ಚಿತ್ರದುರ್ಗ:
ಲೈಂಗಿಕ ಕಿರುಕುಳ ಪ್ರಕರಣದಲ್ಲಿ ಒಂದು ವರ್ಷ ಹಿಂದೆ ಜೈಲು ಪಾಲಾಗಿ ನಾಲ್ಕು ದಿನಗಳ ಹಿಂದೆ ಜಾಮೀನು ಮೇಲೆ ಹೊರಬಂದಿದ್ದ ಚಿತ್ರದುರ್ಗದ ಮರುಘಾ ಮಠದ ಡಾ ಶಿವಮೂರ್ತಿ ಮುರುಘಾ ಶರಣರಿಗೆ ಮತ್ತೆ ಬಂಧನ ಭೀತಿ ಎದುರಾಗಿದೆ.
ಚಿತ್ರದುರ್ಗದ 2ನೇ ಅಪರ ಜಿಲ್ಲಾ & ಸತ್ರ ನ್ಯಾಯಾಲಯದಿಂದ ಶರಣರ ವಿರುದ್ಧ ಅರೆಸ್ಟ್ ವಾರಂಟ್ ಜಾರಿಯಾಗಿದೆ. ಯಾವುದೇ ಕ್ಷಣದಲ್ಲಿ ಶಿವಮೂರ್ತಿ ಮುರುಘಾ ಶರಣರ ಬಂಧನವಾಗುವ ಸಾಧ್ಯತೆಯಿದೆ.
2ನೇ ಪೋಕ್ಸೋ ಕೇಸ್ನಲ್ಲಿ ಅರೆಸ್ಟ್ ವಾರಂಟ್ ಜಾರಿ ಮಾಡಿದ ಕೋರ್ಟ್, 1ನೇ ಪೋಕ್ಸೋ ಕೇಸ್ನಲ್ಲಿ ಹೈಕೋರ್ಟ್ನಿಂದ ಜಾಮೀನು ಹಿನ್ನೆಲೆ ಬಿಡುಗಡೆ ಮಾಡಲಾಗಿತ್ತು. ಈಗ ಮತ್ತೆ ಬಂಧನದ ಭೀತಿ ಎದುರಾಗಿದೆ.
