಿ ಪ್ರಮಾಣವಚನ ಸ್ವೀಕರಿಸಿದ ನಂತರವೇ ಸದಸ್ಯರು ಪ್ರಮಾಣವಚನ ಸ್ವೀಕರಿಸಿದ್ದಾರೆ. ಅಷ್ಟೇ ಅಲ್ಲದೆ ಪ್ರಮಾಣವಚನ ನಡೆದ ನಂತರದ ಅಧಿವೇಶನದಲ್ಲಿಯೇ ಬಹುಮತ ಸಾಬೀತು ಕೂಡ ನಡೆಯುತ್ತದೆ. ನಂತರ ಕೂಡಲೇ ವಿಶ್ವಾಸಮತ ಯಾಚನೆ ನಡೆಯುತ್ತಿತ್ತು. ಆದರೆ ಈ ಪ್ರಕರಣದಲ್ಲಿ ಮುಖ್ಯಮಂತ್ರಿ ಪ್ರಮಾಣವಚನ ಸ್ವೀಕರಿಸಿಲ್ಲ. ಆದರೆ ಶಾಸಕರ ಪ್ರಮಾಣವಚನ ಸ್ವೀಕಾರ ಕಾರ್ಯಕ್ರಮ ನಡೆದಿದೆ ಎಂದು ಮಹಾರಾಷ್ಟ್ರ ವಿಧಾನ ಭವನದ ಕಾರ್ಯದರ್ಶಿ ರಾಜೇಂದ್ರ ಭಾಗವತ್ ಮಾಹಿತಿ ನೀಡಿದ್ದಾರೆ.
Mumbai: Newly-elected Maharashtra MLAs take oath at the special Assembly session called by Maharashtra Governor Bhagat Singh Koshyari. pic.twitter.com/5Xg17143RH
— ANI (@ANI) November 27, 2019
ಸುಪ್ರೀಂ ಕೋರ್ಟ್ ತನ್ನ ಮಂಗಳವಾರದ ತೀರ್ಪಿನಲ್ಲಿ “ಇಂದೇ ಸದಸ್ಯರ ಪ್ರಮಾಣವಚನ ಸ್ವೀಕಾರ ನಡೆಯಬೇಕೆಂದು ಹೇಳಿರುವುದರಿಂದ ಇಂದೇ ಪ್ರಮಾಣವಚನ ನಡೆಯುವಂತಾಗಿದೆ” ಎಂದೂ ಅವರು ತಿಳಿಸಿದ್ದಾರೆ.
ಮಹಾರಾಷ್ಟ್ರದ 14ನೇ ವಿಧಾನಸಭೆಯ ನೂತನ ಸದಸ್ಯರ ಪ್ರಮಾಣವಚನವು ಸರಕಾರ ರಚನೆಯಾಗದೆ ಹಾಗೂ ಮುಖ್ಯಮಂತ್ರಿ ಅಧಿಕಾರ ಸ್ವೀಕಾರಕ್ಕೆ ಮುನ್ನವೇ ಇಂದು ನಡೆಯುತ್ತಿದೆ. ಇದು ರಾಜ್ಯದ ಇತಿಹಾಸದಲ್ಲಿಯೇ ಒಂದು ಅಪರೂಪದ ಪ್ರಸಂಗವಾಗಿದೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ
