WFI ಚುನಾವಣಾಧಿಕಾರಿಯಾಗಿ ನ್ಯಾ. ಮಹೇಶ್‌ ಮಿತ್ತಲ್‌ ನೇಮಕ….!

ಚೆನ್ನೈ:

     ಭಾರತದ ಕುಸ್ತಿ ಫೆಡರೇಷನ್ (ಡಬ್ಲ್ಯುಎಫ್‌ಐ) ಗೆ ಮುಂದಿನ ತಿಂಗಳು ಚುನಾವಣೆ ನಡೆಯಲಿದ್ದು, ಹೊಸ ಮುಖ್ಯಸ್ಥರು ನೇಮಕವಾಗುವ ಸಾಧ್ಯತೆಯಿದೆ. ಅದಕ್ಕೆ ಮೊದಲ ಹೆಜ್ಜೆಯಾಗಿ ಚುನಾವಣಾಧಿಕಾರಿ ನೇಮಕ ಮಾಡಲಾಗಿದೆ. 

     ಜಮ್ಮು ಮತ್ತು ಕಾಶ್ಮೀರ ಹೈಕೋರ್ಟ್‌ನ ಮಾಜಿ ಮುಖ್ಯ ನ್ಯಾಯಮೂರ್ತಿ ಮಹೇಶ್ ಮಿತ್ತಲ್ ಕುಮಾರ್ ಅವರನ್ನು ಚುನಾವಣಾಧಿಕಾರಿಯಾಗಿ ಭಾರತೀಯ ಒಲಿಂಪಿಕ್ ಅಸೋಸಿಯೇನ್ ಸೋಮವಾರ ನೇಮಿಸಿದೆ. ಜುಲೈ 4 ರೊಳಗೆ ಚುನಾವಣೆ ನಡೆಸಬೇಕೆಂದು ಐಒಎ ಬಯಸಿದೆ ಆದರೆ,  ಆದರೆ ನ್ಯಾಯಮೂರ್ತಿ ಮಿತ್ತಲ್ ವಿಶೇಷ ಸಾಮಾನ್ಯ ಸಭೆಯನ್ನು ಯಾವಾಗ ಕರೆಯಬಹುದು, ಏಲ್ಲಿ ಚುನಾವಣೆ ನಡೆಸಬಹುದು ಎಂಬುದನ್ನು ನಿರ್ಧರಿಸಬಹುದು.

   WFI ಸಂವಿಧಾನದ ಪ್ರಕಾರ, ವಾರ್ಷಿಕ ಸಾಮಾನ್ಯ ಸಭೆ ಅಥವಾ ವಿಶೇಷ ಸಾಮಾನ್ಯ ಸಭೆಯಲ್ಲಿ ಚುನಾವಣೆ  ನಡೆಸಬಹುದು. ವಿಶೇಷ ಸಾಮಾನ್ಯ ಸಭೆ ಕರೆಯಲು ಸ್ಪಷ್ಟವಾದ 21-ದಿನದ ಸೂಚನೆಯ ಅಗತ್ಯವಿದೆ. ಮಂಗಳವಾರವೇ ಈ ಕುರಿತು ಸೂಚನೆ ನೀಡಿದರೆ ಜುಲೈ 4ರಂದು  ಚುನಾವಣೆ ನಡೆಸಬಹುದು. ಆದರೆ ಇದು ಇನ್ನೊಂದಿಷ್ಟ ದಿನ ಮುಂದೂಡುವ ಸಾಧ್ಯತೆಯಿದೆ. 

 

    ಬಾಕಿಯಿರುವ ಡಬ್ಲ್ಯುಎಫ್‌ಐನ ಚುನಾವಣೆಯನ್ನು ಮುಂದಿನ ಮೂರು ವಾರಗಳಲ್ಲಿ ನಡೆಸಲಾಗುವುದು ಮತ್ತು ಚುನಾವಣಾ ವೇಳಾಪಟ್ಟಿಯನ್ನು ಶೀಘ್ರದಲ್ಲೇ ಚುನಾವಣಾಧಿಕಾರಿ ಹೊರಡಿಸುವ ನಿರೀಕ್ಷೆಯಿದೆ ಎಂದು ಚೌಬೆ ತಿಳಿಸಿದ್ದಾರೆ. ಪ್ರಸ್ತುತ, ಚಂಡೀಗಢ ಮತ್ತು ದೆಹಲಿಯ ಕೇಂದ್ರಾಡಳಿತ ಪ್ರದೇಶ ಒಳಗೊಂಡಂತೆ ಡಬ್ಲ್ಯೂಎಫ್ ಐ 25  ರಾಜ್ಯ ಘಟಕಗಳನ್ನು ಹೊಂದಿದೆ. ಒಬ್ಬ ಸದಸ್ಯರು ಚುನಾವಣೆಯಲ್ಲಿ ಮತ ಚಲಾಯಿಸಲು ಇಬ್ಬರು ಪ್ರತಿನಿಧಿಗಳನ್ನು ಕಳುಹಿಸಬಹುದು, ಒಟ್ಟಾರೇ 50 ಮತಗಳಿರುತ್ತವೆ. 

