SC-STಸಮುದಾಯದವರ ಮತಾಂತರವಾದ್ರೆ ಸರ್ಕಾರದ ಸವಲತ್ತುಗಳನ್ನು ನಿಲ್ಲಿಸಲಾಗುವುದು : ಸಚಿವ ಮಾಧುಸ್ವಾಮಿ

ತುಮಕೂರು :

         ಎಸ್ ಸಿ, ಎಸ್ ಟಿ ಸಮುದಾಯದವರು ಮತಾಂತರ ಆದ್ರೆ, ಮತಾಂತರದ ಬಳಿಕ ಸರ್ಕಾರ ನೀಡುತ್ತಿರುವ ಸವಲತ್ತುಗಳನ್ನ ನಿಲ್ಲಿಸಲಾಗುತ್ತದೆ ಎಂದು ಕಾನೂನು ಸಚಿವ ಮಾಧುಸ್ವಾಮಿ ಹೇಳಿದ್ದಾರೆ

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮತಾಂತರ ಆದವರು ಎಸ್ ಸಿ, ಎಸ್ ಟಿ ಆಗಿದ್ದರೇ ಮತಾಂತರ ಬಳಿಕ ಸರ್ಕಾರ ನೀಡುತ್ತಿರುವ ಸವಲತ್ತುಗಳನ್ನ ನಿಲ್ಲಿಸಲಾಗುತ್ತದೆ.

     ಈವರೆಗೆ ಮತಾಂತರ ಆದವರ ಮಾಹಿತಿ ಸರ್ಕಾರದ ದಾಖಲೆಗಳಲ್ಲಿ ಅಧಿಕೃತವಾಗಿ ದಾಖಲಾಗಬೇಕು. ಮತಾಂತರ ಮಾಹಿತಿ ಸರ್ವಿಸ್ ಹಿಸ್ಟರಿಗೆ ಎಂಟ್ರಿಯಾಗಬೇಕು. ಮಕ್ಕಳ ಬರ್ತ್ ಸರ್ಟಿಫಿಕೆಟ್, ಶಾಲಾ ದಾಖಲಾತಿಗಳಲ್ಲಿ ಮತಾಂತರವಾಗಿರುವ ಬಗ್ಗೆ ಮಾಹಿತಿ ದಾಖಲು ಮಾಡಬೇಕು ಎಂದು ತಿಳಿಸಿದ್ದಾರೆ.

ಸ್ವಯಂಪ್ರೇರಿತರಾಗಿ ಮತಾಂತರವಾಗುವುದಕ್ಕೆ ಅಡ್ಡಿಯಿಲ್ಲ. ವಿಧಾನ ಪರಿಷತ್​ನಲ್ಲಿಯೂ ವಿಧೇಯಕ ಮಂಡಿಸುತ್ತೇವೆ. ಜನವರಿಯಲ್ಲಿ ವಿಧೇಯಕ ಮಂಡಿಸುತ್ತೇವೆ ಎಂದು ಹೇಳಿದ್ದಾರೆ

ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ

Recent Articles

spot_img

Related Stories

Share via
Copy link
Powered by Social Snap