ಹಳೆಯ ದ್ವೇಷಕ್ಕೆ ಹರಿದ ನೆತ್ತರು: ಮಗನ ಜೀವ ಉಳಿಸಲು ಹೋಗಿ ಬಲಿಯಾದ ತಾಯಿ

ಶಿವಮೊಗ್ಗ

     ಮಗನ ಮೇಲಿನ ದಾಳಿಯನ್ನು ತಡೆಯಲು ಹೋಗಿ ಮಹಿಳೆಯೋರ್ವರು ಬರ್ಬರವಾಗಿ ಕೊಲೆಯಾಗಿರುವ ಘಟನೆ ಶಿವಮೊಗ್ಗ ತಾಲೂಕು ದುಮ್ಮಳ್ಳಿ ಗ್ರಾಮದ ಸಿದ್ದೇಶ್ವರ ಬಡಾವಣೆಯಲ್ಲಿ ನಡೆದಿದೆ. ಗಂಗಮ್ಮ (45) ಮೃತ ದುರ್ದೈವಿಯಾಗಿದ್ದು, ಆರೋಪಿಗಳಾದ ಹರೀಶ್ ಮತ್ತು ನಾಗೇಶ್​ರನ್ನು ಪೊಲೀಸರು ಬಂಧಿಸಿದ್ದಾರೆ. ಆರೋಪಿಗಳು ಮಚ್ಚಿನಿಂದ ದಾಳಿ ಮಾಡಿರುವ ಪರಿಣಾಮ ಗಂಭೀರವಾಗಿ ಗಾಯಗೊಂಡಿದ್ದ ಗಂಗಮ್ಮ ತೀವ್ರ ರಕ್ತಸ್ರಾವದಿಂದ ಸ್ಥಳದಲ್ಲೇ ಮೃತಪಟ್ಟಿದ್ದಾರೆ.

   ಮೃತ ಗಂಗಮ್ಮ ಅವರ ಮಗ ಜೀವನ್​ ಮೇಲೆ ಆರೋಪಿಗಳಿಗೆ ಹಳೆಯ ದ್ವೇಷ ಇತ್ತು ಎನ್ನಲಾಗಿದೆ. ಈ ಹಿಂದೆ ಇದೇ ದುಮ್ಮಳ್ಳಿ ಗ್ರಾಮದಲ್ಲಿ ಜೀವನ್ ಸಂಬಂಧಿಕರ ಮನೆ ಬಾಡಿಗೆ ಪಡೆದು ನಾಗೇಶ್​ ಮತ್ತು ಹರೀಶ್​ ನೆಲೆಸಿದ್ದರು. ಆದರೆ ಬಾಡಿಗೆ ಹಣ ನೀಡಿರಲಿಲ್ಲ. ಹೀಗಾಗಿ ಊರಿನ ಸರ್ಕಲ್​ನಲ್ಲಿ ಹಣ ನೀಡುವಂತೆ ಜೀವನ್​ ಕೇಳಿದ್ದ. ಆ ವೇಳೆ ಇವರ ನಡುವೆ ಗಲಾಟೆ ನಡೆದಿತ್ತು. ಆ ಬಳಿಕ ಜೀವನ್​ ಮನೆ ಮುಂಭಾಗವೇ ಇರುವ ಮನೆಯಲ್ಲಿ ಬಂದು ನೆಲೆಸಿದ್ದ ಆರೋಪಿಗಳು, ಜೀವನ್​​ಗೆ ಗುರಾಯಿಸಿಕೊಂಡೇ ಓಡಾಡುತ್ತಿದ್ದರು. ಇವರ ನಡುವೆ ಆಗಾಗ ಸಣ್ಣ ಪುಟ್ಟ ಗಲಾಟೆ ಸಹ ನಡೆಯುತ್ತಿತ್ತು ಎನ್ನಲಾಗಿದೆ.

Recent Articles

spot_img

Related Stories

Share via
Copy link