     ಕೆಲವು ರಾಜ್ಯಗಳಲ್ಲಿ ಒಂದಕ್ಕಿಂತ ಹೆಚ್ಚು ಸಂಘಗಳು ಅಸ್ತಿತ್ವದಲ್ಲಿವೆ. ಅಲ್ಲದೆ ಡಬ್ಲ್ಯೂಎಫ್ ಐ ವೆಬ್‌ಸೈಟ್‌ ಪ್ರಕಾರ ಮಹಾರಾಷ್ಟ್ರ, ಮಣಿಪುರ ಮತ್ತು ಉತ್ತರಾಖಂಡ ಘಟಕಗಳು, ಆಯಾ ರಾಜ್ಯಗಳ ಸಂಸ್ಥೆಗಳು ಮತ್ತು ಸೊಸೈಟಿಗಳ ನೋಂದಣಿಯಿಂದ ನೀಡಲಾದ ನೋಂದಣಿ ಪ್ರಮಾಣಪತ್ರಗಳನ್ನು ಹೊಂದಿಲ್ಲ. 2019ರಲ್ಲಿ ನಡೆದ ಚುನಾವಣೆಯಲ್ಲಿ ಒಟ್ಟು 26 ಘಟಕಗಳು ಮತ ಚಲಾಯಿಸಿವೆ. ಆದರೆ, ಗೋವಾ ಈ ಬಾರಿ ಸಂಯೋಜಿತ ಘಟಕಗಳ ಪಟ್ಟಿಯಿಂದ ಕಾಣೆಯಾಗಿದೆ.

    ಕೇಂದ್ರ ಕ್ರೀಡಾ ಸಚಿವ ಅನುರಾಗ್ ಠಾಕೂರ್, ಜೂನ್ 7 ರಂದು ಪ್ರತಿಭಟನಾ ನಿರತ ಕುಸ್ತಿಪಟುಗಳೊಂದಿಗಿನ ಸಭೆಯ ನಂತರ, ಜೂನ್ 30 ರೊಳಗೆ ಡಬ್ಲ್ಯುಎಫ್‌ಐ ಚುನಾವಣೆಗಳನ್ನು ನಡೆಸಲಾಗುವುದು ಎಂದು ಹೇಳಿದ್ದರು. ಅಲ್ಲದೇ ಡಬ್ಲ್ಯುಎಫ್‌ಐ ಮುಖ್ಯಸ್ಥ ಬ್ರಿಜ್ ಭೂಷಣ್ ಶರಣ್ ಸಿಂಗ್ ಹಾಗೂ ಅವರ  ಕುಟುಂಬ ಸದಸ್ಯರು, ಸಹವರ್ತಿಗಳಿಗೆ ಚುನಾವಣೆಗೆ ಸ್ಪರ್ಧಿಸಲು ಅವಕಾಶ ನೀಡುವುದಿಲ್ಲ ಎಂದು ಠಾಕೂರ್  ಕುಸ್ತಿಪಟುಗಳಿಗೆ ಭರವಸೆ ನೀಡಿದ್ದರು.

     ನಂತರ ಕುಸ್ತಿಪಟುಗಳು ತಮ್ಮ ಪ್ರತಿಭಟನೆಯನ್ನು ಜೂನ್ 15 ರವರೆಗೆ ಸ್ಥಗಿತಗೊಳಿಸಿದ್ದಾರೆ. ಬ್ರಿಜ್ ಭೂಷಣ್ ವಿರುದ್ಧದ ಆರೋಪ ಪಟ್ಟಿಯನ್ನು ಜೂನ್ 15 ರೊಳಗೆ ನ್ಯಾಯಾಲಯಕ್ಕೆ ಸಲ್ಲಿಸಲಾಗುವುದು ಎಂದು ಕ್ರೀಡಾ ಸಚಿವರು ಹೇಳಿದರು.

ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ

Recent Articles

spot_img

Related Stories

Share via
Copy link
Powered by Social Snap