BDA ಮಾದರಿಯಲ್ಲೇ ಮುಡಾಗೆ ಪ್ರತ್ಯೇಕ ಕಾಯ್ದೆಗೆ ಅಸ್ತು ಎಂದ ಸಂಪುಟ …!

ಬೆಂಗಳೂರು

    ಮುಡಾ ವಿವಾದ ಬೆನ್ನಲ್ಲೇ ಪ್ರತ್ಯೇಕ ಕಾಯ್ದೆಗೆ ರಚನೆಗೆ ಸರ್ಕಾರ ಅಸ್ತು ಎಂದಿದೆ.  ಆ ಮೂಲಕ ಬೆಳಗಾವಿ ಸುವರ್ಣಸೌಧದಲ್ಲಿ ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ಮಹತ್ವದ ನಿರ್ಧಾರ ಕೈಗೊಳ್ಳಲಾಗಿದೆ. ಬಿಡಿಎ ಮಾದರಿಯಲ್ಲೇ ಮುಡಾಗೆ ಪ್ರತ್ಯೇಕೆ ಕಾಯ್ದೆ ರಚನೆಯಾಗಲಿದ್ದು, ಮುಂದಿನ ವಾರ ಅಧಿವೇಶನದಲ್ಲಿ ಬಿಲ್ ಮಂಡನೆಯಾಗಲಿದೆ.

   ಈ ಮೊದಲು 100ಕ್ಕೂ ಹೆಚ್ಚು ರಾಜಕೀಯ ನಾಯಕರೇ ಮುಡಾ ಸದಸ್ಯರಾಗಿದ್ದರು. ಹಾಗಾಗಿ ನೂತನ ಕಾಯ್ದೆ ಪ್ರಕಾರ 3 ರಿಂದ 4 ರಾಜಕೀಯ ನಾಯಕರಿಗಷ್ಟೇ ಸದಸ್ಯರಾಗಲು ಅವಕಾಶವಿರುತ್ತದೆ. ನೂತನ ಕಾಯ್ದೆ ಪ್ರಕಾರ ಬಹುತೇಕ ಅಧಿಕಾರಿಗಳಿಗೆ ಹೆಚ್ಚು ಅವಕಾಶವಿರಲಿದ್ದು, ಬಿಡಿಎ ಮಾದರಿಯಲ್ಲಿ ಅಧಿಕಾರಿಗಳು ಬೋರ್ಡ್​​​ನಲ್ಲಿರುತ್ತಾರೆ.
   ಇತ್ತೀಚೆಗೆ ಮುಡಾ ಹಗರಣದ ಸಂಬಂಧ ಈಗಾಗಲೆ ಮೈಸೂರಿನಲ್ಲಿ ಲೋಕಾಯುಕ್ತ ಅಧಿಕಾರಿಗಳು ಹಗರಣ ಸಂಬಂಧ ವಿಚಾರಣೆ ನಡೆಸಿದ್ದಾರೆ. ಮತ್ತೊಂದು ಕಡೆ ಬೆಂಗಳೂರಿನಲ್ಲಿ ಇಡಿ ಅಧಿಕಾರಿಗಳು ಕೂಡ ತನಿಖೆ ಮುಂದುವರಿಸಿದ್ದಾರೆ. ಹಗರಣ ಸಂಬಂಧ ದೂರುದಾರ ಸ್ನೇಹಮಹಿ ಕೃಷ್ಣ ನಿನ್ನೆ ಮತ್ತೆ ವಿಚಾರಣೆಗೆ ಹಾಜರಾಗಿದ್ದರು.
  ಮುಡಾ ಹಗರಣ ಸಂಬಂಧ ದೂರುದಾರ ಸ್ನೇಹಮಹಿ ಕೃಷ್ಣರನ್ನು ಇಡಿ ಅಧಿಕಾರಿಗಳು ನಿನ್ನೆ ವಿಚಾರಣೆ ನಡೆಸಿದ್ದರು. ಪ್ರಕರಣ ಸಂಬಂಧ ಹೆಚ್ಚಿನ ಮಾಹಿತಿ ಪಡೆಯುವ ಉದ್ದೇಶಕ್ಕಾಗಿ ಸ್ನೇಹಮಹಿ ಕೃಷ್ಣಗೆ ಇಡಿ ಬುಲಾವ್ ನೀಡಿತ್ತು. ಅದರಂತೆ ಬೆಳಿಗ್ಗೆ ಶಾಂತಿನಗರದ ಇಡಿ ಕಚೇರಿಗೆ ಕೆಲವು ದಾಖಲೆಗಳ ಸಮೇತ ಬಂದಿದ್ದ ಕೃಷ್ಣ ಇಡಿ ಅಧಿಕಾರಿಗಳು ಕೇಳಿದ ಮಾಹಿತಿ ನೀಡಿದ್ದರು.ಸದ್ಯ ಮುಡಾ ಪ್ರಕರಣ ಲೋಕಾಯುಕ್ತ ತನಿಖೆ, ಇಡಿ ತನಿಖೆ ಮಧ್ಯೆ ನ್ಯಾಯಾಲಯದಲ್ಲೂ ಬಿಸಿ ಏರಿದೆ. ಈ ಮಧ್ಯೆ ಸ್ನೇಹಮಹಿ ಕೃಷ್ಣ ಇಡಿ ವಿಚಾರಣೆಗೆ ಹಾಜರಾಗಿದ್ದು, ತನಿಖೆಯ ಕುತೂಹಲ ಹೆಚ್ಚಿಸಿತ್ತು.

Recent Articles

spot_img

Related Stories

Share via
Copy link