ಕಾಂಗ್ರೆಸ್ ದ್ವೇಷ ಹರಡುವ ಕಾರ್ಖಾನೆ: ಪ್ರಧಾನಿ ಮೋದಿ ಕಿಡಿ

ಮುಂಬೈ:

   ಹರಿಯಾಣ ವಿಧಾನಸಭೆ ಚುನಾವಣೆಯಲ್ಲಿ ಹೀನಾಯ ಸೋಲು ಅನುಭವಿಸಿದ ಕಾಂಗ್ರೆಸ್ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ ಪ್ರಧಾನಿ ನರೇಂದ್ರ ಮೋದಿ, ಕಾಂಗ್ರೆಸ್ ಬೇಜವಾಬ್ದಾರಿ ಪಕ್ಷ ಮತ್ತು ಹಿಂದೂಗಳನ್ನು ವಿಭಜಿಸಲು, ಒಂದು ಸಮುದಾಯವನ್ನು ಮತ್ತೊಂದು ಸಮುದಾಯದ ವಿರುದ್ಧ ಎತ್ತಿಕಟ್ಟಲು “ದ್ವೇಷವನ್ನು ಹರಡುವ” ಕಾರ್ಖಾನೆಯಾಗಿದೆ ಎಂದು ಬುಧವಾರ ಟೀಕಿಸಿದ್ದಾರೆ.

  ಹರಿಯಾಣ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಜಯಭೇರಿ ಬಾರಿಸಿದೆ ಮತ್ತು ಇದು ದೇಶದ ಮನಸ್ಥಿತಿಯನ್ನು ತೋರಿಸುತ್ತದೆ ಎಂದ ಮೋದಿ, “ಮಹಾರಾಷ್ಟ್ರದಲ್ಲಿ ನಾವು ದೊಡ್ಡ ಗೆಲುವು ಪಡೆಯಬೇಕು” ಎಂದು ಹೇಳಿದರು.

  ಇಂದು ವರ್ಚುವಲ್ ಮೂಲಕ ಮಹಾರಾಷ್ಟ್ರದಲ್ಲಿ 7,600 ಕೋಟಿ ರೂ. ಹೆಚ್ಚು ಮೊತ್ತದ ವಿವಿಧ ಅಭಿವೃದ್ಧಿ ಯೋಜನೆಗಳನ್ನು ಉದ್ಘಾಟಿಸಿದ ನಂತರ ಮಾತನಾಡಿದ ಮೋದಿ, ವಿರೋಧ ಪಕ್ಷವಾದ ಮಹಾ ವಿಕಾಸ್ ಅಘಾಡಿ(MVA) ಅಧಿಕಾರ ಪಡೆಯಲು ಮಹಾರಾಷ್ಟ್ರವನ್ನು ದುರ್ಬಲಗೊಳಿಸಲು ಬಯಸಿದೆ. ಆದರೆ ಆಡಳಿತಾರೂಢ ಮಹಾಯುತಿಯು ರಾಜ್ಯವನ್ನು ಬಲಪಡಿಸುತ್ತದೆ ಎಂದರು.ಯೋಜನೆಗಳ ತ್ವರಿತ ಅಭಿವೃದ್ಧಿಯನ್ನು ಮಹಾರಾಷ್ಟ್ರ ಹಿಂದೆಂದೂ ಕಂಡಿರಲಿಲ್ಲ. ಹಿಂದೆ ಕಾಂಗ್ರೆಸ್ ಆಡಳಿತದಲ್ಲಿ, ಭ್ರಷ್ಟಾಚಾರದ ಅತಿ ವೇಗವಾಗಿತ್ತು ಎಂದು ಪ್ರಧಾನಿ ಮೋದಿ ಆರೋಪಿಸಿದರು.

  “ಕಾಂಗ್ರೆಸ್ ಒಂದು ಬೇಜವಾಬ್ದಾರಿ ಪಕ್ಷ ಮತ್ತು ದ್ವೇಷವನ್ನು ಹರಡುವ ಕಾರ್ಖಾನೆಯಾಗಿದೆ. ಕಾಂಗ್ರೆಸ್ ಗೆ ಅಭಿವೃದ್ಧಿ ಮತ್ತು ಪರಂಪರೆಯ ಬಗ್ಗೆ ಕಾಳಜಿಯಿಲ್ಲ. ನಾವು ಎರಡರ ಬಗ್ಗೆಯೂ ಗಮನ ಹರಿಸಿದ್ದೇವೆ” ಎಂದು ಹೇಳಿದರು.ಬಡವರು, ರೈತರು, ಯುವಕರು ಮತ್ತು ಮಹಿಳೆಯರ ಅಭಿವೃದ್ಧಿಯೊಂದಿಗೆ ವಿಕ್ಷಿತ್ ಭಾರತ್ ನಮ್ಮ ಗುರಿಯಾಗಿದೆ ಎಂದು ಪ್ರಧಾನಿ ಹೇಳಿದರು.

Recent Articles

spot_img

Related Stories

Share via
Copy link