ಕರ್ನಾಟಕ ಪ್ರವೇಶಿಸಿದ ಮುಂಗಾರು ; ಭಾನುವಾರದಿಂದ ಭಾರೀ ಮಳೆ!!

ಬೆಂಗಳೂರು:

      ಅವಧಿಗೂ ಮುನ್ನವೇ ಮುಂಗಾರು ರಾಜ್ಯ ಕರಾವಳಿಯನ್ನು ಪ್ರವೇಶಿಸಿದ್ದು, ಭಾನುವಾರದಿಂದ ರಾಜ್ಯದೆಲ್ಲೆಡೆ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

      ವಾಡಿಕೆಯಂತೆ ಜೂನ್ 1ರಂದು ನೈಋತ್ಯ ಮುಂಗಾರು ಕೇರಳವನ್ನು ಪ್ರವೇಶ ಮಾಡಿತ್ತು. ಕೇರಳ ಪ್ರವೇಶಿಸಿದ ಒಂದೆರಡು ದಿನಗಳಲ್ಲಿ ಮುಂಗಾರು ರಾಜ್ಯದ ಕರಾವಳಿಗೂ ಆಗಮಿಸುವುದು ವಾಡಿಕೆ.

      ಕೇರಳ ಪ್ರವೇಶಿಸಿದ ಮುಂಗಾರು ದುರ್ಬಲವಾಗಿದ್ದರಿಂದ ರಾಜ್ಯಕ್ಕೆ ಆಗಮಿಸುವುದರಲ್ಲಿ ವಿಳಂಬವಾಗಲಿದೆ ಎಂದು ಹೇಳಲಾಗಿತ್ತು, ಆದರೆ ಗುರುವಾರವೇ ಕರಾವಳಿ, ಮಲೆನಾಡು ಜಿಲ್ಲೆಗಳಿಗೆ ಮುಂಗಾರು ಆಗಮನವಾಗಿದೆ ಎಂದು ಹವಾಮಾನ ಇಲಾಖೆ ಹೇಳಿದೆ.

      ಜೂನ್ 7ರಿಂದ 9ರ ತನಕ ಭಾರಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

      ಇದರಿಂದಾಗಿ ಮುಂಗಾರುಮಳೆಯನ್ನೇ ಕಾಯುತ್ತಿದ್ದ ರೈತರಿಗೆ ಬಿತ್ತನೆ ಚಟುವಟಿಕೆ ಕೈಗೊಳ್ಳಲು ಅನುಕೂಲವಾಗಿದೆ.

ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ

 

Recent Articles

spot_img

Related Stories

Share via
Copy link