ಮಂಡ್ಯ :
ಕೃಷಿ ಹೊಂಡದಲ್ಲಿ ಮುಳುಗಿ ಮೂವರು ಮಕ್ಕಳು ಮೃತಪಟ್ಟಿರುವ ದಾರುಣ ಘಟನೆ ಮಂಡ್ಯ ಜಿಲ್ಲೆಯ ಪಾಂಡವಪುರ ತಾಲ್ಲೂಕಿನ ಬಳ್ಳೇಅತ್ತಿಗುಪ್ಪೆ ಗ್ರಾಮದಲ್ಲಿ ಗುರುವಾರ ಸಂಭವಿಸಿದೆ.
ಮಹದೇವಪ್ಪ ಎಂಬವರ ಮಕ್ಕಳಾದ ಚಂದನ್, ಕಾರ್ತಿಕ್ ಮತ್ತು ಮಲ್ಲಿಕಾರ್ಜುನ ಎಂಬವರ ಪುತ್ರ ರಿತೇಶ್ ಮೃತರು.
ಶಾಲೆಗೆ ರಜೆ ಇದ್ದ ಹಿನ್ನೆಲೆಯಲ್ಲಿ ಸ್ನೇಹಿತರೊಂದಿಗೆ ಈಜಾಡಲು ತೆರಳಿದ್ದ ವೇಳೆ ಈ ದುರ್ಘಟನೆ ಸಂಭವಿಸಿದೆ. ತೋಟದ ಬಳಿ ಹೋದ ಮಹದೇವಪ್ಪ ಕೃಷಿ ಹೊಂಡದಲ್ಲಿ ತೇಲುತ್ತಿದ್ದ ಮಕ್ಕಳ ಮೃತದೇಹ ಕಂಡು ಗಾಬರಿಗೊಂಡು ಕಿರುಚಿದ್ದಾರೆ. ಅಕ್ಕಪಕ್ಕದ ತೋಟದಲ್ಲಿ ಕೆಲಸ ಮಾಡುತ್ತಿದ್ದವರು ಬಂದು ಮೃತದೇಹವನ್ನು ಮೇಲೆತ್ತಿದ್ದಾರೆ.
ಘಟನೆಯಿಂದ ನೊಂದ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ. ಈ ಸಂಬಂಧ ಪಾಂಡವಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ
