ಮೈಸೂರು :
ಮೈಸೂರಿನಲ್ಲಿ ಬುಧವಾರ ರಾತ್ರಿ ಇಡೀ ಸುರಿದ ಭಾರಿ ಯಿಂದಾಗಿ ಚಾಮುಂಡಿ ಬೆಟ್ಟದಲ್ಲಿ ಭೂಕುಸಿತ ಸಂಭವಿಸಿದೆ.
ಬೆಟ್ಟದ ಮೇಲಿರುವ ನಂದಿ ಪ್ರತಿಮೆ ಸಂಪರ್ಕಿಸುವ ರಸ್ತೆಯ ಒಂದು ಭಾಗವು ಕುಸಿದ ನಂತರ ವಾಹನ ಸಂಚಾರವನ್ನು ತಾತ್ಕಾಲಿಕವಾಗಿ ಬಂದ್ ಮಾಡಲಾಗಿದೆ ಎಂದು ಪೊಲೀಸ್ ಕಮಿಷನರ್ ಡಾ. ಚಂದ್ರಗುಪ್ತ ಮಾಹಿತಿ ನೀಡಿದ್ದಾರೆ.
ಇನ್ನು ಮೈಸೂರಿನಲ್ಲಿ ರಾತ್ರಿ ಸುರಿದ ಭಾರೀ ಮಳೆಯಿಂದಾಗಿ ನಗರದ ಹಲವು ರಸ್ತೆಗಳಲ್ಲಿ ನೀರು ನಿಂತಿದ್ದು, ವಾಹನ ಸಂಚಾರಕ್ಕೆ ತೊಂದರೆಯಾಗಿದೆ.
ಭೂಕುಸಿತದ ದುರಸ್ಥಿ ಕಾರ್ಯವನ್ನು ತ್ವರಿತವಾಗಿ ನಡೆಸಬೇಕು ಎಂದು ಸಹಕಾರ ಸಚಿವ ಎಸ್.ಟಿ.ಸೋಮಶೇಖರ್ ಜಿಲ್ಲಾಧಿಕಾರಿ ಡಾ.ಬಗಾದಿ ಗೌತಮ್ ಅವರಿಗೆ ಸೂಚನೆ ನೀಡಿದ್ದಾರೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ
