ತೆರಿಗೆ ಸಲಹೆಗಾರರಿಗೆ ಸಚಿವರ ಕಿವಿಮಾತು….!

ಬೆಂಗಳೂರು:

        ಕರ್ನಾಟಕ ರಾಜ್ಯ ತೆರಿಗೆ ಸಲಹೆಗಾರರ ಸಂಘವು ಸುವರ್ಣ ಮಹೋತ್ಸವ ಆಚರಣೆಯ ಅಂಗವಾಗಿ ಆಗಸ್ಟ್ 4, 5 ಮತ್ತು 6 ರಂದು ಬೆಂಗಳೂರಿನ ಅರಮನೆ ಮೈದಾನದಲ್ಲಿ ರಾಷ್ಟ್ರೀಯ ತೆರಿಗೆ ಸಮ್ಮೇಳನ ಮತ್ತು ತೆರಿಗೆ ವೃತ್ತಿಪರರ ದಿನಾಚರಣೆ ಹಮ್ಮಿಕೊಂಡಿದೆ.

    ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ ಸಚಿವ ಕೃಷ್ಣ ಬೈರೇಗೌಡ ಅವರು, “ಜನರು ತಮ್ಮ ಹಣವನ್ನು ಎಲ್ಲಿ ಹೂಡಿಕೆ ಮಾಡಬೇಕು? ತೆರಿಗೆಯನ್ನು ಎಲ್ಲೆಲ್ಲಿ ಉಳಿಸಬೇಕು ಎಂದು ಸಲಹೆ ನೀಡುವುದು ಉತ್ತಮ ಕೆಲಸವೇ. ಆದರೆ, ತೆರಿಗೆ ಕಳ್ಳತನ ಅಕ್ಷಮ್ಯ ಎಂದು ಕಿವಿಮಾತು ಹೇಳಿದರು.

    ಕೆಎಸ್‌ಟಿಪಿಎ ಅಧ್ಯಕ್ಷ ಎಸ್ ನಂಜುಂಡ ಪ್ರಸಾದ್ ಮಾತನಾಡಿ, 2,000 ಕ್ಕೂ ಹೆಚ್ಚು ಸದಸ್ಯರನ್ನು ಹೊಂದಿರುವ ಸಂಘವು ತೆರಿಗೆ ಪಾವತಿಸುವ ಸಾರ್ವಜನಿಕರಿಗೆ ಜಿಎಸ್‌ಟಿ, ಆದಾಯ ತೆರಿಗೆ ಮತ್ತು ಇತರ ತೆರಿಗೆ ಸಂಬಂಧಿತ ಸೇವೆಗಳ ಬಗ್ಗೆ ಮಾರ್ಗದರ್ಶನ ನೀಡುವ ಮೂಲಕ ಬೆಂಬಲವನ್ನು ನೀಡುತ್ತಿದ್ದಾರೆ. ನಮ್ಮ ಸಂಘವು ಕೋವಿಡ್ ಸಮಯದಲ್ಲಿ ಪ್ರಧಾನ ಮಂತ್ರಿ ಪರಿಹಾರ ನಿಧಿಗೆ 10 ಲಕ್ಷ ಮತ್ತು ಮುಖ್ಯಮಂತ್ರಿ ಪರಿಹಾರ ನಿಧಿಗೆ 15 ಲಕ್ಷ ರೂಪಾಯಿಗಳನ್ನು ನೀಡಿತ್ತು ಎಂದು ಹೇಳಿದರು.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ

Recent Articles

spot_img

Related Stories

Share via
Copy link