ಬೆಂಗಳೂರು :
ಅಡ್ವಾನ್ಸ್ ಹಣ ಕೊಟ್ಟಿದ್ದ ಮಾಲೀಕನನ್ನೇ ತಂದೆ-ಮಗ ಹತ್ಯೆಗೈದಿರುವಂತಹ ಘಟನೆ ಕಡಬಗೆರೆ ಕ್ರಾಸ್ನ ಆರ್.ಆರ್.ಇಂಡಸ್ಟ್ರೀಸ್ನಲ್ಲಿ ನಡೆದಿದೆ. ರಮೇಶ್ ಕೊಲೆಯಾದ ಆರ್.ಆರ್.ಇಂಡಸ್ಟ್ರೀಸ್ ಮಾಲೀಕ. ಸೈಯದ್ ತಾಜುದ್ದೀನ್(50) ಮತ್ತು ಸೈಯದ್ ಅಯೂಬ್ ಬಂಧಿತರು. ಸದ್ಯ ಇಬ್ಬರು ಆರೋಪಿಗಳನ್ನು ಬಂಧಿಸಿ ಪೊಲೀಸರು ವಿಚಾರಣೆ ನಡೆಸಿದ್ದಾರೆ. ಮಾದನಾಯಕನಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ರಮೇಶ್ ಬಳಿ ಇಬ್ಬರು ಕೆಲಸಗಾರರು 6 ಲಕ್ಷ ರೂ ಅಡ್ವಾನ್ಸ್ ಪಡೆದಿದ್ದರು. ಆದರೆ ಸರಿಯಾಗಿ ಕೆಲಸಕ್ಕೆ ಬಾರದೆ ಸತಾಯಿಸುತ್ತಿದ್ದರು. ಇಬ್ಬರು ಕೂಡ ಕೆಲಸ ಮಾಡದೆ ರಮೇಶ್ನಿಗೆ ಬೆದರಿಕೆ ಹಾಕುತ್ತಿದ್ದರು. ಮಧ್ಯಾಹ್ನ ಮಾಲೀಕ ರಮೇಶ್ ಜೊತೆಗೆ ಗಲಾಟೆಯಾಗಿದೆ. ಈ ವೇಳೆ ತಂದೆ-ಮಗ ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆಗೈದಿದ್ದಾರೆ.
