ಲೋಕಸಭಾ ಚುನಾವಣೆ : ದೊಸ್ತಿಗಳಿಂದ ಸಮನ್ವಯ ಸಭೆ…!

ಬೆಂಗಳೂರು:

    ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಬಿಜೆಪಿ ಹಾಗೂ ಜೆಡಿಎಸ್‌ ಸಮನ್ವಯ ಸಭೆ ಬೆಂಗಳೂರಿನಲ್ಲಿಂದು ನಡೆಯಿತು.

    ಮಾಜಿ ಪ್ರಧಾನಿ ಹೆಚ್. ಡಿ. ದೇವೇಗೌಡ, ಮಾಜಿ ಮುಖ್ಯಮಂತ್ರಿಗಳಾದ ಬಿಎಸ್ ಯಡಿಯೂರಪ್ಪ, ಬಸವರಾಜ ಬೊಮ್ಮಾಯಿ, ಎಚ್. ಡಿ. ಕುಮಾರಸ್ವಾಮಿ, ರಾಜ್ಯ ಬಿಜೆಪಿ ಉಸ್ತುವಾರಿ ರಾಧಾ ಮೋಹನ್ ದಾಸ್ ಅಗರ್ವಾಲ್, ಬಿಜೆಪಿ ರಾಜ್ಯಾಧ್ಯಕ್ಷ ಬಿ,ವೈ. ವಿಜಯೇಂದ್ರ, ವಿರೋಧ ಪಕ್ಷದ ನಾಯಕ ಆರ್.ಅಶೋಕ್ ಹಾಗೂ ಬಿಜೆಪಿ ಮತ್ತು ಜೆಡಿಎಸ್‌ ಪಕ್ಷದ ಪ್ರಮುಖರು ಉಪಸ್ಥಿತರಿದ್ದರು.

   ಸಭೆಯಲ್ಲಿ ಮಾತನಾಡಿದ ಎಚ್. ಡಿ. ಕುಮಾರಸ್ವಾಮಿ, 28 ಕ್ಷೇತ್ರ ಗೆಲ್ಲೋದು ನಮ್ಮ ಗುರಿಯಾಗಿದೆ. ಪರಸ್ಪರ ಮಾತನಾಡಿಕೊಂಡು ಕೆಲಸ ಮಾಡಬೇಕು ಎಂದು ಮೈತ್ರಿ ಪಕ್ಷಗಳ ನಾಯಕರಿಗೆ ಕರೆ ನೀಡಿದರು.

   ಸಭೆ ಬಳಿಕ ಮಾತನಾಡಿದ ಹೆಚ್. ಡಿ. ದೇವೇಗೌಡ, ಮೊದಲ ಬಾರಿಗೆ ಬಿಜೆಪಿ ಮತ್ತು ಜೆಡಿಎಸ್ ಸಮನ್ವಯ ಸಮಿತಿ ಸಭೆ ನಡೆಯಿತು. ಎಲ್ಲಾ ನಾಯಕರು ಹಾಜರಿದ್ದರು. ನಾವು ಕರ್ನಾಟಕದ ಜನತೆಗೆ ಒಂದು ಉತ್ತಮ ಸಂದೇಶವನ್ನು ನೀಡಿದ್ದೇವೆ – ಕಾಂಗ್ರೆಸ್ ವಿರುದ್ಧ ಹೋರಾಡಿ, ಅದನ್ನು ಸೋಲಿಸುತ್ತೇವೆ ಮತ್ತು ಎಲ್ಲಾ 28 ಸ್ಥಾನಗಳಲ್ಲಿ ನಾವು ಗೆಲ್ಲುತ್ತೇವೆ ಎಂದರು.

ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page SUBSCRIBE ಮಾಡಿ

Recent Articles

spot_img

Related Stories

Share via
Copy link
Powered by Social Snap