ಒಳಮಠ ಮತ್ತು ಹೊರಮಠ ದೇವಸ್ಥಾನಗಳಿಗೆ ಬೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದ ಶಾಸಕ .

ನಾಯಕನಹಟ್ಟಿ :

    ರಾಜ್ಯ ವಿಧಾನ ಸಭಾ ಚುನಾವಣೆಯಲ್ಲಿ 7 ಬಾರಿ ಗೆದ್ದು ಸೋಲಿಲ್ಲದ ಸರದಾರ ಎಂದು ಎನಿಸಿಕೊಂಡಿರುವ ಶಾಸಕ ಎನ್.ವೈ.ಗೋಪಾಲಕೃಷ್ಣ ರವರು ನನಗೆ ಸಚಿವ ಸ್ಥಾನ ಲಭಿಸಲಿ ಎಂದು ಕಾಯಕ ಯೋಗಿ ಶ್ರೀ ಗುರು ತಿಪ್ಪೇರುದ್ರಸ್ವಾಮಿಯ ಸನ್ನಿಧಿಯಾದ ಒಳಮಠ ಮತ್ತು ಹೊರಮಠ ದೇವಸ್ಥಾನಗಳಿಗೆ ಬೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದರು.

   ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಮೊಳಕಾಲ್ಮೂರು ಕ್ಷೇತ್ರದಲ್ಲಿ ಮಳೆಯಾಶ್ರಿತ ಬೆಳೆಯಾಗಿರುವ ಶೇಂಗಾ ಬೆಳೆಯನ್ನು ಬೆಳೆಯಲಾಗುತ್ತದೆ. ಪ್ರಸ್ತುತ ಕೃಷಿ ಇಲಾಖೆಯಿಂದ ನೀಡಲಾಗುತ್ತಿರುವ ಶೇಂಗಾ ದರ ಏರಿಕೆಯಿಂದ ರೈತರು ಕಂಗಾಲಾಗಿದ್ದಾರೆ. ಆದ್ದರಿಂದ ಕೃಷಿ ಇಲಾಖೆಯ ಅಧಿಕಾರಿಗಳೊಂದಿಗೆ ಚರ್ಚಿಸಿ ದರ ಕಡಿತಗೊಳಿಸುವಂತೆ ಸಚಿವರಿಗೆ ಪತ್ರ ಬರೆಯಲಾಗುವುದು ಎಂದು ಭರವಸೆ ನೀಡಿದರು.

   ಪಟ್ಟಣದಲ್ಲಿ ನಿರ್ಮಾಣವಾಗುತ್ತಿರುವ ಇಂದಿರಾ ಕ್ಯಾಂಟೀನ್ ಕಟ್ಟಡ ಕಾಮಗಾರಿಯನ್ನು ವಿಕ್ಷಿಸಿ, ಶೀಘ್ರವಾಗಿ ಕಾಮಗಾರಿ ಪೂರ್ಣಗೊಳಿಸುವಂತೆ ಅಧಿಕಾರಿಗಳಿಗೆ ಸೂಚಿಸಿದರು. ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣ ನಿರ್ಮಿಸಿದರೆ ಪಂಚಾಯಿತಿಗೆ ಯಾವುದೇ ರೀತಿಯ ಅನುದಾನ ಬರುವುದಿಲ್ಲ. ಆದ್ದರಿಂದ ಬಸ್ ನಿಲ್ದಾಣ ನಿರ್ಮಿಸಲು ನಿಗದಿಗೊಳಿಸಿರುವ ಸ್ಥಳದಲ್ಲಿ ಸಾರ್ವಜನಿಕ ಬಸ್ ನಿಲ್ದಾಣ ನಿರ್ಮಿಸಿದಲ್ಲಿ ಸುತ್ತಲೂ ಮಳಿಗೆಗಳನ್ನು ನಿರ್ಮಿಸಿದರೆ ಇದರಿಂದ ಪಂಚಾಯಿತಿಗೂ ಆಧಾಯ ಬರಲಿದೆ ಎಂಬ ಉದ್ದೇಶದಿಂದ ಸಾರ್ವಜನಿಕ ಬಸ್ ನಿಲ್ದಾಣ ನಿರ್ಮಿಸಲು ಸೂಚಿಸಿದರು.

   ಈ ಸಂದರ್ಭದಲ್ಲಿ ನಾಯಕನಹಟ್ಟಿ ಕೃಷಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷ ಹಾಗೂ ಪ.ಪಂ ಸದಸ್ಯ ಜೆ.ಆರ್.ರವಿಕುಮಾರ್, ತಳಕು & ನಾಯಕನಹಟ್ಟಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ನಾಗೇಶ್ ರೆಡ್ಡಿ, ವಕೀಲರಾದ ಉಮಾಪತಿ, ಕಾಂಗ್ರೆಸ್ ಮುಖಂಡ ಪ್ರಭುಸ್ವಾಮಿ, ಮಲ್ಲೂರಹಳ್ಳಿ ಗ್ರಾ.ಪಂ.ಮಾಜಿ ಉಪಾಧ್ಯಕ್ಷ ಹಾಲಿ ಸದಸ್ಯ ಮಲ್ಲೂರಹಳ್ಳಿ ಕಾಟಯ್ಯ, ಜಿ.ತಿಪ್ಪೇಸ್ವಾಮಿ, ಜೋಗಿಹಟ್ಟಿ ಹೆಚ್.ಬಿ.ತಿಪ್ಪೇಸ್ವಾಮಿ, ಶಂಕರಮೂರ್ತಿ, ಮಾಜಿ ಪ.ಪಂ.ಸದಸ್ಯ ಟಿ.ಬಸಪ್ಪನಾಯಕ, ಮಾಜಿ ಗ್ರಾ.ಪಂ. ಸದಸ್ಯ ಆರ್.ಶ್ರೀಕಾಂತ್, ಜಿ.ಬಿ.ಮುದಿಯಪ್ಪ, ಬ್ಯಾಂಕ್ ಸೂರನಾಯಕ, ಬಂಡೆಕಪಿಲೆ ಓಬಣ್ಣ, ಮಾಜಿ ತಾಲ್ಲೂಕು ಪಂ. ಅಧ್ಯಕ್ಷ ಕೆ.ಟಿ.ತಿಪ್ಪೇಸ್ವಾಮಿ, ಪ.ಪಂ.ಸದಸ್ಯ ಸೈಯದ್ ಅನ್ವರ್, ವಕೀಲ ಅಶ್ವಥ್ ನಾಯಕ, ಗುತ್ತಿಗೆದಾರ ಗುಂಡುಮುಣಗು ಪ್ರಕಾಶ್, ವರವು ಕಾಟಯ್ಯ, ಓಬಳೇಶ್, ಪ.ಪಂ.ಮುಖ್ಯಾಧಿಕಾರಿ ಓ.ಶ್ರೀನಿವಾಸ್, ಪೊಲೀಸ್ ಸಿಬ್ಬಂದಿ, ಕಾಂಗ್ರೆಸ್ ಪಕ್ಷದ ಮುಖಂಡರುಗಳು ಮತ್ತು ಇನ್ನೂ ಮುಂತಾದವರು ಇದ್ದರು.

Recent Articles

spot_img

Related Stories

Share via
Copy link